ನೊಂದವರಿಗೆ ನೆರವಾಗಿ: ಮೌಲಾನಾ ಅಬ್ದುಲ್
Team Udayavani, Aug 23, 2018, 1:06 PM IST
ವಾಡಿ: ತ್ಯಾಗ ಬಲಿದಾನದ ಸಂಕೇತವಾಗಿರುವ ಬಕ್ರೀದ್ ಹಬ್ಬವನ್ನು ಮುಸ್ಲಿಂರು ತಾಲೂಕಿನ ಈದ್ಗಾ ಮೈದಾನಗಳಲ್ಲಿ ಸಾಮೂಹಿಕ ನಮಾಜ್ ಮಾಡುವ ಮೂಲಕ ಆಚರಿಸಿದರು. ಪಟ್ಟಣದ ಹೊರ ವಲಯದ ಈದ್ಗಾ ಮೈದಾನದಲ್ಲಿ ಬೆಳಗ್ಗೆ 8:15ಕ್ಕೆ ಬಕ್ರೀದ್ ಹಬ್ಬದ ನಮಾಜ್ ಆರಂಭಿಸಿದ ಜಾಮೀಯಾ ಮಸೀದಿಯ ಮೌಲಾನಾ ಅಬ್ದುಲ್ ಖಾಲೀದ್, ಈದ್ ವಿಶೇಷತೆ ಹಾಗೂ ಧರ್ಮ ಸಂದೇಶಗಳ ಕುರಿತು ಮಾತನಾಡಿದರು.
ಜೀವನದಲ್ಲಿ ತ್ಯಾಗ ಮಾಡಬೇಕಾದ ಹಲವು ಸಂದರ್ಭಗಳನ್ನು ಸಮರ್ಪಕವಾಗಿ ಬಳಸಿಕೊಂಡು ನೊಂದವರಿಗೆ ನೆರವಾಗಬೇಕು. ಅಲ್ಲಾಹನ ಸ್ಮರಣೆಯೇ ನಿಜವಾದ ಪ್ರಾರ್ಥನೆಯಾಗಿದ್ದು, ಜೀವನದಲ್ಲಿ ಎದುರಾಗುವ ಸುಖ -ದುಃಖವನ್ನು ಸಮನಾಂತರದಲ್ಲಿ ಸ್ವೀಕರಿಸುವ ಗುಣ ಹೊಂದಬೇಕು ಎಂದರು.
ಜಾಮೀಯಾ ಮಸೀದಿ ಸಮಿತಿ ಅಧ್ಯಕ್ಷ ಮಕುಲ್ ಜಾನಿ ಸೇರಿದಂತೆ ಸಾವಿರಾರು ಜನ ಮುಸ್ಲಿಂರು ಸಾಮೂಹಿಕ ಪ್ರಾರ್ಥನೆಯಲ್ಲಿ ಪಾಲ್ಗೊಂಡಿದ್ದರು. ನಮಾಜ್ ನಂತರ ಈದ್ಗಾದಲ್ಲಿನ ತಮ್ಮ ಕುಟುಂಬ ಸಂಬಂಧಿಕರ ಸಮಾಧಿಗಳಿಗೆ ಹೂಗಳನ್ನು ಅರ್ಪಿಸಿ ಪ್ರಾರ್ಥನೆ ಸಲ್ಲಿಸಿದರು. ರಾವೂರ, ಹಳಕರ್ಟಿ, ಕುಂದನೂರ, ಇಂಗಳಗಿ, ಸನ್ನತಿ, ನಾಲವಾರ, ಕೊಲ್ಲೂರ ಗ್ರಾಮಗಳಲ್ಲಿ ಬಕ್ರೀದ್ ಹಬ್ಬದ ಸಾಮೂಹಿಕ ನಮಾಜ್ ನಡೆದವು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ
Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ
Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
MUST WATCH
ಹೊಸ ಸೇರ್ಪಡೆ
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ; ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ