ವಾಡಿ: ಸಂಭ್ರಮದ ಹಳಕರ್ಟಿ ಶ್ರೀವೀರಭದ್ರೇಶ್ವರ ರಥೋತ್ಸವ


Team Udayavani, Nov 24, 2021, 7:16 PM IST

ವಾಡಿ: ಸಂಭ್ರಮದ ಹಳಕರ್ಟಿ ಶ್ರೀವೀರಭದ್ರೇಶ್ವರ ರಥೋತ್ಸವ

ವಾಡಿ: ಸುಕ್ಷೇತ್ರ ಹಳಕರ್ಟಿ ಶ್ರೀವೀರಭದ್ರೇಶ್ವರ ರಥೋತ್ಸವ ಬುಧವಾರ ಸಂಜೆ ಭಕ್ತಸಾಗರದ ಮಧ್ಯೆ ಸಂಭ್ರಮದಿಂದ ನಡೆಯಿತು.

ಬಾನಂಗಳದಲ್ಲಿ ಪಟಾಕಿಗಳ ಚಿತ್ತಾರ, ತೇರಿನ ಸುತ್ತಲೂ ಭಕ್ತರ ಜಯಕಾರ ಮೊಳಗಿತು. ಪೂಜ್ಯ ಶ್ರೀಮುನೀಂದ್ರ ಸ್ವಾಮೀಜಿಯವರ ರಥ ಪ್ರವೇಶದ ಬಳಿಕ ವೀರಭದ್ರನಿಗೆ ಶಿರಬಾಗಿ ಜನಸಾಗರ ಸೇರಿತ್ತು. ಕಳೆದ ವರ್ಷ ಕೋವಿಡ್ ಮಾರ್ಗಸೂಚಿಗಳನ್ವಯ ರದ್ದಾಗಿದ್ದ ಹಳಕರ್ಟಿ ರಥೋತ್ಸವ, ಈ ವರ್ಷ ಮತ್ತಷ್ಟು ಸಡಗರದಿಂದ ನೆರವೇರಿತು.

ಪಾಲ್ಗೊಂಡಿದ್ದ ಭಕ್ತಸಮೂಹ ತೇರಿಗೆ ಉತ್ತತ್ತಿ, ಬಾಳೆಹಣ್ಣು, ಬಾರೆಕಾಯಿ ಎಸೆದು ಹರಕೆ ತೀರಿಸಿದರು. ದೇವರಿಗೆ ಪೂಜೆ ಸಲ್ಲಿಸಿ ಪುನೀತರಾದರು. ಇದಕ್ಕೂ ಮೊದಲು ರಥಬೀದಿಯಲ್ಲಿ ಕುಂಭ ಮೆರವಣಿಗೆ ಮತ್ತು ಚೌಡಮ್ಮನ ಆಡುವಿಕೆ ನಡೆಯಿತು. ಕಟ್ಟಿಮನಿ ಹಿರೇಮಠದಲ್ಲಿ ಪೂಜ್ಯ ಶ್ರೀಮುನೀಂದ್ರ ಶ್ರೀಗಳ ಸಮ್ಮುಖದಲ್ಲಿ ವಗ್ಗಯ್ಯಗಳಿಗೆ ಸನ್ಮಾನ ನಡೆಯಿತು.

ಮದ್ದು ಸುಡುವ ಕಾರ್ಯಕ್ರಮ ಗಮನ ಸೆಳೆಯಿತು. ವಿದ್ಯುತ್ ದೀಪಗಳಿಂದ ಅಲಂಕೃತಗೊಂಡಿದ್ದ ವೀರಭದ್ರೇಶ್ವರ ದೇವಸ್ಥಾನ ಜಾತ್ರೆಯ ಮೆರಗು ಹೆಚ್ಚಿಸಿತು. ಜೋಕಾಲಿ, ಮಕ್ಕಳ ಆಟಿಕೆ ಅಂಗಡಿ ಚಿಣ್ಣರನ್ನು ಸೆಳೆದರೆ, ಫಳಾರ, ಜಿಲೇಬಿ, ಭಜ್ಜಿ ಹಾಗೂ ಮಿಠಾಯಿಗಳ ಬಿಡಾರುಗಳಲ್ಲಿ ರುಚಿ ತಿನಿಸುಗಳು ಭಕ್ತರನ್ನು ಆಕರ್ಷಿಸಿದವು.

ಪುರವಂತರಿಂದ ಅಗ್ನಿ ಪ್ರವೇಶ: ಹಳಕರ್ಟಿ ಶ್ರೀವೀರಭದ್ರೇಶ್ವರ ಜಾತ್ರೆಯಲ್ಲಿ ವೀರಾವೇಷದ ಪುರವಂತರ ಕುಣಿತವೇ ವಿಶೇಷ. ಶತಮಾನಗಳಿಂದ ನಡೆದುಕೊಂಡು ಬರುತ್ತಿರುವ ಜಾತ್ರೆ ನಿಮಿತ್ತದ ಅಗ್ನಿ ಪ್ರವೇಶ ಸಂಪ್ರದಾಯ ಈ ಬಾರಿಯೂ ಬುಧವಾರ ಬೆಳಗಿನಜಾವ 4:00 ಗಂಟೆಗೆ ನಡೆಯಿತು. ಪುರವಂತರ ಶಾಸ್ತ್ರ ಧಾರಣೆ ಮತ್ತು ಕೆಂಡ ತುಳಿಯುವ ದೃಶ್ಯ ಭಕ್ತಿಯ ಪರಕಾಷ್ಟೆಯನ್ನು ಅನಾವರಣಗೊಳಿಸಿತು.

ಸೇರಿದ್ದ ಅಪಾರ ಭಕ್ತರನ್ನು ನಿಯಂತ್ರಿಸುವಲ್ಲಿ ಪೊಲೀಸರು ಹರಸಾಹಪಟ್ಟರು. ಹಗಲು ರಾತ್ರಿಯನ್ನದೆ ಜಾತ್ರೆಗೆ ಬಂದೋಬಸ್ತ್ ಒದಗಿಸಿ ಗ್ರಾಮದಲ್ಲಿ ಟಿಕಾಣಿ ಹೂಡಿದ್ದ ವಾಡಿ ಠಾಣೆಯ ಪಿಎಸ್‌ಐ ವಿಜಯಕುಮಾರ ಭಾವಗಿ, ಕ್ರೈಮ್ ಪಿಎಸ್‌ಐ ತಿರುಮಲೇಶ ಭಕ್ತರಿಗೆ ಭದ್ರತೆ ಒದಗಿಸಿದರು.

-ಮಡಿವಾಳಪ್ಪ ಹೇರೂರ

 

ಟಾಪ್ ನ್ಯೂಸ್

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

1—-wewewqe

Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

ಮೋದಿ ರಾಷ್ಟ್ರ ಮಟ್ಟದಲ್ಲಿ ಸುಳ್ಳು ಹೇಳಿದರೆ, ಜಾಧವ್ ಜಿಲ್ಲಾ ಮಟ್ಟದಲ್ಲಿ… ಖರ್ಗೆ ವಾಗ್ದಾಳಿ

ಮೋದಿ ರಾಷ್ಟ್ರ ಮಟ್ಟದಲ್ಲಿ ಸುಳ್ಳು ಹೇಳಿದರೆ, ಜಾಧವ್ ಜಿಲ್ಲಾ ಮಟ್ಟದಲ್ಲಿ… ಖರ್ಗೆ ವಾಗ್ದಾಳಿ

ಮೋದಿ ಗ್ಯಾರಂಟಿಗೆ ನೋ ವಾರಂಟಿ: ಸಚಿವ ಪ್ರಿಯಾಂಕ್ ಖರ್ಗೆ ಟೀಕೆ

Kalaburagi; ಮೋದಿ ಗ್ಯಾರಂಟಿಗೆ ನೋ ವಾರಂಟಿ: ಸಚಿವ ಪ್ರಿಯಾಂಕ್ ಖರ್ಗೆ ಟೀಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

5-congress

Udupi-ಚಿಕ್ಕಮಗಳೂರಿನಲ್ಲಿ ಬಿಜೆಪಿಗರೂ ಜೆಪಿ-ಜೆಪಿ ಎನ್ನುತ್ತಿದ್ದಾರೆ: ನಿಕೇತ್‌ರಾಜ್‌ ಮೌರ್ಯ

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.