ಚಿಂಚೋಳಿ: ಹಸರಗುಂಡಗಿ ಗ್ರಾಮ ಪಂಚಾಯತ್; ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಅವಿರೋಧ ಆಯ್ಕೆ
Team Udayavani, Mar 16, 2022, 5:24 PM IST
ಚಿಂಚೋಳಿ: ತಾಲೂಕಿನ ಹಸರಗುಂಡಗಿ ಗ್ರಾಮ ಪಂಚಾಯತ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಶ್ರೀದೇವಿ ಪರ್ವತಕುಮಾರ ದೇಸಾಯಿ ಮರಪಳ್ಳಿ ಉಪಾಧ್ಯಕ್ಷರಾಗಿ ಜಗನ್ನಾಥ ಸೋಮಸಿಂಗ ರಾಠೋಡ ಇದ್ದಲಮೋಕ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಹಸರಗುಂಡಗಿ ಗ್ರಾಮ ಪಂಚಾಯತ ಸಭಾಂಗಣದಲ್ಲಿ ಬುಧವಾರ ನಡೆದ ಚುನಾವಣಾ ಪ್ರಕ್ರಿಯಲ್ಲಿ ಸಾಮಾನ್ಯ ಮಹಿಳಾ ಸ್ಥಾನಕ್ಕೆ ಶ್ರೀದೇವಿ ಪರ್ವತಕುಮಾರ ದೇಸಾಯಿ ಮತ್ತು ಪರಿಶಿಷ್ಟ ಜಾತಿ ಸ್ಥಾನಕ್ಕೆ ಜಗನ್ನಾಥ ಸೋಮಸಿಂಗ ರಾಠೋಡ ತಲಾ ಒಂದೊಂದು ನಾಮಪತ್ರ ಸಲ್ಲಿಸಿದ್ದರು.
ಹೆಚ್ಚು ನಾಮಪತ್ರಗಳು ಸಲ್ಲಿಕೆ ಆಗದ ಕಾರಣ ಚುನಾವಣಾ ಅಧಿಕಾರಿ ಅಂಜುಮ ತಬಸುಮ್ ಚುನಾವಣಾ ಫಲಿತಾಂಶ ಪ್ರಕಟಿಸಿದರು.
ಪಿಡಿಒ ಪ್ರತಿಕ್ಷಾ, ಡಿಸಿಸಿಬ್ಯಾಂಕ ನಿರ್ದೇಶಕ ಗೌತಮ ಪಾಟೀಲ್, ಸಂತೋಷ ಗಡಂತಿ, ಸಂತೋಷರಡ್ಡಿ, ಭವಾನಿ,ಗೋಪಾಲರೆಡ್ಡಿ ಕೊಳ್ಳುರ, ಗ್ರಾಪಂ ಸದಸ್ಯರಾದ ಆನಂದ ಕುಮಾರ,ಸಿದ್ದಮ್ಮ, ಅಮಿತಾ ,ಕಮಲಾಬಾಯಿ, ಇಸಾಮೊದ್ದಿನ, ಶೋಭಾಬಾಯಿ, ಮೋಹನ, ಇಸ್ಮಾಯಿಲ್ ಬೀ, ಸರಸ್ವತಿ, ಮಾಪಣ್ಣ, ಮಮತಾ,ಸೂರ್ಯಕಾಂತ, ಬಕ್ಕಪ್ಪ, ಉಮಾದೇವಿ,ಪದ್ಮಾವತಿ ಭಾಗವಹಿಸಿದರು.
ಅವಿರೋಧವಾಗಿ ಆಯ್ಕೆ ಆಗಿರುವುದಕ್ಕೆ ಮರಪಳ್ಳಿ ಹಸರಗುಂಡಗಿ ಗ್ರಾಮದಲ್ಲಿ ಬಿಜೆಪಿ ಕಾರ್ಯಕರ್ತರು ಸಿಹಿ ಹಂಚಿಕೊಂಡು ಪಟಾಕಿ ಸಿಡಿಸಿ ಸಂತಸ ಪಟ್ಟರು.
ಗೌತಮ ಪಾಟೀಲ್, ಬಿಜೆಪಿ ತಾಲೂಕು ಅಧ್ಯಕ್ಷ ಸಂತೋಷ ಗಡಂತಿ ಇನ್ನಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ
Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ
Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
MUST WATCH
ಹೊಸ ಸೇರ್ಪಡೆ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ
Ramakrishna Mission: ರಾಮಕೃಷ್ಣ ಮಠ, ಮಿಷನ್ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ
Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು