ದೇಶದ ಪ್ರಗತಿಗೆ ಜಿಎಸ್‌ಟಿ ಪೂರಕ: ಕುಲಕರ್ಣಿ


Team Udayavani, Jul 10, 2017, 12:24 PM IST

10-gub-4.jpg

ಕಲಬುರಗಿ: ಭಾರತ ಸರ್ಕಾರ ಜಾರಿಗೊಳಿಸಿದ ನೂತನ ಸರಕು ಹಾಗೂ ಸೇವಾ ತೆರಿಗೆ(ಜಿಎಸ್‌ಟಿ) ದೇಶದ ಪ್ರಗತಿಗೆ ಪೂರಕ ಹಾಗೂ
ಜನಸ್ನೇಹಿಯಾಗಿದೆ. ಒಂದೇ ದೇಶ ಒಂದೇ ತೆರಿಗೆ ನೀತಿ ಇದರಲ್ಲಿದೆ. ಇದರಿಂದ ಗ್ರಾಹಕರು ಹಾಗೂ ವ್ಯಾಪಾರಿಗಳು ಯಾವುದೇ ರೀತಿಯ ಆತಂಕಪಡುವ ಅಗತ್ಯವಿಲ್ಲ ಎಂದು ವಾಣಿಜ್ಯ ತೆರಿಗೆ ಇಲಾಖೆ ಜಂಟಿ ಆಯುಕ್ತ ಪದ್ಮಾಕರ ಕುಲಕರ್ಣಿ ಹೇಳಿದರು. 

ನಗರದ ಗೋಲ್ಡ್‌ ಹಬ್‌ನಲ್ಲಿ ಜಿಎಸ್‌ಟಿ ವೇದಿಕೆಯಿಂದ ಹಮ್ಮಿಕೊಳ್ಳಲಾಗಿದ್ದ ಜಿಎಸ್‌ಟಿ ಅನುಷ್ಠಾನ ಕುರಿತ ಕಾರ್ಯಾಗಾರ ಉದ್ಘಾಟಿಸಿ
ಅವರು ಮಾತನಾಡಿದರು. ಜಿಎಸ್‌ಟಿ ಜಾರಿಯಿಂದ ಆರಂಭದಲ್ಲಿ ಎಲ್ಲರಲ್ಲೂ ಗೊಂದಲಗಳಿರುವುದು ಸಹಜ. ಆದರೆ ಕೆಲದಿನಗಳಲ್ಲಿ ಎಲ್ಲರ ಸಮಸ್ಯೆಗಳು, ಗೊಂದಲಗಳು ಬಗೆಹರಿಯಲಿವೆ. ತೆರಿಗೆ ವಂಚನೆ ಮಾಡುತ್ತಿದ್ದವರು ಈಗ ತಪ್ಪಿಸಿಕೊಳ್ಳುವಂತಿಲ್ಲ. ವಾರ್ಷಿಕ 20 ಲಕ್ಷ ರೂ.ಗಳಿಗೂ ಕಡಿಮೆ ವ್ಯವಹಾರ ನಡೆಸುವವರಿಗೆ ಜಿಎಸ್‌ಟಿ ನೋಂದಣಿ ಕಡ್ಡಾಯವಲ್ಲ. ಸಣ್ಣ ವ್ಯಾಪಾರಿಗಳು ಜನರಿಗೆ ಬಿಲ್‌ ನೀಡುವ ಅಗತ್ಯವಿಲ್ಲ. ಸಣ್ಣ ವ್ಯಾಪಾರಿಗಳು ತಾವು ಖರೀದಿಸುವ ಸರಕುಗಳ ಮೇಲೆ ಜಿಎಸ್‌ಟಿ ಪಾವತಿಸಬೇಕು. ಆದರೆ ಅದೇ
ಸರಕಿನ ಮೇಲೆ ತಮ್ಮ ಲಾಭ ಮತ್ತು ಜಿಎಸ್‌ಟಿ ವಿಧಿಸಿ ಮಾರುವಂತಿಲ್ಲ. ಹೀಗಾಗಿ ಗ್ರಾಹಕರು ಆತಂಕಪಡುವಂತಿಲ್ಲ ಎಂದು ಹೇಳಿದರು.

20 ಲಕ್ಷಕ್ಕೂ ಅಧಿಕ ವ್ಯವಹಾರ ಮಾಡುವವರು ಶೇ.5ರಷ್ಟು ತೆರಿಗೆ ಕಟ್ಟಬೇಕು. ಈ ಮೊದಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಪ್ರತ್ಯೇಕ ತೆರಿಗೆ ಪಾವತಿಸಬೇಕಿತ್ತು. ಒಂದೇ ವಸ್ತುವಿಗೆ ಒಂದೊಂದು ಕಡೆ ಒಂದೊಂದು ದರವಿತ್ತು. ಉತ್ಪಾದಕರು, ಪೂರೈಕೆದಾರರು, ಗ್ರಾಹಕರು ವಿವಿಧ ರೀತಿಯ ತೆರಿಗೆ ಭರಿಸಬೇಕಿತ್ತು. ಅನೇಕ ಹಂತದ ತೆರಿಗೆಗೆ ತೆರೆ ಎಳೆದ ಜಿಎಸ್‌ಟಿಯಿಂದಾಗಿ ದೇಶಾದ್ಯಂತ ತೆರಿಗೆ
ಏಕರೂಪದ್ದಾಗಿರುತ್ತದೆ. ಒಂದು ವಸ್ತುವನ್ನು ದೇಶದ ಯಾವುದೇ ಭಾಗದಲ್ಲಿ ಖರೀದಿಸಿದರೂ ಅದರ ಎಂಆರ್‌ಪಿ ಒಂದೇ ಆಗಿರುತ್ತದೆ. ಹೀಗಾಗಿ ಜನರನ್ನು ವಂಚಿಸಲಾಗದು ಎಂದು ಹೇಳಿದರು.

ಜು.1ಕ್ಕೂ ಮೊದಲು ಉತ್ಪಾದನೆಯಾದ ವಸ್ತುಗಳಿಗೆ ಕನಿಷ್ಠ ಎರಡು ದಿನಪತ್ರಿಕೆಗಳಲ್ಲಿ ಜಾಹೀರಾತು ನೀಡಿ ಜಿಎಸ್‌ಟಿ ಅನ್ವಯ
ದರ ಪರಿಷ್ಕರಣೆ ಮಾಡಿ ಹೊಸ ಎಂಆರ್‌ಪಿ ನಿಗದಿಪಡಿಸಲು ಅವಕಾಶವಿದೆ. ಜಿಎಸ್‌ಟಿ ಜಾರಿಯಾಗಿರುವ ಪ್ರಯುಕ್ತ ಎಲ್ಲ ವಸ್ತುಗಳ
ಮೇಲೆ ಎಂಆರ್‌ಪಿ ಕಣ್ಣಿಗೆ ಕಾಣುವಂತೆ ಢಾಳಾಗಿ ಮುದ್ರಿಸುವುದು ಅವಶ್ಯವಿದೆ. ಜಿಎಸ್‌ಟಿ ತೆರಿಗೆ ಅನುಷ್ಠಾನಕ್ಕೆ ಬೇಕಾದ ಸಕಲ ಸಿದ್ದತೆಗಳನ್ನು ಇಲಾಖೆ ಮಾಡಿಕೊಂಡಿದ್ದು, ಮೊದಲ ಹಂತದಲ್ಲಿ ಜಿಎಸ್‌ಟಿ ನೋಂದಣಿಗೆ ಮಹತ್ವ ನೀಡಲಾಗಿದೆ ಎಂದು
ಹೇಳಿದರು. 

ಮುಖ್ಯ ಅತಿಥಿಗಳಾಗಿದ್ದ ಪತ್ರಕರ್ತ ವಾದಿರಾಜ ವ್ಯಾಸಮುದ್ರ ಮಾತನಾಡಿದರು. ಲೆಕ್ಕ ಪರಿಶೋಧಕ ಆರ್‌.ಪಿ. ಬಿಜಾಸ್ಪೂರ,
ರೋಟರಿ ಕ್ಲಬ್‌ ಗೌರ್ನರ್‌ ಮಣಿಲಾಲ ಶಹಾ, ಸಂಯೋಜಕ ರಾಘವೇಂದ್ರ ಮೈಲಾಪುರ, ಅಮರನಾಥ ಪಾಟೀಲ, ಸುನೀಲ ಜುಗ್ರಾಳ,
ಲೋಧಾ, ಮಲ್ಲಿಕಾರ್ಜುನ ಮಹಾಂತಗೋಳ, ಪ್ರಶಾಂತ ಬಿಜಾಸ್ಪೂರ ಇದ್ದರು. 

ಟಾಪ್ ನ್ಯೂಸ್

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

11

ಕ್ರಿಕೆಟ್‌ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್‌11ನಲ್ಲಿ ಒಲಿಯಿತು 1.5 ಕೋಟಿ

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qwewweq

K. Jayaprakash Hegde; ಮೀನುಗಾರಿಕೆ, ಪ್ರವಾಸೋದ್ಯಮದ ಅಭಿವೃದ್ದಿಗೆ ಹೆಚ್ಚಿನ ಆಧ್ಯತೆ 

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

11

ಕ್ರಿಕೆಟ್‌ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್‌11ನಲ್ಲಿ ಒಲಿಯಿತು 1.5 ಕೋಟಿ

1-asdasdas

IPL; ಸ್ಟಾಯಿನಿಸ್‌ ಏಟಿಗೆ ತವರಲ್ಲೆ ಚಾಂಪಿಯನ್‌ ಚೆನ್ನೈ ಠುಸ್‌!

1-BVR-1

Congress vs BJP; ಬ್ರಹ್ಮಾವರದಲ್ಲಿ ಶಕ್ತಿ ಪ್ರದರ್ಶನದ ವೇದಿಕೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.