ಹೈಕಕ್ಕೆ ಪ್ರತ್ಯೇಕ ಸಚಿವರ ನೇಮಕವಾಗಲಿ
Team Udayavani, Feb 1, 2018, 10:23 AM IST
ಕಲಬುರಗಿ: ಹೋರಾಟದ ಫಲವಾಗಿ ಪಡೆಯಲಾದ 371ನೇ (ಜೆ) ವಿಧಿ ಅಭಿವೃದ್ಧಿಗೆ ಪೂರಕವಾಗಿದೆಯಾದರೂ ಸರ್ವತೋಮುಖ ಅಭಿವೃದ್ಧಿಗಾಗಿ ಪ್ರತ್ಯೇಕ ಸಚಿವರ ನೇಮಕ ಮಾಡುವುದು ಅಗತ್ಯವಾಗಿದೆ ಎಂದು ಎಚ್ಕೆಸಿಸಿಐ
ಮಾಜಿ ಅಧ್ಯಕ್ಷ ಉಮಾಕಾಂತ ನಿಗ್ಗುಡಗಿ ಅಭಿಪ್ರಾಯ ವ್ಯಕ್ತಪಡಿಸಿದರು.
ನಗರದ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಮಾತೋಶ್ರೀ ಗೋದುತಾಯಿ ದೊಡ್ಡಪ್ಪ ಅಪ್ಪ ಮಹಿಳಾ ಕಲಾ ಮತ್ತು ವಾಣಿಜ್ಯ ಮಹಾ ವಿದ್ಯಾಲಯದಲ್ಲಿ ಬುಧವಾರ ಹಮ್ಮಿಕೊಂಡಿದ್ದ “ಹೈಕ ಪ್ರದೇಶದ 371 (ಜೆ) ಅನುಷ್ಠಾನದಲ್ಲಿನ ಸಮಸ್ಯೆ ಸವಾಲುಗಳು’ ಎನ್ನುವ ವಿಭಾಗ ಮಟ್ಟದ ವಿಚಾರ ಸಂಕಿರಣದಲ್ಲಿ ಪ್ರಮುಖ ಭಾಷಣಕಾರರಾಗಿ ಅವರು ಮಾತನಾಡಿದರು.
ಹೈಕ ಭಾಗದ ಅಭಿವೃದ್ಧಿಗಾಗಿ ಒದಗಿಸಲಾಗಿರುವ ಕಲಂ 371(ಜೆ)ನೇ ಕಲಂ ಹಲ್ಲಿಲ್ಲದ ಹಾವಿನಂತಾಗಿದೆ.
ಇದರಲ್ಲಿರುವ ನೂನ್ಯತೆಗಳನ್ನು ಸರಿಪಡಿಸಿಕೊಳ್ಳದಿದ್ದರೆ ಇದರಿಂದ ಯಾವ ಪ್ರಯೋಜನವು ಈ ಭಾಗದ ಜನತೆಗೆ
ಆಗುವುದಿಲ್ಲ. ಆದ್ದರಿಂದ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳು ಈ ಭಾಗದ ಜನತೆಗೆ ನ್ಯಾಯ ದೊರಕಿಸಿ ಕೊಡಬೇಕಾದರೆ ತಮ್ಮ ಇಚ್ಛಾಶಕ್ತಿ ಪ್ರದರ್ಶಿಸುವುದು ಅಗತ್ಯವಾಗಿದೆ ಎಂದರು.
ರಾಜ್ಯ ಸರ್ಕಾರವು ಉದ್ಯೋಗದ ವಿಷಯದಲ್ಲಿ ಸುಳ್ಳು ಹೇಳುತ್ತಿದೆ 50 ಸಾವಿರ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳುವುದಾಗಿ ಹೇಳಿದ ಸರ್ಕಾರ ಇಲ್ಲಿಯವರೆಗೆ ಕೇವಲ 18993 ಹುದ್ದೆಗಳನ್ನು ಮಾತ್ರ ತುಂಬಿಕೊಂಡಿದೆ.
ಕಲಂ 371(ಜೆ)ರ ಅಡಿ ಸಮರ್ಪಕ ಅನುಷ್ಠಾನಕ್ಕಾಗಿ ನೇಮಿಸಿರುವ ಸಂಪುಟ ಉಪ ಸಮಿತಿಯಲ್ಲಿ ಬೇರೆ ಭಾಗದವರು ಅಧ್ಯಕ್ಷರಾಗಿರುವುದರಿಂದ ತೊಂದರೆ ಉಂಟಾಗುತ್ತಿದೆ. ಈ ತಾರತಮ್ಯ ಹೋಗಲಾಡಿಸಬೇಕಾದರೆ ಉಪಸಮಿತಿಗೆ ಈ ಭಾಗದವರನ್ನೇ ಅಧ್ಯಕ್ಷರನ್ನಾಗಿ ಮಾಡಬೇಕು ಎಂದು ಹೇಳಿದರು.
ವಿಚಾರ ಸಂಕಿರಣ ಉದ್ಘಾಟಿಸಿ ಮಾತನಾಡಿದ ಶರಣಬಸವ ವಿಶ್ವ ವಿದ್ಯಾಲಯದ ಕುಲಸಚಿವ ಡಾ| ಅನಿಲಕುಮಾರ ಬಿಡವೆ, ಹಿಂದುಳಿದ ಭಾಗ ಎನ್ನುವ ಹಣೆಪಟ್ಟಿ ಅಳಿಸಿ ಹಾಕಲು ಶಿಕ್ಷಣವೊಂದೇ ಪ್ರಬಲ ಸಾಧನವಾಗಿದೆ. ಆದ್ದರಿಂದ ವಿದ್ಯಾರ್ಥಿಗಳು ಗುಣಮಟ್ಟದ ಶಿಕ್ಷಣ ಪಡೆದು ಈ ಭಾಗವನ್ನು ಸಮೃದ್ಧಗೊಳಿಸಬೇಕು ಎಂದು ನುಡಿದರು. ಡಾ| ಬಸವರಾಜ ಕುಮೂ°ರ, ಸಂಗೀತಾ ಕಟ್ಟಿ, ಎಸ್.ಎ. ಪಾಳೇಕಾರ, ಆಯ್.ಎಸ್. ವಿದ್ಯಸಾಗರ ಸಂಪನ್ಮೂಲ ವ್ಯಕ್ತಿಗಳಾಗಿ ಅಗಮಿಸಿ, ತಮ್ಮ ವಿಚಾರ ಮಂಡಿಸಿದರು.
ನಗರದ 15 ಕಾಲೇಜುಗಳ 30 ವಿದ್ಯಾರ್ಥಿಗಳು ಕಲಂ 371(ಜೆ)ನೇ ಕಲಂ ಕುರಿತು ಪ್ರಬಂಧ ಮಂಡಿಸಿದರು.
ಪ್ರಾಚಾರ್ಯೆ ಡಾ| ನೀಲಾಂಬಿಕಾ ಶೇರಿಕಾರ ಅಧ್ಯಕ್ಷತೆ ವಹಿಸಿದ್ದರು. ಸಂಗೀತ ವಿಭಾಗದ ವಿದ್ಯಾರ್ಥಿನಿಯರು
ಪ್ರಾರ್ಥಿಸಿದರು, ಪ್ರೊ| ಎನ್.ಎಸ್. ಹೂಗಾರ ಸ್ವಾಗತಿಸಿದರು. ಡಾ| ಪುಟ್ಟಮಣಿ ದೇವಿದಾಸ ನಿರೂಪಿಸಿದರು, ಡಾ| ಎಸ್. ಎಸ್. ಪಾಟೀಲ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಖಡಕ್ ಬಿಸಿಲು- ಪೊಲೀಸ್ ತಳ್ಳಾಟದಿಂದ ಸಂಸದ ಡಾ.ಜಾಧವ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು
Siddaramaiah ಸಿಎಂ ಆದ ಬಳಿಕ ರಾಜ್ಯಕ್ಕೆ ಬರಗಾಲ: ವಿಜಯೇಂದ್ರ
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
MUST WATCH
ಹೊಸ ಸೇರ್ಪಡೆ
Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ
ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ
Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್ಗೆ ಗೆಲುವು: ಮುನಿಯಪ್ಪ ವಿಶ್ವಾಸ
Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್
BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ