ವಾಡಿ: ಸಂಭ್ರಮದ ಹಳಕರ್ಟಿ ಶ್ರೀವೀರಭದ್ರೇಶ್ವರ ರಥೋತ್ಸವ
Team Udayavani, Nov 24, 2021, 7:16 PM IST
ವಾಡಿ: ಸುಕ್ಷೇತ್ರ ಹಳಕರ್ಟಿ ಶ್ರೀವೀರಭದ್ರೇಶ್ವರ ರಥೋತ್ಸವ ಬುಧವಾರ ಸಂಜೆ ಭಕ್ತಸಾಗರದ ಮಧ್ಯೆ ಸಂಭ್ರಮದಿಂದ ನಡೆಯಿತು.
ಬಾನಂಗಳದಲ್ಲಿ ಪಟಾಕಿಗಳ ಚಿತ್ತಾರ, ತೇರಿನ ಸುತ್ತಲೂ ಭಕ್ತರ ಜಯಕಾರ ಮೊಳಗಿತು. ಪೂಜ್ಯ ಶ್ರೀಮುನೀಂದ್ರ ಸ್ವಾಮೀಜಿಯವರ ರಥ ಪ್ರವೇಶದ ಬಳಿಕ ವೀರಭದ್ರನಿಗೆ ಶಿರಬಾಗಿ ಜನಸಾಗರ ಸೇರಿತ್ತು. ಕಳೆದ ವರ್ಷ ಕೋವಿಡ್ ಮಾರ್ಗಸೂಚಿಗಳನ್ವಯ ರದ್ದಾಗಿದ್ದ ಹಳಕರ್ಟಿ ರಥೋತ್ಸವ, ಈ ವರ್ಷ ಮತ್ತಷ್ಟು ಸಡಗರದಿಂದ ನೆರವೇರಿತು.
ಪಾಲ್ಗೊಂಡಿದ್ದ ಭಕ್ತಸಮೂಹ ತೇರಿಗೆ ಉತ್ತತ್ತಿ, ಬಾಳೆಹಣ್ಣು, ಬಾರೆಕಾಯಿ ಎಸೆದು ಹರಕೆ ತೀರಿಸಿದರು. ದೇವರಿಗೆ ಪೂಜೆ ಸಲ್ಲಿಸಿ ಪುನೀತರಾದರು. ಇದಕ್ಕೂ ಮೊದಲು ರಥಬೀದಿಯಲ್ಲಿ ಕುಂಭ ಮೆರವಣಿಗೆ ಮತ್ತು ಚೌಡಮ್ಮನ ಆಡುವಿಕೆ ನಡೆಯಿತು. ಕಟ್ಟಿಮನಿ ಹಿರೇಮಠದಲ್ಲಿ ಪೂಜ್ಯ ಶ್ರೀಮುನೀಂದ್ರ ಶ್ರೀಗಳ ಸಮ್ಮುಖದಲ್ಲಿ ವಗ್ಗಯ್ಯಗಳಿಗೆ ಸನ್ಮಾನ ನಡೆಯಿತು.
ಮದ್ದು ಸುಡುವ ಕಾರ್ಯಕ್ರಮ ಗಮನ ಸೆಳೆಯಿತು. ವಿದ್ಯುತ್ ದೀಪಗಳಿಂದ ಅಲಂಕೃತಗೊಂಡಿದ್ದ ವೀರಭದ್ರೇಶ್ವರ ದೇವಸ್ಥಾನ ಜಾತ್ರೆಯ ಮೆರಗು ಹೆಚ್ಚಿಸಿತು. ಜೋಕಾಲಿ, ಮಕ್ಕಳ ಆಟಿಕೆ ಅಂಗಡಿ ಚಿಣ್ಣರನ್ನು ಸೆಳೆದರೆ, ಫಳಾರ, ಜಿಲೇಬಿ, ಭಜ್ಜಿ ಹಾಗೂ ಮಿಠಾಯಿಗಳ ಬಿಡಾರುಗಳಲ್ಲಿ ರುಚಿ ತಿನಿಸುಗಳು ಭಕ್ತರನ್ನು ಆಕರ್ಷಿಸಿದವು.
ಪುರವಂತರಿಂದ ಅಗ್ನಿ ಪ್ರವೇಶ: ಹಳಕರ್ಟಿ ಶ್ರೀವೀರಭದ್ರೇಶ್ವರ ಜಾತ್ರೆಯಲ್ಲಿ ವೀರಾವೇಷದ ಪುರವಂತರ ಕುಣಿತವೇ ವಿಶೇಷ. ಶತಮಾನಗಳಿಂದ ನಡೆದುಕೊಂಡು ಬರುತ್ತಿರುವ ಜಾತ್ರೆ ನಿಮಿತ್ತದ ಅಗ್ನಿ ಪ್ರವೇಶ ಸಂಪ್ರದಾಯ ಈ ಬಾರಿಯೂ ಬುಧವಾರ ಬೆಳಗಿನಜಾವ 4:00 ಗಂಟೆಗೆ ನಡೆಯಿತು. ಪುರವಂತರ ಶಾಸ್ತ್ರ ಧಾರಣೆ ಮತ್ತು ಕೆಂಡ ತುಳಿಯುವ ದೃಶ್ಯ ಭಕ್ತಿಯ ಪರಕಾಷ್ಟೆಯನ್ನು ಅನಾವರಣಗೊಳಿಸಿತು.
ಸೇರಿದ್ದ ಅಪಾರ ಭಕ್ತರನ್ನು ನಿಯಂತ್ರಿಸುವಲ್ಲಿ ಪೊಲೀಸರು ಹರಸಾಹಪಟ್ಟರು. ಹಗಲು ರಾತ್ರಿಯನ್ನದೆ ಜಾತ್ರೆಗೆ ಬಂದೋಬಸ್ತ್ ಒದಗಿಸಿ ಗ್ರಾಮದಲ್ಲಿ ಟಿಕಾಣಿ ಹೂಡಿದ್ದ ವಾಡಿ ಠಾಣೆಯ ಪಿಎಸ್ಐ ವಿಜಯಕುಮಾರ ಭಾವಗಿ, ಕ್ರೈಮ್ ಪಿಎಸ್ಐ ತಿರುಮಲೇಶ ಭಕ್ತರಿಗೆ ಭದ್ರತೆ ಒದಗಿಸಿದರು.
-ಮಡಿವಾಳಪ್ಪ ಹೇರೂರ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ
Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ
ಸಚಿವರು ಲೀಡ್ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್
ಮೋದಿ ರಾಷ್ಟ್ರ ಮಟ್ಟದಲ್ಲಿ ಸುಳ್ಳು ಹೇಳಿದರೆ, ಜಾಧವ್ ಜಿಲ್ಲಾ ಮಟ್ಟದಲ್ಲಿ… ಖರ್ಗೆ ವಾಗ್ದಾಳಿ
Kalaburagi; ಮೋದಿ ಗ್ಯಾರಂಟಿಗೆ ನೋ ವಾರಂಟಿ: ಸಚಿವ ಪ್ರಿಯಾಂಕ್ ಖರ್ಗೆ ಟೀಕೆ
MUST WATCH
ಹೊಸ ಸೇರ್ಪಡೆ
Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ
Udupi-ಚಿಕ್ಕಮಗಳೂರಿನಲ್ಲಿ ಬಿಜೆಪಿಗರೂ ಜೆಪಿ-ಜೆಪಿ ಎನ್ನುತ್ತಿದ್ದಾರೆ: ನಿಕೇತ್ರಾಜ್ ಮೌರ್ಯ
Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ
Gujarat Lok Sabha Constituency: ಗುಜರಾತ್ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ