ಕಬ್ಬು ಬೆಳೆಗಾರರಿಂದ ಹೆದ್ದಾರಿ ತಡೆ
Team Udayavani, Aug 18, 2022, 5:44 PM IST
ಅಫಜಲಪುರ: ಕಬ್ಬಿನ ಮೇಲೆ ಪ್ರತಿ ಕ್ವಿಂಟಲ್ಗೆ ಕೇವಲ 15ರೂ., ಟನ್ಗೆ 3050ರೂ. ಏರಿಕೆ ಮಾಡುವ ಮೂಲಕ ಅವೈಜ್ಞಾನಿಕ ಬೆಲೆ ನಿಗದಿ ಪಡಿಸಿದ್ದನ್ನು ಖಂಡಿಸಿ ತಾಲೂಕು ಕಬ್ಬು ಬೆಳೆಗಾರರ ಸಂಘದವರು ಪಟ್ಟಣದಲ್ಲಿ ಹೆದ್ದಾರಿ ತಡೆದು ಪ್ರತಿಭಟಿಸಿದರು.
ಪ್ರತಿಭಟನೆ ಉದ್ದೇಶಿಸಿ ಮಾತನಾಡಿದ ಸಂಘದ ತಾಲೂಕು ಅಧ್ಯಕ್ಷ ರಮೇಶ ಹೂಗಾರ, ಕೇಂದ್ರ ಸರ್ಕಾರ ಪ್ರತಿ ಟನ್ ಕಬ್ಬಿಗೆ 3050ರೂ. ಬೆಲೆ ನಿಗದಿ ಮಾಡಿದ್ದು ಸರಿಯಲ್ಲ. ಕೂಡಲೇ ಇದನ್ನು ಹಿಂಪಡೆದು ರೈತರೊಂದಿಗೆ ಚರ್ಚಿಸಿ ನ್ಯಾಯಯುತವಾಗಿ ಎಫ್ ಆರ್ಪಿ ದರ ನಿಗದಿಪಡಿಸಬೇಕು ಎಂದು ಆಗ್ರಹಿಸಿದರು.
ತಾಲೂಕಿನಲ್ಲಿ ಹೆಚ್ಚು ಮಳೆಯಾಗಿ ಬೆಳೆ ಹಾಳಾಗಿದೆ. ಕೂಡಲೇ ಪರಿಹಾರ ನೀಡಬೇಕು. ಸಹಕಾರಿ ಸಂಘಗಳಲ್ಲಿ ಸಾಲ ಸೌಲಭ್ಯ ನೀಡುತ್ತಿಲ್ಲ. ಕೂಡಲೇ ಸಾಲ ಮನ್ನಾ ಮಾಡುವುದರ ಜೊತೆಗೆ ಹೊಸ ಸಾಲ ನೀಡಬೇಕು. ಹೊಲಗಳಲ್ಲಿರುವ ರೈತರ ಮನೆಗಳಿಗೆ ರಾತ್ರಿ ವೇಳೆಯಲ್ಲಿ ವಿದ್ಯುತ್ ಸಂಪರ್ಕ ಕಲ್ಪಿಸಬೇಕು ಎಂದು ತಹಶೀಲ್ದಾರ್ ಸಂಜಿವಕುಮಾರ ದಾಸರ್ ಗೆ ಮನವಿ ಸಲ್ಲಿಸಿದರು.
ದೇಶದಲ್ಲಿ ಉದ್ಯಮಿಗಳ 9.60 ಲಕ್ಷ ಕೋಟಿ ಸಾಲ ಮನ್ನಾ ಮಾಡಿರುವ ಮೋದಿ ಸರ್ಕಾರಕ್ಕೆ ರೈತರ ಸಾಲ ಮನ್ನಾ ಮಾಡಲಾಗುತ್ತಿಲ್ಲ. ಇದನ್ನು ನೋಡಿದಾಗ ಇದು ರೈತರ ಪರ, ಜನರ ಪರವಾದ ಸರ್ಕಾರವಲ್ಲ ಎನ್ನುವ ಭಾವನೆ ಮೂಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಮುಖಂಡರಾದ ಲಕ್ಷ್ಮೀಪುತ್ರ ಮನಮಿ, ಮಲ್ಲು ಬಳೂರ್ಗಿ, ಶೇಖರಗೌಡ ಪಾಟೀಲ್ ಆನೂರ, ಮಹಾದೇವಪ್ಪ ಶೇರಿಕಾರ, ಶರಣಗೌಡ ಪಾಟೀಲ್, ಬಸವರಾಜ ಹಳಿಮನಿ, ಭಾಗಣ್ಣ ಕುಮಬಾರ, ಬಸು ಪಾಟೀಲ್, ಧರೇಪ್ಪ ಡಾಂಗೆ, ಸಿದ್ಧು ಪೂಜಾರಿ, ಅಂಬಾಜಿ ತೆನ್ನಳ್ಳಿ, ಬಸವರಾಜ ವಾಳಿ, ಧಾನು ನೂಲಾ, ಸಿದ್ಧು ಸೋಮಜಾಳ, ಗುರು ಜಮಾದಾರ ಮತ್ತಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ
Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ
Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್
MUST WATCH
ಹೊಸ ಸೇರ್ಪಡೆ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್