ಚಿಗರಳ್ಳಿ ಕ್ರಾಸ್‌ನಲ್ಲಿ ಹೆದ್ದಾರಿ ಬಂದ್‌

•ಹಿಡಿಗಂಟು ನೀಡಲು ಆದೇಶಿಸಿರುವುದು ರೈತರಿಗೆ ಮಾರಕ•ಭೂಸ್ವಾಧೀನ ಕಾಯ್ದೆ ತಿದ್ದುಪಡಿ ರದ್ದತಿಗೆ ಒತ್ತಾಯ

Team Udayavani, Jun 11, 2019, 9:36 AM IST

kalburgi-tdy-1..

ಕಲಬುರಗಿ: ಹೆದ್ದಾರಿ ತಡೆದು ರೈತರು ನಡೆಸಿದ ಪ್ರತಿಭಟನೆಯಿಂದಾಗಿ ವಾಹನಗಳು ಸಾಲುಗಟ್ಟಿ ನಿಂತಿರುವುದು.

ಕಲಬುರಗಿ: ರಾಜ್ಯ ಸಮ್ಮಿಶ್ರ ಸರ್ಕಾರ ಜಾರಿಗೆ ತಂದಿರುವ ಭೂಸ್ವಾಧೀನ ಕಾಯ್ದೆ ತಿದ್ದುಪಡಿ ವಿರೋಧಿಸಿ ಜಿಲ್ಲೆಯ ಜೇವರ್ಗಿ ತಾಲೂಕು ಚಿಗರಳ್ಳಿ ಕ್ರಾಸ್‌ನಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ (ಕೋಡಿಹಳ್ಳಿ ಚಂದ್ರಶೇಖರ ಬಣ) ನೇತೃತ್ವದಲ್ಲಿ ರೈತರು ಹೆದ್ದಾರಿ ಬಂದ್‌ ಮಾಡಿ ಪ್ರತಿಭಟನೆ ನಡೆಸಿದರು.

ಭೂಸ್ವಾಧೀನ ಕಾಯ್ದೆ ತಿದ್ದುಪಡಿ ರದ್ದತಿ ಒತ್ತಾಯಿಸಿ ಸೋಮವಾರ ರಾಜ್ಯಾದ್ಯಂತ ಎಲ್ಲ ಜಿಲ್ಲೆಗಳಲ್ಲಿ ಹೆದ್ದಾರಿ ಬಂದ್‌ಗೆ ಕರೆ ನೀಡಿದ್ದ ಹಿನ್ನೆಲೆಯಲ್ಲಿ ಬೀದರ-ಶ್ರೀರಂಗ ಪಟ್ಟಣ ರಾಜ್ಯ ಹೆದ್ದಾರಿ-218 ಚಿಗರಳ್ಳಿ ಕ್ರಾಸ್‌ ಹತ್ತಿರ ವಾಹನ ಸಂಚಾರ ತಡೆದರು.

ಜಿಲ್ಲಾಧಿಕಾರಿ ಅಥವಾ ತಹಶೀಲ್ದಾರ್‌ ಸ್ಥಳಕ್ಕೆ ಬರಬೇಕೆಂದು ರೈತ ಮುಖಂಡರು ಪಟ್ಟು ಹಿಡಿದು ಪ್ರತಿಭಟನೆ ನಡೆಸಿದರು. ಎರಡು ಗಂಟೆಗಳ ಕಾಲ ನಿರಂತರ ಪ್ರತಿಭಟನೆಯಿಂದಾಗಿ ವಾಹನಗಳು ಸಾಲುಗಟ್ಟಿ ನಿಂತಿದ್ದವು. ಆಂಬ್ಯುಲೆನ್ಸ್‌ ಸೇರಿದಂತೆ ತುರ್ತು ವಾಹನಗಳಿಗೆ ಪೊಲೀಸರು ಪರ್ಯಾಯ ರಸ್ತೆ ಮೂಲಕ ಸಂಚಾರಕ್ಕೆ ಅನುಕೂಲ ಮಾಡಿಕೊಟ್ಟರು.

ದೇಶದಲ್ಲಿ 2004ನೇ ಸಾಲಿಗಿಂತ ಮೊದಲು ಇದ್ದ ಭೂಸ್ವಾಧೀನ ಕಾಯ್ದೆ ರಿಯಲ್ ಎಸ್ಟೇಟ್ ಕುಳಗಳು ರೈತರ ಜಮೀನು ಅಕ್ರಮವಾಗಿ ಪಡೆಯಲು ಅನುಕೂಲವಾಗಿತ್ತು. ಇದೇ ಸಂದರ್ಭದಲ್ಲಿ ಎಸ್‌ಇಝಡ್‌, ಕೈಗಾರಿಕೆಗಳು ಹಾಗೂ ನಗರೀಕರಣದ ಹೆಸರಿನಲ್ಲಿ ದೇಶಾದ್ಯಂತ ರೈತರ ಭೂಮಿಯನ್ನು ಸ್ವಾಧಿಧೀನಪಡಿಸಿಕೊಳ್ಳಲಾಗಿದೆ. ರೈತರ ಜಮೀನನ್ನು ಮೂರು ಕಾಸಿಗೆ ಕಸಿದುಕೊಳ್ಳುವುದು ದಂಧೆಯಾಗಿದೆ. ಜಿಲ್ಲೆಯಲ್ಲಿ 500 ಎಕರೆ ರೈತರ ಭೂ ಸ್ವಾಧೀನ ಮಾಡಲಾಗಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.

ರೈತರ ಒಪ್ಪಿಗೆ, ಮಾರುಕಟ್ಟೆ ದರದ ನಾಲ್ಕು ಪಟ್ಟು ಪರಿಹಾರ, ನಗರ ಪ್ರದೇಶಕ್ಕೆ ಹೊಂದಿಕೊಂಡಿದ್ದರೆ ಮಾರಾಟ ದರದ ಎರಡು ಪಟ್ಟು ಪರಿಹಾರ, ಸಾರ್ವಜನಿಕ ಉದ್ದೇಶಕ್ಕೆ ಮಾತ್ರ ಭೂ ಸ್ವಾಧೀನ, ಭೂಸ್ವಾಧೀನ ಮಾಡಿಕೊಂಡು ಐದು ವರ್ಷದೊಳಗೆ ಯೋಜನೆಗೆ ಬಳಕೆ ಮಾಡುವುದು ಇಲ್ಲದೇ ಹೋದಲ್ಲಿ ಭೂಮಿಯನ್ನು ರೈತರಿಗೆ ಮರಳಿಸುವುದು ಹಾಗೂ ಪುನರ್ವಸತಿ ಪರಿಹಾರವು ಹಣದ ರೂಪದಲ್ಲಿ ಇರುವುದು ಮುಂತಾದ ಷರತ್ತುಗಳ ಕಾಯ್ದೆಯನ್ನು ರಾಜ್ಯ ಸಮ್ಮಿಶ್ರ ಸರ್ಕಾರವು ತಿದ್ದುಪಡಿ ತಂದಿದೆ ಎಂದು ಅಕ್ರೋಶ ವ್ಯಕ್ತಪಡಿಸಿದರು.

ಭೂಸ್ವಾಧೀನದಲ್ಲಿ ಜಿಲ್ಲಾಧಿಕಾರಿಗಳಿಗೆ ಹೆಚ್ಚಿನ ಅಧಿಕಾರ ನೀಡಿರುವುದು, ಹಿಡಿಗಂಟು ನೀಡಲು ಆದೇಶಿಸಿದ್ದು ರೈತರಿಗೆ ಮಾರಕವಾಗಿದೆ. ಕೂಡಲೇ ರಾಜ್ಯ ಸರ್ಕಾರ ತಿದ್ದುಪಡಿಯನ್ನು ರದ್ದುಪಡಿಸಬೇಕು ಎಂದು ಪ್ರತಿಭಟನಾನಿತರ ರೈತರು ಒತ್ತಾಯಿಸಿದರು.

ಇದೇ ಸಂದರ್ಭದಲ್ಲಿ ದೇಶದ ಬರಪೀಡಿತ ರಾಜ್ಯಗಳಲ್ಲಿ ಕರ್ನಾಟಕ ಎರಡನೇ ಸ್ಥಾನದಲ್ಲಿದೆ. ಮೇವು ಹಾಗೂ ನೀರಿನ ಸಮಸ್ಯೆಯಿಂದ ರೈತರು ತಮ್ಮ ಜಾನುವಾರುಗಳನ್ನು ಮಾರಾಟ ಮಾಡುತ್ತಿದ್ದಾರೆ. ಕೆಲಸಕ್ಕಾಗಿ ಕೃಷಿ ಕೂಲಿಕಾರರು ವಲಸೆ ಹೋಗುತ್ತಿದ್ದಾರೆ. ಕೂಡಲೇ ರಾಜ್ಯ ಸರ್ಕಾರ ಸಮರೋಪಾದಿಯಲ್ಲಿ ಬರ ಪರಿಹಾರ ಕಾಮಗಾರಿ ಆರಂಭಿಸಬೇಕು ಎಂದು ಆಗ್ರಹಿಸಿದರು. ಜೇವರ್ಗಿ ಇನ್ಸ್‌ಪೆಕ್ಟರ್‌ ಮತ್ತು ಯಡ್ರಾಮಿ ಪೊಲೀಸ್‌ ಠಾಣೆ ಪೊಲೀಸರು ಸ್ಥಳಕ್ಕೆ ಆಗಮಿಸಿ ರೈತ ಮನವೊಲಿಸುವ ಕಾರ್ಯ ಮಾಡಿದರು.

ಸಂಘದ ಜಿಲ್ಲಾಧ್ಯಕ್ಷ ಬಸುಗೌಡ ಗಂವಾರ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಲ್ಲಾ ಪಟೇಲ್ ಮಾಲಿಬಿರಾದಾರ, ಜಿಲ್ಲಾ ಗೌರವಾಧ್ಯಕ್ಷ ಸೈಯದ್‌ ಗೌಸ್‌ ಮೈನುದ್ದೀನ್‌, ಶರಣಪ್ಪ ಜಂಬಾಳಿ ಬಿದನೂರ, ಬಾಬುರಾವ ಚವ್ಹಾಣ, ಮಲ್ಲಿಕಾರ್ಜುನ ಹೇರುಂಡಿ ಗಂವಾರ, ಬಾಬುರಾವ ಚಿಂಚೋಳಿ ಸೇರಿದಂತೆ ವಿವಿಧ ರೈತ ಸಂಘಟನೆಗಳ ಕಾರ್ಯಕರ್ತರು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

14-fusion

Rural Life: ಗ್ರಾಮೀಣ ಬದುಕಿನ ಮೆಲುಕು

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

13-uv-fusion

MOTHER: ತಾಯಿಗಿಂತ ಮಿಗಿಲಾದ ದೇವರಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.