ಭಾರಿ ಮಳೆ: ಮನೆಗಳಿಗೆ ನುಗ್ಗಿದ ನೀರು


Team Udayavani, Jun 11, 2018, 9:44 AM IST

gul-1.jpg

ಚಿಂಚೋಳಿ: ತಾಲೂಕಿನ ರಟಕಲ್‌ ಗ್ರಾಮದ ಸುತ್ತಲೂ ರವಿವಾರ ಮಧ್ಯಾಹ್ನ ಭಾರಿ ಬಿರುಗಾಳಿ ಮತ್ತು ರಭಸದಿಂದ ಕೂಡಿದ ಮಳೆ ಆದ ಪರಿಣಾಮ ಗ್ರಾಮದ ಹರಿಜನವಾಡದ ಅನೇಕ ಮನೆಗಳಿಗೆ ಮಳೆ ನೀರು ನುಗ್ಗಿತ್ತು.

ಹುಲಸಗೂಡ ಗ್ರಾಮದಲ್ಲಿ ಗುಡ್ಡದ ಮೇಲಿಂದ ಹರಿದು ಬರುವ ಮಳೆ ನೀರು ಮನೆಯ ಹಿಂಬದಿ ಗೋಡೆಯಿಂದ ಮನೆಯೊಳಗೆ ಹೊಕ್ಕು ಬಾಗಿಲು ಮೂಲಕ ಹೊರ ಹರಿದು ಅಪಾರ ನಷ್ಟವಾಗಿದೆ ಎಂದು ರಟಕಲ್‌ ಗ್ರಾಪಂ ಉಪಾಧ್ಯಕ್ಷ ಗೌರಿಶಂಕರ ಕಿಣ್ಣಿ ತಿಳಿಸಿದ್ದಾರೆ.

ರಟಕಲ್‌ ಗ್ರಾಮದಲ್ಲಿ ಮಧ್ಯಾಹ್ನ ಸಿಡಿಲು ಮಿಂಚಿನಿಂದ ಕೂಡಿದ ಆರ್ಭಟದ ಮಳೆ ಆಗಿರುವುದರಿಂದ ಮುಕರಂಬ ಗ್ರಾಮಕ್ಕೆ ಹೋಗುವ ರಸ್ತೆ ಪಕ್ಕದಲ್ಲಿ ಹರಿಯುವ ನಾಲೆಯ ಮಳೆ ನೀರು ಹರಿಜನವಾಡದ ಓಣಿಯ 20 ಮನೆಗಳಿಗೆ ನೀರು ನುಗ್ಗಿ ಸಂಗ್ರಹಿಸಿಟ್ಟಿದ್ದ ದವಸ ಧಾನ್ಯ, ಬಟ್ಟೆ, ಅಡುಗೆ ಸಾಮಗ್ರಿಗಳು, ದಿನಬಳಕೆ ಆಹಾರ ವಸ್ತುಗಳು,ಬಿತ್ತನೆ ಬೀಜ ಮತ್ತು ರಸಗೊಬ್ಬರ, ಕೃಷಿ ಉಪಕರಣಗಳು ಹಾನಿಗೊಳಗಾಗಿವೆ.

ರಟಕಲ್‌ ಸುತ್ತಲೂ ಭಾರಿ ಮಳೆ ಸುರಿದ್ದರಿಂದ ಹುಲಸಗೂಡ ಗ್ರಾಮದಲ್ಲಿ ಗುಡ್ಡದ ಮೇಲಿಂದ ಹರಿದು ಬರುವ ಮಳೆ ನೀರು ಮನೆಯ ಹಿಂಬದಿ ಗೋಡೆ ಒಡೆದುಕೊಂಡು ಬಂದು ಬಾಗಿಲು ಮೂಲಕ ಹೊರ ಬಂದಿದೆ. ಹೀಗಾಗಿ ಮನೆಯಲ್ಲಿದ್ದ ದವಸ ಧಾನ್ಯ, ಬಿತ್ತನೆ ಬೀಜಗಳು ಹಾನಿಗೊಳಗಾಗಿವೆ.
 
ರಟಕಲ್‌ ಗ್ರಾಮದಲ್ಲಿ 2016ರಲ್ಲಿ ಬಿದ್ದ ಭಾರಿ ಮಳೆ ಹರಿಜನವಾಡ ಮತ್ತು ಮಾದಿಗರ ಓಣಿಯಲ್ಲಿ ಇರುವ 40 ಮನೆಗಳಿಗೆ ಮಳೆ ನೀರು ಹೊಕ್ಕು ಅಪಾರ ಹಾನಿಗೊಳಿಸಿತ್ತು. ಕಲಬುರಗಿ-ಚಿಂಚೋಳಿ ರಾಜ್ಯ ಹೆದ್ದಾರಿ ರಸ್ತೆಯಲ್ಲಿ ನಿರ್ಮಿಸಿದ ಅತಿ ಕಿರಿದಾದ ಸೇತುವೆಯಿಂದಾಗಿ ಮಳೆ ನೀರು ಸರಾಗವಾಗಿ ಹರಿದು ಹೋಗದೇ ಬಡವರ ಮನೆ ಸೇರುತ್ತಿದೆ.

ಜಿಲ್ಲಾಧಿಕಾರಿಗಳು, ಜಿಪಂ ಸಿಇಒ, ಶಾಸಕ ಡಾ| ಉಮೇಶ ಜಾಧವ್‌ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದರು. ಆದರೆ ಯಾವುದೇ ಕ್ರಮ ಕೈಗೊಂಡಿಲ್ಲ. ಸಣ್ಣ ಸೇತುವೆಯನ್ನು ದೊಡ್ಡದಾಗಿ ನಿರ್ಮಿಸಬೇಕು. ಮಳೆಯಿಂದ ಹಾನಿಗೊಳಗಾದವರಿಗೆ ಸರಕಾರ ಪರಿಹಾರ ನೀಡಬೇಕೆಂದು ಜಿಲ್ಲಾ ಕರ್ನಾಟಕ ಪ್ರಾಂತ ರೈತ ಸಂಘದ ಅಧ್ಯಕ್ಷ ಶರಣಬಸಪ್ಪ ಮಮಶೆಟ್ಟಿ ಜಿಲ್ಲಾ ಕಾಧಿರಿಗಳಿಗೆ ಮನವಿ ಮಾಡಿದ್ದಾರೆ.

ಮಳೆಯಿಂದಾಗಿ ರಟಕಲ್‌, ಮುಕರಂಬಾ, ಹುಲಸಗೂಡ ಗ್ರಾಮದಲ್ಲಿ ವಿದ್ಯುತ್‌ ಸಂಪರ್ಕ ಕಡಿತಗೊಂಡು ಜನಜೀವನ ಅಸ್ತವ್ಯಸ್ತಗೊಂಡಿದೆ. 

ಮಳೆ ನೀರಿಗೆ ಕೊಚ್ಚಿಹೋದ ಕಾಯಿಪಲ್ಲೆ
ಶಹಾಬಾದ: ನಗರದಲ್ಲಿ ರವಿವಾರ ಸುರಿದ ಭಾರಿ ಮಳೆಯಿಂದ ಜನಜೀವನ ಅಸ್ತವ್ಯಸ್ತಗೊಂಡಿತ್ತು. ಮಳೆಯಿಂದಾಗಿ ರಸ್ತೆಯಲ್ಲಿ ವಾಹನ ಸಂಚಾರ ವಿರಳವಾಗಿತ್ತು. ಇದರಿಂದ ಸಾರ್ವಜನಿಕರು ತೊಂದರೆ ಅನುಭವಿಸಿದರು. ರವಿವಾರ ಮಧ್ಯಾಹ್ನ 2 ಗಂಟೆಯಿಂದ ಎಡೆಬಿಡದೆ ಸುರಿದ ಭಾರಿ ಮಳೆಯಿಂದಾಗಿ ಜನರು ಮನೆಯಿಂದ ಹೊರಬರದೆ ಮನೆಯಲ್ಲಿಯೇ ಕಾಲ ಕಳೆಯುವಂತಾಯಿತು. ರವಿವಾರ ನಗರದಲ್ಲಿ ಸಂತೆ ಇರುವ ಕಾರಣ ವಿವಿಧ ಊರುಗಳಿಂದ ಕಾಯಿಪಲ್ಯೆ ಮಾರಾಟ ಮಾಡಲು ಬಂದ ರೈತರಿಗೆ ತೀವ್ರ ತೊಂದರೆಯಾಯಿತು. ಸುರಿದ ಮಳೆ ನೀರಿನಲ್ಲಿ ಕಾಯಿಪಲ್ಲೆಗಳು ಕೊಚ್ಚಿ ಹೋದವು. ಇದರಿಂದ ರೈತರು ನಷ್ಟ ಅನುಭವಿಸಬೇಕಾಯಿತು. ಸುಮಾರು 3ಗಂಟೆ ಸುರಿದ ಮಳೆಯಿಂದಾಗಿ ವಾಹನ ಸಂಚಾರ ವಿರಳವಾಗಿತ್ತು.

ನಗರದ ಖಾಲಿ ನಿವೇಶನಗಳಲ್ಲಿ ಹಾಗೂ ತಗ್ಗು ಪ್ರದೇಶಗಳು ಜಲಾವೃತಗೊಂಡಿದ್ದವು. ಮಳೆ ನೀರು ರಸ್ತೆ ಮೇಲೆ ಹರಿದಾಡಿದ್ದರಿಂದ ವಾಹನ ಸಂಚಾರಕ್ಕೆ ತೊಂದರೆಯಾಯಿತು. ಶರಣ ನಗರ, ರಾಮಾ ಮೊಹಲ್ಲಾ, ಲಕ್ಷ್ಮೀಗಂಜ್‌, ಇಂಜಿನಫೈಲ್‌ ಹೀಗೆ ಬಹುತೇಕ ಬಡಾವಣೆಗಳಲ್ಲಿ ಚರಂಡಿ ನೀರು ರಸ್ತೆ ಮೇಲೆ ಹರಿದಾಡಿತು. ರಸ್ತೆಯಲ್ಲಿ ಚರಂಡಿ
ನೀರು ಸುಗಮವಾಗಿ ಹರಿಯದೇ ರಸ್ತೆ ಮೇಲೆ ನಿಂತಿತ್ತು. ಇದರಿಂದ ಬೇಸತ್ತ ಜನತೆ ನಗರಸಭೆ ಅಧಿಕಾರಿಗಳಿಗೆ
ಹಿಡಿಶಾಪ ಹಾಕಿದರು. ಸಂತೆಗೆ ಬಂದ ಜನರು ಮಳೆಯಿಂದ ರಕ್ಷಣೆ ಪಡೆಯಲು ವ್ಯಾಪಾರ ಮಳಿಗೆಗಳಿಗೆ ಮಗಿಬಿದಿದ್ದರು. ಅಲ್ಲದೇ ನಗರದ ಹಳ್ಳಕೊಳ್ಳಗಳು ತುಂಬಿ ಹರಿಯುತ್ತಿವೆ.

ಟಾಪ್ ನ್ಯೂಸ್

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ ಗ್ಯಾರಂಟಿಗೆ ನೋ ವಾರಂಟಿ: ಸಚಿವ ಪ್ರಿಯಾಂಕ್ ಖರ್ಗೆ ಟೀಕೆ

Kalaburagi; ಮೋದಿ ಗ್ಯಾರಂಟಿಗೆ ನೋ ವಾರಂಟಿ: ಸಚಿವ ಪ್ರಿಯಾಂಕ್ ಖರ್ಗೆ ಟೀಕೆ

crime (2)

Kalaburagi:ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಬರ್ಬರ ಹತ್ಯೆ

Lok Sabha Elections; ಸೋಲಿನ ಭೀತಿಯಿಂದ ಸ್ಪರ್ಧೆ ಮಾಡದ ಖರ್ಗೆ: ಅಗರವಾಲ್‌

Lok Sabha Elections; ಸೋಲಿನ ಭೀತಿಯಿಂದ ಸ್ಪರ್ಧೆ ಮಾಡದ ಖರ್ಗೆ: ಅಗರವಾಲ್‌

ಮೊದಲಿನ ಗ್ಯಾರಂಟಿಗಳೇ ಕೊಟ್ಟಿಲ್ಲ, ಈಗೇನು ಕೊಡ್ತಾರೆ: ಕೇಂದ್ರಕ್ಕೆ ಖರ್ಗೆ ಪ್ರಶ್ನೆ

ಮೊದಲಿನ ಗ್ಯಾರಂಟಿಗಳೇ ಕೊಟ್ಟಿಲ್ಲ, ಈಗೇನು ಕೊಡ್ತಾರೆ: ಕೇಂದ್ರಕ್ಕೆ ಖರ್ಗೆ ಪ್ರಶ್ನೆ

Election; ದಿಂಗಾಲೇಶ್ವರ ಸ್ವಾಮೀಜಿ ಕಾಂಗ್ರೆಸ್ ಸೇರುವ ವಿಚಾರ ಸದ್ಯಕ್ಕಿಲ್ಲ:ಡಿಕೆ ಶಿವಕುಮಾರ್

Election; ದಿಂಗಾಲೇಶ್ವರ ಸ್ವಾಮೀಜಿ ಕಾಂಗ್ರೆಸ್ ಸೇರುವ ವಿಚಾರ ಸದ್ಯಕ್ಕಿಲ್ಲ:ಡಿಕೆ ಶಿವಕುಮಾರ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.