ಉತ್ತಮ ಪುಸ್ತಕ ಜೀವನಕ್ಕೆ ಮಾರ್ಗದರ್ಶಕ: ಕಾವ್ಯ
Team Udayavani, Sep 28, 2018, 10:37 AM IST
ಕಲಬುರಗಿ: ವಿದ್ಯಾರ್ಥಿಗಳು ಪಠ್ಯ ಪುಸ್ತಕ ಓದುವುದರ ಜತೆಗೆ ಸಾಹಿತ್ಯ ಪುಸ್ತಕಗಳನ್ನು ಓದುವ ಹವ್ಯಾಸ ರೂಢಿಸಿಕೊಂಡರೆ
ಮುಂದೆ ಉತ್ತಮ ಸಾಹಿತಿಗಳಾಗಬಹುದು. ಒಳ್ಳೆಯ ಪುಸ್ತಕಗಳು ಉತ್ತಮ ಜೀವನಕ್ಕೆ ಮಾರ್ಗದರ್ಶನ ಮಾಡುತ್ತವೆ ಎಂದು ಸಾಹಿತಿ ಕಾವ್ಯ ಮಹಾಗಾಂವಕರ್ ಹೇಳಿದರು.
ಮಾತೋಶ್ರೀ ಗೋದುತಾಯಿ ದೊಡ್ಡಪ್ಪ ಅಪ್ಪ ಕಲಾ-ವಾಣಿಜ್ಯ ಮಹಿಳಾ ವಿದ್ಯಾಲಯ, ಕನ್ನಡ ಪುಸ್ತಕ ಪ್ರಾಧಿಕಾರದ ಆಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ ಜಾಣ ಜಾಣೆಯರ ಬಳಗದ “ನನ್ನ ನೆಚ್ಚಿನ ಪುಸ್ತಕ’ ಅಭಿಪ್ರಾಯ ಮಂಡನೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಸ್ಪರ್ಧೆಯ ನಿರ್ಣಾಯಕರಾಗಿ ಆಗಮಿಸಿದ ಶರಣಬಸವೇಶ್ವರ ಕಲಾ ಮಹಾವಿದ್ಯಾಲಯದ ಪ್ರಾಧ್ಯಾಪಕ ಪ್ರೊ| ವೆಂಕಣ್ಣ ಡೊಣ್ಣೇಗೌಡ್ರ ಮಾತನಾಡಿ, ಹತ್ತಾರು ಪುಸ್ತಕಗಳನ್ನು ಓದಿದಾಗ ವಿಮರ್ಶೆ ಪ್ರಜ್ಞೆ ಬೆಳೆಯುತ್ತದೆ ಎಂದರು. ನಿರ್ಣಾಯಕ ಸಾಹಿತಿ ಚಿ.ಸಿ.ನಿಂಗಣ್ಣ ಮಾತನಾಡಿ, ಸ್ಪರ್ಧೆಯಲ್ಲಿ ಗೆದ್ದ ಸ್ಥಾನಗಳು ಮುಖ್ಯವಲ್ಲ. ಸಾಹಿತ್ಯ , ಕಲೆ, ಸಂಸ್ಕೃತಿ ಬೆಳೆಸುವ ನಿಟ್ಟಿನಲ್ಲಿರುವುದರಿಂದ ಪ್ರತಿಯೊಬ್ಬ ಸ್ಪರ್ಧಿಯು ಇಲ್ಲಿ ಮುಖ್ಯವಾಗಿರುತ್ತಾನೆ. ಈ ನಿಟ್ಟಿನಲ್ಲಿ ಪ್ರಾಧಿಕಾರವು ಮಹತ್ವದ ಕಾರ್ಯ ಮಾಡುತ್ತಿದೆ ಎಂದು ಹೇಳಿದರು.
ಪ್ರಾಚಾರ್ಯೆ ಡಾ| ನೀಲಾಂಬಿಕಾ ಶೇರಿಕಾರ ಅಧ್ಯಕ್ಷತೆ ವಹಿಸಿ ಮಾತನಾಡಿ, ವಿದ್ಯಾರ್ಥಿನಿಯರು ಭಾವಿ ಸಾಹಿತಿಗಳು
ಎಂದರು. ವೀರ ಸಾವರ್ಕರ್, ಎ.ಪಿ.ಜೆ. ಅಬ್ದುಲ್ ಕಲಾಂ, ಅಪ್ಪ ಎಂದರೆ ಅಕಾಶ, ಕಿತ್ತೂರ ರಾಣಿ ಚೆನ್ನಮ್ಮ, ಅಮ್ಮ ಹೇಳಿದ
ಎಂಟು ಸುಳ್ಳುಗಳು, ಕನ್ನಡ ಭಾಷಾ ಚರಿತ್ರೆ ಮುಂತಾದ ಕೃತಿಗಳ ಕುರಿತು 10 ವಿದ್ಯಾರ್ಥಿನಿಯರು ವಿಮರ್ಶತ್ಮಕವಾಗಿ ತಮ್ಮ
ಅಭಿಪ್ರಾಯ ಮಂಡಿಸಿದರು. ಸ್ಪರ್ಧೆಯಲ್ಲಿ ಭಾಗವಹಿಸಿ ಅಭಿಪ್ರಾಯ ಮಂಡಿಸಿದ ವಿದ್ಯಾರ್ಥಿನಿಯರಿಗೆ ಪುಸ್ತಕ ನೀಡಿ ಸನ್ಮಾನಿಸಲಾಯಿತು. ಪ್ರೊ| ಶಾಂತಲಾ ನಿಷ್ಠಿ, ಡಾ| ಇಂದಿರಾ ಶೆಟಗಾರ, ಡಾ| ಸೀಮಾ ಪಾಟೀಲ ಇದ್ದರು. ಡಾ| ಪುಟ್ಟಮಣಿ
ದೇವಿದಾಸ ಪ್ರಾಸ್ತಾವಿಕವಾಗಿ ಮಾತನಾಡಿದರು. ಅಂಕಿತಾ ಸ್ವಾಗತಿಸಿದರು, ಮೇಘಾ ಬಿ. ವಂದಿಸಿದರು, ಮಹಾದೇವಿ ನಿರೂಪಿಸಿದರು. ವಿದ್ಯಾರ್ಥಿನಿಯರು ನಾಡಗೀತೆ ಹಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ
Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ
Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್
MUST WATCH
ಹೊಸ ಸೇರ್ಪಡೆ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ