ಮತ್ತೆ ವರುಣನ ಆರ್ಭಟ: ಜನಜೀವನ ಅಸ್ತವ್ಯಸ್ತ


Team Udayavani, Aug 27, 2022, 1:37 PM IST

2rain

ಸೇಡಂ: ತಡ ರಾತ್ರಿ ಸುರಿದ ಭಾರಿ ಮಳೆಗೆ ಜನಜೀವನ ಅಸ್ತವ್ಯಸ್ತವಾಗಿದ್ದು, ರಸ್ತೆಗಳು ಸಂಪೂರ್ಣ ಜಲಾವೃತವಾಗಿ ಕೆಲವು ಬಡಾವಣೆಗಳಿಗೆ ತೆರಳಲು ಪರದಾಡುವ ಪರಿಸ್ಥಿತಿ ನಿರ್ಮಾಣವಾದರೆ, ಪಟ್ಟಣದ ಪೊಲೀಸ್‌ ಠಾಣೆಗೂ ನೀರು ನುಗ್ಗಿ ಆವಾಂತರ ಸೃಷ್ಟಿಸಿತ್ತು.

ಪಟ್ಟಣದ ಪೊಲೀಸ್‌ ಠಾಣೆಗೆ ನೀರು ನುಗ್ಗಿದ್ದರಿಂದ ದಾಖಲೆ ಪತ್ರ, ಗಣಕಯಂತ್ರ ಸೇರಿದಂತೆ ಇನ್ನಿತರ ವಸ್ತುಗಳು ನೀರಿನಲ್ಲಿ ಮುಳುಗಂತೆ ಸಂರಕ್ಷಿಸಲು ಸಿಬ್ಬಂದಿ ರಾತ್ರಿಯಿಡಿ ಹರಸಾಹಸ ಪಟ್ಟರು. ಕೆಲವು ಮನೆ, ಗುಡಿಸಲುಗಳ ಜನರು ರಾತ್ರಿಯಿಡಿ ನೀರು ಹೊರ ಹಾಕುತ್ತಾ ಜಾಗರಣೆ ಮಾಡುವ ಪರಿಸ್ಥಿತಿ ಉಂಟಾಯಿತು.

ಪಟ್ಟಣದ ಸರ್ಕಾರಿ ಮೆಟ್ರಿಕ್‌ ನಂತರದ ಬಾಲಕ-ಬಾಲಕಿಯರ ವಸತಿ ನಿಲಯಗಳ ಆವರಣದಲ್ಲಿ ನೀರು ನಿಂತು ಓಡಾಡಲು ವಿದ್ಯಾರ್ಥಿಗಳು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿತ್ತು. ಅದರಂತೆ ಛೋಟಿ ಗಿರಣಿ, ಗಂಜ ಪಕ್ಕದ ಬಸ್ತಿ ಕಾಲೋನಿ, ಇನ್ಫೊಸಿಸ್‌ ಕಾಲೋನಿ, ಜೂನಿಯರ್‌ ಕಾಲೇಜು ಆವರಣ, ಜನತಾ ಕಾಲೋನಿಯ ಸಂಪರ್ಕ ರಸ್ತೆ, ಸ್ವಾಮಿ ವಿವೇಕಾನಂದ ಶಾಲೆ ರಸ್ತೆ ಹಾಗೂ ಹಲವು ಬಡಾವಣೆಗಳಿಗೆ ತೆರಳಲು ಜನರು ಹರಸಾಹಸ ಪಡಬೇಕಾಯಿತು.

ಮಳೆ ವಿವರ: ಸೇಡಂ ಪಟ್ಟಣದಲ್ಲಿ 86ಮಿ.ಮೀ ಮಳೆಯಾಗಿದೆ. ತಾಲೂಕಿನ ಆಡಕಿಯಲ್ಲಿ 20ಮಿ.ಮೀ ಮಳೆಯಾದರೆ, ಮುಧೋಳ 06ಮಿ.ಮೀ, ಕೋಡ್ಲಾದಲ್ಲಿ 11.06ಮಿ.ಮೀ ಮಳೆಯಾಗಿದೆ. ಆದರೆ ಸೇಡಂ ಪಟ್ಟಣದಲ್ಲಿ ಈ ಹಿಂದೆ ಸುರಿದ 60ಮಿ.ಮೀ ಮಳೆಯ ದಾಖಲೆ ಮೀರಿ 80ಮಿಮೀ ಮಳೆಯಾಗಿದೆ.

ತಡರಾತ್ರಿ ಸುರಿದ ಮಳೆಯಿಂದ ಯಾವುದೇ ಹಾನಿಯಾಗಿರುವ ವರದಿ ಬಂದಿಲ್ಲ. ಕೆಲವು ಕಡೆಗಳಲ್ಲಿ ರಸ್ತೆ, ಕಾಲೇಜು ಆವರಣಗಳಲ್ಲಿ ನೀರು ನಿಂತಿರುವುದು ಗಮನಕ್ಕೆ ಬಂದಿದೆ. ಕಳೆದ ಎರಡ್ಮೂರು ದಿನಗಳಿಂದ ಬಿಸಿಲು ಬಂದಿದ್ದರಿಂದ ಮಳೆಯಿಂದ ಯಾವುದೇ ತೊಂದರೆ ಉಂಟಾಗಿಲ್ಲ. ಕೆಲವು ವಸತಿ ನಿಲಯಗಳಲ್ಲಿ ನೀರು ನಿಂತಿರುವುದು ಗಮನಕ್ಕೆ ಬಂದಿದ್ದು, ಅಧಿ ಕಾರಿಗಳನ್ನು ಕರೆದು ಮಾಹಿತಿ ಪಡೆಯಲಾಗುವುದು. –ಬಸವರಾಜ ಬೆಣ್ಣೆಶಿರೂರ, ತಹಶೀಲ್ದಾರ್‌, ಸೇಡಂ

ತಡರಾತ್ರಿ ಸುರಿದ ಮಳೆಗೆ ಪೊಲೀಸ್‌ ಠಾಣೆಯ ಎಲ್ಲ ಕೋಣೆಗಳಿಗೂ ನೀರು ನುಗ್ಗಿದೆ. ದಾಖಲೆಗಳು ಹಾಗೂ ಇನ್ನಿತರ ವಸ್ತುಗಳನ್ನು ರಕ್ಷಿಸಲು ನಮ್ಮ ಸಿಬ್ಬಂದಿ ಹರಸಾಹಸ ಪಟ್ಟಿದ್ದಾರೆ. ಠಾಣೆ ಒಳಗೂ ಮತ್ತು ಆವರಣದಲ್ಲಿ ಮೊಳಕಾಲು ಮಟ್ಟಕ್ಕೆ ನೀರು ನಿಂತಿರುವುದರಿಂದ ವಾಹನಗಳು ನೀರಿನಲ್ಲಿಯೇ ಸಿಲುಕಿದ್ದವು. ಪ್ರತಿ ಬಾರಿ ಮಳೆ ಬಂದಾಗಲೆಲ್ಲ ಈ ರೀತಿ ನೀರು ನುಗ್ಗುತ್ತಲೇ ಇದೆ. ಠಾಣೆಗೆ ಸೂಕ್ತ ವ್ಯವಸ್ಥೆ ಕಲ್ಪಿಸುವಂತೆ ಮೇಲಧಿ ಕಾರಿಗಳ ಗಮನಕ್ಕೆ ತರಲಾಗಿದೆ. ಸೋಮಲಿಂಗ ವಡೆಯರ್‌, ಪಿಎಸ್, ಸೇಡಂ

-ಸುಧೀರ ಎಸ್‌.ಬಿರಾದಾರ

ಟಾಪ್ ನ್ಯೂಸ್

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.