ಕೋವಿಡ್ ಗೆ ನಿರ್ಲಕ್ಷ್ಯ ಸಲ್ಲದು; ಇರಲಿ ಎಚ್ಚರ


Team Udayavani, Oct 5, 2020, 5:30 PM IST

gb-tdy-1

ಕಲಬುರಗಿ: ದಿನೇ-ದಿನೇ ಹೆಚ್ಚಳವಾಗುತ್ತಿರುವ ಹಾಗೂ ನಿಯಂತ್ರಣಕ್ಕೆ ಬಾರದೇ ಹಲವರು ಸಂಕಷ್ಟಕ್ಕೆ ಒಳಗಾಗುತ್ತಿರುವುದರಿಂದ ಯಾವುದೇ ಕಾರಣಕ್ಕೂ ನಿರ್ಲಕ್ಷ್ಯ ಸಲ್ಲದು ಎಂದು ಭಾರತೀಯ ವೈದ್ಯಕೀಯ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಡಾ| ಅಮೊಲ ಪತಂಗೆ ಹೇಳಿದರು.

ಅಫ‌ಜಲಪುರ ತಾಲೂಕಿನ ಕರ್ಜಗಿಯಯಲ್ಲಾಲಿಂಗ ಮಹಾರಾಜ ಮಠದಲ್ಲಿ ಹಾಗೂ ಕಲಬುರಗಿ ತಾಲೂಕಿನ ಫ‌ರಹತಾಬಾದ್‌ನ ಶರಣಬಸವೇಶ್ವರ ದೇವಸ್ಥಾನದಲ್ಲಿ ರೈತ ನಾಯಕ ದಿ| ಸಾಯಬಣ್ಣಗೌಡ ಪಾಟೀಲ್‌ ಭಾಸಗಿ ಸ್ಮರಣಾರ್ಥ ವೈದ್ಯರಾದ ಡಾ| ಸುಭಾಷ ಪಾಟೀಲ್‌ ಭಾಸಗಿ ನೇತೃತ್ವದಲ್ಲಿ ಹಾಗೂ ಜಿಪಂ ಮಾಜಿ ಸದಸ್ಯ ತುಕಾರಾಮ ಪಾಟೀಲ್‌ ಅಧ್ಯಕ್ಷತೆಯಲ್ಲಿ ನಡೆದ ಉಚಿತ ಆರೋಗ್ಯ ತಪಾಸಣಾ ಶಿಬಿರ ಹಾಗೂ ಕೋವಿಡ್ ಜಾಗೃತಿ ಅಭಿಯಾನದಲ್ಲಿ ಅವರು ಮಾತನಾಡಿದರು.

ಕೋವಿಡ್ ಗೆ ಗ್ರಾಮೀಣ ಭಾಗದಲ್ಲಿ ಎಚ್ಚರಿಕೆ ವಹಿಸದಿರುವುದು ಕಂಡು ಬರುತ್ತಿದೆ. ಹೀಗಾಗಿ ಜಾಗೃತಿ ವಹಿಸುವುದು ಮುಖ್ಯವಾಗಿದೆ. ಕೋವಿಡ್ ಗೆ ಹೆದರಿ ಇತರ ರೋಗಗಳಿಗೂ ಚಿಕಿತ್ಸೆಗೆಂದು ಜನರು ಹೋಗ್ತಾ ಇಲ್ಲ. ಹೋದರೆ ಮೊದಲಿಗೆ ಕೋವಿಡ್‌-19 ಪರೀಕ್ಷೆ ಮಾಡಿಸಲಾಗುತ್ತಿದೆ ಎಂಬ ಭಯದಿಂದ ಆಸ್ಪತ್ರೆಗೆ ಬಾರದೇ ತೊಂದರೆ ಅನುಭವಿಸುತ್ತಿದ್ದಾರೆ ಎಂದು ವಿವರಣೆ ನೀಡಿದರು.

ಅಫ‌ಜಲಪುರ ತಾಪಂ ಉಪಾಧ್ಯಕ್ಷ ಭೀಮಾಶಂಕರ ಹೊನ್ನಕೆರಿ ಶಿಬಿರ ಉದ್ಘಾಟಿಸಿ, ಡಾ| ಸುಭಾಷ ಪಾಟೀಲ್‌ ಅವರು ಗ್ರಾಮೀಣ ಜನರ ಆರೋಗ್ಯ ಕಾಳಜಿ ಹೊಂದಿ ಶಿಬಿರ ಆಯೋಜಿಸಿರುವುದು ಮಾದರಿಯಾಗಿದೆ ಎಂದು ಶ್ಲಾ ಸಿದರು. ಜಿಪಂ ಮಾಜಿ ಸದಸ್ಯ ಸಿದ್ದಯ್ಯ ಹಿರೇಮಠ, ಕರ್ಜಗಿ ಗ್ರಾಪಂ ಪೊನ್ನಪ್ಪ ಡಾಳೆ, ಉಪಾಧ್ಯಕ್ಷ ಮಲ್ಲು ಕಿಣಗಿ, ಪ್ರಮುಖರಾದ ಸೋಮಶೇಖರ್‌ ಬಾಡಗಿಹಾಳ, ಪೀರು ನಾಯಕೊಡಿ, ಇರ್ಪಾನ ಜಮಾದಾರ, ಚಿದಾನಂದ ತಳವಾರ, ಅಣ್ಣಾರಾಯ ಗೌಡ ಪಾಟೀಲ,ಶಿವೂರ ಸಿದ್ದಣಗೌಡ ಪಾಟೀಲ ಭಾಸಗಿ, ಬೀರಪ್ಪ ಪೂಜಾರಿ ಇದ್ದರು. ಶಿಬಿರದ ಆಯೋಜಕ ಡಾ| ಸುಭಾಷ ಪಾಟೀಲ್‌ ಪ್ರಾಸ್ತಾವಿಕ ಮಾತನಾಡಿದರು.

ಫ‌ರಹಾತಾಬದ್‌ದಲ್ಲಿ ನಡೆದ ಶಿಬಿರಕ್ಕೆ ಪಿಎಸ್‌ಐ ಯಶೋಧಾ ಕಟಕೆ ಅವರು ತಮ್ಮ ರಕ್ತದೊತ್ತಡ ತಪಾಸಣೆ ಮಾಡುವ ಮೂಲಕ ಚಾಲನೆ ನೀಡಿದರು. ಡಾ| ಪ್ರಭಾಕರ ಗೋಕಲೆ, ಡಾ| ಚೇತನ ಸಿಂಗೆ ಇತರರು ತಪಾಸಣೆ ನಡೆಸಿದರು. ಸಿದ್ದು ತಳವಾರ,ಸಂತೋಷ ತಳವಾರ, ಅಹ್ಮದ ಇರ್ಫಾನ್‌ ಸೇರಿದಂತೆ ಮುಂತಾದವರಿದ್ದರು.

ಇಷ್ಟು ದಿನ ಹೇಗೋ ದಿನಗಳನ್ನು ಕಳೆಯಲಾಗಿದೆ. ಆದರೆ ಈಗ ಸಾಮಾಜಿಕವಾಗಿ ಕೈಲಾದಷ್ಟು ಸೇವೆ ಸಲ್ಲಿಸಬೇಕೆಂಬ ಹಂಬಲದಿಂದ ಉಚಿತ ಆರೋಗ್ಯ ಶಿಬಿರ ಸೇರಿದಂತೆ ಇತರ ನಿಟ್ಟಿನ ಕಾರ್ಯಕ್ರಮಗಳಿಗೆ ಮುಂದಾಗಲಾಗಿದೆ. ಇದನ್ನು ಮುಂದುವರೆಸಿಕೊಂಡು ಬರಲಾಗುವುದು. – ಡಾ| ಸುಭಾಷ ಟಿ. ಪಾಟೀಲ್‌, ವೈದ್ಯರು

ಟಾಪ್ ನ್ಯೂಸ್

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Mallikarjun Kharge ಕ್ಷೇತ್ರದಲ್ಲಿ 19 ಚುನಾವಣೆಯಲ್ಲಿ 16 ಬಾರಿ ಗೆದ್ದ ಕಾಂಗ್ರೆಸ್‌

Mallikarjun Kharge ಕ್ಷೇತ್ರದಲ್ಲಿ 19 ಚುನಾವಣೆಯಲ್ಲಿ 16 ಬಾರಿ ಗೆದ್ದ ಕಾಂಗ್ರೆಸ್‌

Kalaburagi; ಪಾಪರ್ ಆಗಿದ್ದರೆ KKRDB ಅಭಿವೃದ್ದಿಗೆ ಹೇಗೆ ಹಣ ಕೊಡುತ್ತಿದ್ದೇವು?: ಖಂಡ್ರೆ

Kalaburagi; ಪಾಪರ್ ಆಗಿದ್ದರೆ KKRDB ಅಭಿವೃದ್ದಿಗೆ ಹೇಗೆ ಹಣ ಕೊಡುತ್ತಿದ್ದೆವು?: ಖಂಡ್ರೆ

Kalaburagi; ಸೋಲಿನ ಭಯದಿಂದ ಹಿಂದೆ ಸರಿದ ಡಾ.‌ಖರ್ಗೆ: ವಿಪಕ್ಷ ನಾಯಕ ಆರ್ ಅಶೋಕ

Kalaburagi; ಸೋಲಿನ ಭಯದಿಂದ ಹಿಂದೆ ಸರಿದ ಡಾ.‌ಖರ್ಗೆ: ವಿಪಕ್ಷ ನಾಯಕ ಆರ್ ಅಶೋಕ

1-wqeqwewq

Minister ಪ್ರಿಯಾಂಕ ಖರ್ಗೆ ಉದ್ಧಟತನ ಅತಿಯಾಗಿದೆ: ಸಂಸದ ಡಾ.ಜಾಧವ್

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

Online Bitcoin Gambling Enterprises: An Overview to Betting with Cryptocurrency

Udupi: ನೇಣು ಬಿಗಿದು ಆತ್ಮಹತ್ಯೆ

Udupi: ನೇಣು ಬಿಗಿದು ಆತ್ಮಹತ್ಯೆ

police crime

Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ

Sullia: ಗಾಂಜಾ ಸೇವನೆ; ಇಬ್ಬರು ವಶಕ್ಕೆ

Sullia: ಗಾಂಜಾ ಸೇವನೆ; ಇಬ್ಬರು ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.