ಹಳ್ಳಿ ಕಟ್ಟೆ ಮೇಲೆ ಕಾವೇರಿದ ಚುನಾವಣೆ ಚರ್ಚೆ

ಗರಿಗೆದರಿದ ಪಕ್ಷಗಳ ರಾಜಕೀಯ ಲೆಕ್ಕಾಚಾರ ,ಹೆಸರಿಗೆ ಮಾತ್ರ ಪಕ್ಷ ರಹಿತ-ಎಲ್ಲವೂ ಬೆಂಬಲಿತ

Team Udayavani, Dec 7, 2020, 5:33 PM IST

ಹಳ್ಳಿ ಕಟ್ಟೆ ಮೇಲೆ ಕಾವೇರಿದ ಚುನಾವಣೆ ಚರ್ಚೆ

ವಾಡಿ: ರಾಜ್ಯದಲ್ಲಿ ಗ್ರಾಮ ಪಂಚಾಯತಿ ಚುನಾವಣೆ ಘೋಷಣೆಯಾಗುತ್ತಿದ್ದಂತೆ ಅಭ್ಯರ್ಥಿಗಳಾಗಲು ಪೈಪೋಟಿ ಶುರುವಾಗಿದ್ದು, ಹಳ್ಳಿ ಕಟ್ಟೆಗಳೆಲ್ಲ ಚುನಾವಣೆ ಕಾವು ಪಡೆದುಕೊಂಡಿವೆ. ಊರ ನಡುವಿನ ಅರಳಿ ಕಟ್ಟೆಗಳಲ್ಲಿ ಸಂಜೆ ಠಿಕಾಣಿ ಹೂಡುವ ಕೃಷಿಕರು ಪ್ರಸ್ತುತ ರಾಜಕಾರಣದ ಚರ್ಚೆಯಲ್ಲಿ ತೊಡಗಿದ್ದಾರೆ.

ಗ್ರಾಮದ ಆಡಳಿತದಲ್ಲಿ ಸದಸ್ಯರಾಗುವ ಹುಮ್ಮಸ್ಸಿನಲ್ಲಿರುವ ಯುವಕರು ಸ್ಪರ್ಧೆಗಿಳಿಯಲು ಈ ಬಾರಿ ಹೆಚ್ಚಿನ ಆಸಕ್ತಿ ತೋರುತ್ತಿದ್ದಾರೆ. ಗ್ರಾಮೀಣ ಜನರು ಕಾಂಗ್ರೆಸ್‌-ಬಿಜೆಪಿ ಎಂದು ಗುರುತಿಸಿಕೊಂಡಿದ್ದರಿಂದ ಪಕ್ಷ ರಹಿತ ಗ್ರಾಪಂ ಚುನಾವಣೆಯಲ್ಲೂ ಪಕ್ಷ ರಾಜಕಾರಣ ಹಿಂಬಾಗಿಲಿನಿಂದ ತಲೆಹಾಕುತ್ತಿದೆ. ಪಂಚಾಯಿತಿ ಆಡಳಿತಕ್ಕೆ ಅಧಿಪತಿಯಾಗಿ ಗ್ರಾಮಾಭಿವೃದ್ಧಿ ಕನಸು ಹೊತ್ತವರು ಒಂದೆಡೆಯಾದರೆ, ನಮ್ಮದೇ ಪಕ್ಷದ ಬೆಂಬಲಿಗರು ಹೆಚ್ಚು ಗೆಲ್ಲಬೇಕು ಎನ್ನುವ ರಾಷ್ಟ್ರೀಯ ಪಕ್ಷಗಳ ರಾಜಕೀಯ ಲೆಕ್ಕಾಚಾರ ಒಳಗೊಳಗೆ ಗರಿಗೆದರುತ್ತಿದೆ.

ಸ್ವಾತಂತ್ರ್ಯನಂತರ ಹಲವು ಗ್ರಾಮ ಸರ್ಕಾರಗಳನ್ನು ಕಂಡಿದ್ದರೂ, ಗ್ರಾಮಗಳು ಮೂಲಭೂತ ಸೌಕರ್ಯಗಳ ಕೊರತೆಯಿಂದ ಮುಕ್ತಿ ಕಂಡಿಲ್ಲ. ರಾಜ್ಯ ಸರಕಾರದಿಂದ ಹಲವು ಯೋಜನೆಗಳನ್ನು ಜಾರಿಗೆ ತಂದಿದ್ದರೂ ಜನರ ಬದುಕು ಮಾತ್ರ ಸುಧಾರಣೆ ಕಂಡಿಲ್ಲ. ಬಯಲು ಶೌಚಾಲಯ ಪದ್ಧತಿ ಶತಮಾನಗಳ ಅನಾಗರಿಕ ಆಚರಣೆಯಾಗಿದ್ದು, ಇಂದಿಗೂ ಮುಂದುವರಿದಿದೆ. ಬಚ್ಚಲು ನೀರು ಕೊಳೆಯಾಗಿ ಹದಗೆಟ್ಟ ಇಡೀ ಗ್ರಾಮದ ನೈರ್ಮಲ್ಯ ಶುಚಿತ್ವಕ್ಕಾಗಿ ಹೋರಾಟ ಮಾಡಬೇಕಾದ ಪರಿಸ್ಥಿತಿಯಿದೆ.

ಗ್ರಾಮದಸರಕಾರಿ ಶಾಲೆಗಳ ಅಂಗಳದಲ್ಲಿ ಚರಂಡಿ ನೀರು ಹರಿದರೂ ಕೇಳುವವರು ಇಲ್ಲವಾಗಿದೆ. ಬೀದಿ ದೀಪಗಳು ಕೆಟ್ಟು ಕಗ್ಗತ್ತಲು ಆವರಿಸಿದ್ದರೂ ಬೆಳಕು ಹರಿಸಲು ಅಧಿಕಾರಿಗಳೊಂದಿಗೆ ಕಾದಾಡಬೇಕಾದ ದುಸ್ಥಿತಿ ಜೀವಂತವಿದೆ. ಗುಡಿಸಲು ವಾಸಿಗಳಿಗೆ ಆಶ್ರಯ ಯೋಜನೆಯಡಿ ಸೂರು ಒದಗಿಸಲಾಗದೆ, ಮನೆಗಳು ಉಳ್ಳವರ ಪಾಲಾಗುತ್ತಿವೆ ಎಂಬುದು ಲಾಡ್ಲಾಪುರ, ಹಳಕರ್ಟಿ, ನಾಲವಾರ, ಕುಂಬಾರಹಳ್ಳಿ, ಕುಲಕುಂದಾ, ಸನ್ನತಿ, ಮಳಗ, ರಾವೂರ, ಕಮರವಾಡಿ, ಸೂಲಹಳ್ಳಿ, ಕರದಾಳ, ಅಳ್ಳೊಳ್ಳಿ, ದಂಡಗುಂಡ, ಬೆಳಗೇರಾ, ಕನಗನಹಳ್ಳಿ ಗ್ರಾಮಗಳ ಯುವಕರ ಆರೋಪವಾಗಿದೆ.

ಗೆಳೆಯರ ಗುಂಪಿನಲ್ಲಿ ಬಿರುಕು: ಗ್ರಾ.ಪಂ ಚುನಾವಣೆಗೆ ದಿನಾಂಕ ನಿಗದಿಯಾಗುತ್ತಿದ್ದಂತೆ ಸ್ಪರ್ಧಾ ಆಕಾಂಕ್ಷಿಗಳ ಪಟ್ಟಿ ಬೆಳೆಯುತ್ತಿದೆ. ಒಂದೊಂದು ವಾರ್ಡ್‌ಗಳಲ್ಲಿ ಹತ್ತಾರು ಜನರ ಮಧ್ಯೆ ಹಣಾಹಣಿ ಏರ್ಪಡುವ ಸಾಧ್ಯತೆ ಗೋಚರಿಸುತ್ತಿವೆ. ಕಳೆದ ಗ್ರಾ.ಪಂ ಚುನಾವಣೆಯಲ್ಲಿ ಕಾಂಗ್ರೆಸ್‌ ಅಥವಾ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳಾಗಿ ಗೆದ್ದವರು, ವಿಧಾನಸಭೆ ಚುನಾವಣೆ ವೇಳೆ ಬಿಜೆಪಿ ಪಾಳೆಯಕ್ಕೆ ಜಿಗಿದವರಿಗೆ ಈಗ ಕಣದಲ್ಲಿ ಎದುರಾಳಿಗಳು ಹೆಚ್ಚಾಗುತ್ತಿರುವುದು ತಲೆನೋವಾಗಿ ಪರಿಣಮಿಸಿದೆ. ಗೆಳೆಯರ ಗುಂಪಿನಲ್ಲಿ ಬಿರುಕು ಮೂಡುತ್ತಿವೆ. ಕುಟುಂಬ ಸದಸ್ಯರ ಒಗ್ಗಟ್ಟಿನಲ್ಲಿ ವೈಮನಸ್ಸಿನ ಅಲೆ ಮುನ್ನೆಲೆಗೆ ಬಂದಿದೆ. ಹಲವು ಬಿಕ್ಕಟ್ಟುಗಳ ನಡುವೆ ಗ್ರಾಮ ಸಂಘರ್ಷಕ್ಕೆ ವೇದಿಕೆ ಸಿದ್ಧವಾಗುತ್ತಿದೆ. ಹೊಸಬರೊಂದಿಗೆ ಹಳಬರೂ ಸ್ಪರ್ಧೆಗೆ ಮುಂದಾಗಿ ಅಗತ್ಯ ದಾಖಲಾತಿ ಸಿದ್ಧತೆಯಲ್ಲಿ ತೊಡಗಿದ್ದರಿಂದ ಸ್ಥಳೀಯ ಸಂಸ್ಥೆಗಳ ಚುನಾವಣೆಯ ಕಣ ಹೊಸ ಹುರುಪು ಪಡೆದುಕೊಳ್ಳುವ ಲಕ್ಷಣಗಳಿವೆ.

 

ಮಡಿವಾಳಪ್ಪ ಹೇರೂರ

ಟಾಪ್ ನ್ಯೂಸ್

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Food ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.