ಗ್ರಾಪಂ ಚುನಾವಣೆ: ಕೋವಿಡ್ ಮುಂಜಾಗ್ರತೆ


Team Udayavani, Dec 21, 2020, 4:52 PM IST

ಗ್ರಾಪಂ ಚುನಾವಣೆ: ಕೋವಿಡ್ ಮುಂಜಾಗ್ರತೆ

ಕಲಬುರಗಿ: ಜಿಲ್ಲೆಯಲ್ಲಿ ನಡೆಯುವ ಗ್ರಾಮ ಪಂಚಾಯಿತಿ ಚುನಾವಣೆ ಸಂದರ್ಭದಲ್ಲಿ ಮತದಾರರು ಕೊರೊನಾ ಸೋಂಕಿಗೆಹೆದರದೆ ಎಲ್ಲ ಮತದಾರರು ಮಾಸ್ಕ್ ಅಥವಾ ಫೇಸ್‌ ಸಿಲ್ಡ್‌ ಧರಿಸಿ, ಸ್ಯಾನಿಟೈಸರ್‌ ಬಳಸಿ ಸುರಕ್ಷತೆ ಕ್ರಮ ಅನುಸರಿಸಿ ಮತದಾನ ಕೇಂದ್ರಕ್ಕೆ ತೆರಳಿ ಕಡ್ಡಾಯವಾಗಿ ಮತದಾನ ಮಾಡಬೇಕೆಂದು ಜಿಲ್ಲಾ ಚುನಾವಣಾಧಿಕಾರಿಗಳಾದ ಜಿಲ್ಲಾಧಿಕಾರಿ ವಿ.ವಿ. ಜ್ಯೋತ್ಸ್ನಾ ತಿಳಿಸಿದ್ದಾರೆ.

ಕೋವಿಡ್ ಹಿನ್ನೆಲೆಯಲ್ಲಿ ರಾಜ್ಯ ಚುನಾವಣೆ ಆಯೋಗ ಕೆಲವು ನಿರ್ದೇಶನ ನೀಡಿದೆ. ಅದರಂತೆ ಜಿಲ್ಲಾಡಳಿತಹಾಗೂ ತಾಲೂಕು ಆಡಳಿತ ಸಾಕಷ್ಟು ಮುಂಜಾಗೃತಾ ಕ್ರಮ ಕೈಗೊಂಡಿವೆ. ಚುನಾವಣೆ ಪಕ್ಷ ರಹಿತ ಆಗಿರುವುದರಿಂದ ಹಾಗೂ ಕ್ಷೇತ್ರದ ವ್ಯಾಪ್ತಿಯು ಬಹಳ ಚಿಕ್ಕದಿರುವುದರಿಂದ ಅಭ್ಯರ್ಥಿಗಳ ಪ್ರಚಾರವು ಕ್ಷೇತ್ರಕ್ಕೆ ಸೀಮಿತವಾಗಿರುತ್ತದೆ. ಕಡಿಮೆಬೆಂಬಲಿಗರೊಂದಿಗೆ ಸಾಮಾಜಿಕ ಅಂತರ ಕಾಯ್ದುಕೊಂಡುಮನೆ-ಮನೆಗೆ ಭೇಟಿ ನೀಡಿ ಪ್ರಚಾರ ಮಾಡಬಹುದಾಗಿದೆ. ಪ್ರಚಾರದ ಸಂದರ್ಭದಲ್ಲಿ ಅಭ್ಯರ್ಥಿಗಳು ಮತ್ತು ಅವರ ಬೆಂಬಲಿಗರು ಕಡ್ಡಾಯವಾಗಿ ಫೇಸ್‌ ಮಾಸ್ಕ್ ಧರಿಸಬೇಕೆಂದು ಸೂಚಿಸಿದ್ದಾರೆ. ಆದಷ್ಟು ಎಲೆಕ್ಟ್ರಾನಿಕ್‌ ಮೀಡಿಯಾದಲ್ಲೂ ಪ್ರಚಾರ ಮಾಡಬಹುದು. ಅಭ್ಯರ್ಥಿಗಳು ಪ್ರಚಾರಕ್ಕಾಗಿನಿಯಮಾನುಸಾರ ಮುದ್ರಿಸಿದ ಕರಪತ್ರಗಳನ್ನು ಹಂಚಬಹುದು. ಕರಪತ್ರ ಹಂಚುವವರು ಸಹ ಕಡ್ಡಾಯವಾಗಿ ಫೇಸ್‌ ಮಾಸ್ಕ್,ಹ್ಯಾಂಡ್‌ ಗ್ಲೌಸ್‌ ಧರಿಸಬೇಕು. ಹ್ಯಾಂಡ್‌ ಸ್ಯಾನಿಟೈಸರ್‌ಉಪಯೋಗಿಸಬೇಕು. ಗುಂಪು-ಗುಂಪಾಗಿ ಪ್ರಚಾರ ಮಾಡುವಂತಿಲ್ಲ. ಕೋವಿಡ್ ಪಾಸಿಟಿವ್‌ ಅಭ್ಯರ್ಥಿಗಳು ಎಲೆಕ್ಟ್ರಾನಿಕ್‌ ಮಾಧ್ಯಮದಲ್ಲಿ ಪ್ರಚಾರ ಮಾಡಬಹುದಾಗಿದೆ. ಖುದ್ದಾಗಿ ಸಾಮಾನ್ಯ ಜನರೊಂದಿಗೆ, ಸಮುದಾಯದಲ್ಲಿ ಪ್ರಚಾರ ಮಾಡಲು ಅವಕಾಶವಿರುವುದಿಲ್ಲ ಎಂದು ತಿಳಿಸಿದ್ದಾರೆ.

ಮತಚಲಾವಣೆ: ಮತದಾರರು ಚಲಾಯಿಸಲು ಕೊಠಡಿಗೆ ಪ್ರವೇಶಿಸುವ ಮುಂಚಿತವಾಗಿ ಕೋವಿಡ್ ಮುಂಜಾಗ್ರತಾ ಕ್ರಮ ಕೈಗೊಂಡಿರಬೇಕು. ಮತದಾನ ಕೇಂದ್ರದಲ್ಲಿ ಮಹಿಳಾ ಮತ್ತು ಪುರುಷ ಮತದಾರರಿಗೆ ಪ್ರತ್ಯೇಕ ಸರತಿ ಸಾಲುಗಳಲ್ಲಿ ಸಾಮಾಜಿಕ ಅಂತರ ಕಾಯ್ದುಕೊಂಡು ನಿಲ್ಲಿಸಬೇಕು. ಮತದಾರನ ಗುರುತು ಪರಿಶೀಲಿಸಿದ ನಂತರ ಅವರು ತಂದಿರುವ ಗುರುತಿನ ಚೀಟಿ ಡಬ್ಬದಲ್ಲಿ ಹಾಕುವಂತೆ ತಿಳಿಸಬೇಕು. ಮತದಾರರ ಬೆರಳಿಗೆ ಅಳಿಸಲಾಗದ ಶಾಯಿ ಹಾಕಬೇಕು. ಸೋಂಕಿನ ವ್ಯಕ್ತಿಗಳೂ ಮತ ಚಲಾಯಿಸಲು ಹಕ್ಕುಳ್ಳವರಾಗಿದ್ದು, ಇವರಿಗೆ ಅಂಚೆ ಮತಪತ್ರ ನೀಡಲಾಗುವುದು ಎಂದು ಜಿಲ್ಲಾಧಿಕಾರಿಗಳು ಹೇಳಿದ್ದಾರೆ.

ಪೋಲಿಂಗ್‌ ಅಧಿಕಾರಿ ಮತದಾರರಿಗೆ ಮತಪತ್ರ ವಿತರಿಸಬೇಕು. ಕೌಂಟರ್‌ ಫೈಲ್‌ನಲ್ಲಿ ಸಹಿ ಅಥವಾ ಹೆಬ್ಬೆರಳಿನ ಗುರುತು ಪಡೆಯಬೇಕು. ನಂತರ ಮತಪೆಟ್ಟಿಗೆಯಲ್ಲಿ ಮತ ಹಾಕಬೇಕು. ಮತಪೆಟ್ಟಿಗೆಯನ್ನು ಮತದಾರರು ಮುಟ್ಟಲುಅವಕಾಶ ನೀಡಬಾರದು. ಮತದಾನ ಮುಕ್ತಾಯವಾದ ಕೂಡಲೇ ಮತಪೆಟ್ಟಿಗೆ ಸೀಲ್‌ ಮಾಡಿ ಅಗತ್ಯ ದಾಖಲಾತಿ ಸಿದ್ಧಪಡಿಸಿಕೊಂಡು, ಭದ್ರತಾ ಕೊಠಡಿಗೆ ಕೊಂಡೊಯ್ಯಬೇಕು. ಈ ಚುನಾವಣೆ ಮತಪತ್ರದಲ್ಲಿ ನೋಟಾಗೆ ಅವಕಾಶವಿರುವುದಿಲ್ಲ ಎಂದು ತಿಳಿಸಿದ್ದಾರೆ.

ಕೋವಿಡ್ ಸೋಂಕಿತರಿಗೂ ಮತದಾನಕ್ಕೆ  ಅವಕಾಶ ;

ಕೋವಿಡ್ ಸೋಂಕಿತರು ಹಾಗೂ ಮತದಾನದ ದಿನ ತಪಾಸಣೆಯಿಂದ ಪತ್ತೆಯಾದ ಶಂಕಿತರು ಮತಗಟ್ಟೆಗಳಿಗೆ ತೆರಳಿ ಖುದ್ದು ಮತದಾನ ಮಾಡಲು ಇಚ್ಛಿಸಿದಲ್ಲಿ ಈ ಬಗ್ಗೆ ರಿಟರ್ನಿಂಗ್‌ ಅಧಿ ಕಾರಿಗಳು ಅಥವಾ ಆರೋಗ್ಯ ಅಧಿಕಾರಿಗಳಿಗೆ ಲಿಖೀತ ಮನವಿ ಸಲ್ಲಿಸಬೇಕು. ಆರೋಗ್ಯ ಅಧಿ ಕಾರಿಗಳು ಮತದಾನ ಮಾಡಲು ಸಮ್ಮತಿ ನೀಡಿದಲ್ಲಿ ಸೋಂಕಿತರು ಹಾಗೂ ಶಂಕಿತರು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸಿ ಸಂಬಂಧಪಟ್ಟ ಮತಗಟ್ಟೆಗಳಿಗೆ ಕೊನೆಯ ಒಂದು ಗಂಟೆ ಅವಧಿಯಲ್ಲಿ ಆರೋಗ್ಯ ಸಿಬ್ಬಂದಿ ಮತದಾನ ಮಾಡಿಸಬೇಕು. ನಂತರ ಸ್ವಸ್ಥಾನಕ್ಕೆ ಮರಳಿ ಕರೆದುಕೊಂಡು ಹೋಗಬೇಕು. ಪ್ರತಿ ಮತಗಟ್ಟೆ ಹೊರಗಡೆ ಆರೋಗ್ಯ ಇಲಾಖೆ ಸಿಬ್ಬಂದಿ ಮತದಾರರನ್ನು ಥರ್ಮಲ್‌ ಸ್ಕ್ಯನರ್‌ ಮೂಲಕ ತಪಾಸಣೆಗೆ ಒಳಪಡಿಸಬೇಕು ಎಂದು ಜಿಲ್ಲಾಧಿಕಾರಿ ವಿ.ವಿ.ಜ್ಯೋತ್ಸ್ನಾ ತಿಳಿಸಿದ್ದಾರೆ.

ಟಾಪ್ ನ್ಯೂಸ್

1-weqewqe

Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Mallikarjun Kharge ಕ್ಷೇತ್ರದಲ್ಲಿ 19 ಚುನಾವಣೆಯಲ್ಲಿ 16 ಬಾರಿ ಗೆದ್ದ ಕಾಂಗ್ರೆಸ್‌

Mallikarjun Kharge ಕ್ಷೇತ್ರದಲ್ಲಿ 19 ಚುನಾವಣೆಯಲ್ಲಿ 16 ಬಾರಿ ಗೆದ್ದ ಕಾಂಗ್ರೆಸ್‌

Kalaburagi; ಪಾಪರ್ ಆಗಿದ್ದರೆ KKRDB ಅಭಿವೃದ್ದಿಗೆ ಹೇಗೆ ಹಣ ಕೊಡುತ್ತಿದ್ದೇವು?: ಖಂಡ್ರೆ

Kalaburagi; ಪಾಪರ್ ಆಗಿದ್ದರೆ KKRDB ಅಭಿವೃದ್ದಿಗೆ ಹೇಗೆ ಹಣ ಕೊಡುತ್ತಿದ್ದೆವು?: ಖಂಡ್ರೆ

Kalaburagi; ಸೋಲಿನ ಭಯದಿಂದ ಹಿಂದೆ ಸರಿದ ಡಾ.‌ಖರ್ಗೆ: ವಿಪಕ್ಷ ನಾಯಕ ಆರ್ ಅಶೋಕ

Kalaburagi; ಸೋಲಿನ ಭಯದಿಂದ ಹಿಂದೆ ಸರಿದ ಡಾ.‌ಖರ್ಗೆ: ವಿಪಕ್ಷ ನಾಯಕ ಆರ್ ಅಶೋಕ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-weqewqe

Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.