ನೀಲೂರು ರೈಲ್ವೆ ಸೇತುವೆಗೆ ಅನುದಾನ
Team Udayavani, Jan 20, 2022, 2:52 AM IST
ಕಲಬುರಗಿ: ಅನೇಕ ವರ್ಷಗಳಿಂದ ನನೆಗುದಿಗೆ ಬಿದ್ದಿರುವ ಅಫಜಲಪುರ ತಾಲೂಕಿನ ನೀಲೂರು ಗ್ರಾಮದ ರೈಲ್ವೆ ಕೆಳಸೇತುವೆ ನಿರ್ಮಾಣ ಕಾರ್ಯವನ್ನು ರಾಜ್ಯದ ಮೂಲ ಸೌಕರ್ಯ ಇಲಾಖೆಯಿಂದಲೇ ನಿರ್ಮಿಸಲಾಗುವುದು ಎಂದು ವಸತಿ ಹಾಗೂ ಮೂಲ ಸೌಕರ್ಯ ಖಾತೆ ಸಚಿವ ವಿ. ಸೋಮಣ್ಣ ತಿಳಿಸಿದರು.
ಮಂಗಳವಾರ ವಿಧಾನಸೌಧದಲ್ಲಿ ಸಂಸದ ಡಾ| ಉಮೇಶ ಜಾಧವ ಸೇರಿದಂತೆ ಇಲಾಖೆ ಅಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ಸಚಿವರು ಈ ವಿಷಯ ಪ್ರಕಟಿಸಿದರು. ನೀಲೂರು ಕೆಳಸೇತುವೆ ಕಾಮಗಾರಿ ವಿಸ್ತರಣೆ ಹಾಗೂ ಮೂಲ ಸೌಕರ್ಯಕ್ಕಾಗಿ ಗ್ರಾಮಸ್ಥರು ಹಾಗೂ ಆ ಭಾಗದ ಜನರು ಹಲವು ವರ್ಷಗಳಿಂದ ಹೋರಾಟ ಮಾಡುತ್ತಿದ್ದಾರೆ. ಈಗ ಅವರ ಬೇಡಿಕೆ ಈಡೇರಲಿದೆ.
ಶೀಘ್ರದಲ್ಲೇ ಕಾಮಗಾರಿಗೆ ಚಾಲನೆ ನೀಡಲಾಗುವುದು ಎಂದು ಸಚಿವರು ಘೋಷಿಸಿದರು. ಕಾಮಗಾರಿಗೆ ಅಂದಾಜು ಪಟ್ಟಿ ರೂಪಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ ಸಚಿವ ಸೋಮಣ್ಣ, ಕಾಮಗಾರಿ ಪೂರ್ಣಕ್ಕೆ ಅನುದಾನ ನಿಗದಿ ಮಾಡುವಂತೆ ನಿರ್ದೇಶನ ನೀಡಿದರು. ಸಂಸದ ಡಾ| ಉಮೇಶ ಜಾಧವ ಮಾತನಾಡಿ, ನೀಲೂರ ರೈಲ್ವೆ ಕೆಳಸೇತುವೆ ನಿರ್ಮಾಣಕ್ಕೆ ಸಚಿವ ಸೋಮಣ್ಣ ಆಸಕ್ತಿ ವಹಿಸಿ ಅನುದಾನ ನೀಡುತ್ತಿರುವುದು ಅಭಿವೃದ್ಧಿಗೆ ಪೂರಕವಾಗಿದೆ ಎಂದರು. ದಾವಣಗೆರೆ ಸಂಸದ ಸಿದ್ಧೇಶ್ವರ ಹಾಗೂ ಅಧಿಕಾರಿಗಳು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ
Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ
ಸಚಿವರು ಲೀಡ್ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್
ಮೋದಿ ರಾಷ್ಟ್ರ ಮಟ್ಟದಲ್ಲಿ ಸುಳ್ಳು ಹೇಳಿದರೆ, ಜಾಧವ್ ಜಿಲ್ಲಾ ಮಟ್ಟದಲ್ಲಿ… ಖರ್ಗೆ ವಾಗ್ದಾಳಿ
Kalaburagi; ಮೋದಿ ಗ್ಯಾರಂಟಿಗೆ ನೋ ವಾರಂಟಿ: ಸಚಿವ ಪ್ರಿಯಾಂಕ್ ಖರ್ಗೆ ಟೀಕೆ
MUST WATCH
ಹೊಸ ಸೇರ್ಪಡೆ
Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ
Udupi-ಚಿಕ್ಕಮಗಳೂರಿನಲ್ಲಿ ಬಿಜೆಪಿಗರೂ ಜೆಪಿ-ಜೆಪಿ ಎನ್ನುತ್ತಿದ್ದಾರೆ: ನಿಕೇತ್ರಾಜ್ ಮೌರ್ಯ
Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ
Gujarat Lok Sabha Constituency: ಗುಜರಾತ್ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ