ರಾಜಧಾನಿಯಲ್ಲೂ ಎಚ್ಕೆಇ ಬಳ್ಳಿ ಹಬ್ಬಲಿ
Team Udayavani, Oct 6, 2018, 11:21 AM IST
ಕಲಬುರಗಿ: ಹಿಂದುಳಿದ ಹೈದ್ರಾಬಾದ ಕರ್ನಾಟಕ ಭಾಗದಲ್ಲಿನ ಶೈಕ್ಷಣಿಕ ಅಭಿವೃದ್ಧಿಗೆ ತನ್ನದೇ ಕೊಡುಗೆ ನೀಡಿರುವ ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆ (ಎಚ್ಕೆಇ) ಇದೀಗ ಬೆಂಗಳೂರಿನಲ್ಲಿ ಇಂಟರ್ನ್ಯಾಷನಲ್ ಶಾಲೆಯೊಂದು ತೆರೆಯುವ ಮುಖಾಂತರ ಮಹೋನ್ನತ ಹೆಜ್ಜೆ ಇಟ್ಟಿದೆ ಎಂದು ಸಮಾಜ ಕಲ್ಯಾಣ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.
ಬೆಂಗಳೂರಿನ ಸದಾಶಿವ ನಗರದಲ್ಲಿ ಶುಕ್ರವಾರ ಎಚ್ಕೆಇ ಸಂಸ್ಥೆಯ ಇಂಟರ್ನ್ಯಾಷನಲ್ ಪಬ್ಲಿಕ್ ಶಾಲೆಯ ಎರಡನೇ, ಮೂರನೇ ಹಾಗೂ ನಾಲ್ಕನೇ ಅಂತಸ್ತಿನ ಸಂಕಿರಣ ನಿರ್ಮಾಣ ಕಾಮಗಾರಿಗೆ ಶಿಲಾನ್ಯಾಸ ನೆರವೇರಿಸಿ ಮಾತನಾಡಿದ ಅವರು, ಇಂಟರ್ನ್ಯಾಷನಲ್ ಶಾಲೆಗೆ ಅನುಗುಣವಾಗಿ ಕಟ್ಟಡ ನಿರ್ಮಾಣವಾಗುತ್ತಿರುವ ಜತೆಗೆ ಇತರ ಕಾರ್ಯಗಳು ಸಹ ಜತೆ-ಜತೆಗೆ ಬರಬೇಕು ಎಂದರು.
ಎಚ್ಕೆಇ ಸಂಸ್ಥೆ ಅಧ್ಯಕ್ಷ ಭೀಮಾಶಂಕರ ಬಿಲಗುಂದಿ ಅಧ್ಯಕ್ಷತೆ ವಹಿಸಿ, ಈಗಾಗಲೇ ಹೇಳಿರುವಂತೆ ಬೆಂಗಳೂರಲ್ಲಿ ಎಚ್ಕೆಇ ರಾಷ್ಟ್ರೀಯ ಪಬ್ಲಿಕ್ ಶಾಲಾ ಕಟ್ಟಡಕ್ಕೆ ಚಾಲನೆ ನೀಡಲಾಗಿದೆ. ಮುಂದಿನ ವರ್ಷ(2019)ದಿಂದ ಸಂಸ್ಥೆಯ ವತಿಯಿಂದ ರಾಷ್ಟ್ರೀಯ ಪಬ್ಲಿಕ್ ಶಾಲೆ ಆರಂಭಿಸಲು ಉದ್ದೇಶಿಸಲಾಗಿದೆ ಎಂದು ಹೇಳಿದರು.
ಬೀದರ ಹಾಗೂ ರಾಯಚೂರಲ್ಲಿ ಸಹ 10 ಹಾಗೂ 5 ಕೋಟಿ ರೂ. ವೆಚ್ಚದಲ್ಲಿ ರಾಷ್ಟ್ರೀಯ ಪಬ್ಲಿಕ್ ಮಾದರಿಯ ಶಾಲೆಗಳನ್ನು ಪ್ರಾರಂಭಿಸಲು ಉದ್ದೇಶಿಸಲಾಗಿದೆ. ಬರುವ ಡಿಸೆಂಬರ್ ಮಾಸದಲ್ಲಿ ಕಟ್ಟಡ ಪ್ರಾರಂಭಕ್ಕೆ ಅಡಿಗಲ್ಲು ನೆರವೇರಿಸಲಾಗುವುದು. ಮುಖ್ಯವಾಗಿ ಸಂಸ್ಥೆಯ ಅನುದಾನಿತ ಪದವಿ ಕಾಲೇಜುಗಳಲ್ಲಿ 80ಕ್ಕೂ ಹೆಚ್ಚು ಉಪನ್ಯಾಸಕರು ಹಾಗೂ ಅನುದಾನಿತ ಪ್ರೌಢ ಶಾಲೆಗಳಲ್ಲಿ 8 ಹುದ್ದೆಗಳ ಭರ್ತಿಗೆ ಸರ್ಕಾರದ ಅನುಮತಿ ಕೇಳಲಾಗಿದೆ ಎಂದು ತಿಳಿಸಿದರು.
ಶಾಸಕರಾದ ಎಂ.ವೈ. ಪಾಟೀಲ, ಬಿ.ಜಿ. ಪಾಟೀಲ, ಸಂಸ್ಥೆ ಉಪಾಧ್ಯಕ್ಷ ಡಾ| ಶಿವಾನಂದ ದೇವರಮನಿ, ಆಡಳಿತ ಮಂಡಳಿ ಕಾರ್ಯದರ್ಶಿ ಡಾ| ನಾಗೇಂದ್ರ ಮಂಠಾಳೆ, ಜಂಟಿ ಕಾರ್ಯದರ್ಶಿ ಗಂಗಾಧರ ಏಲಿ, ಸದಸ್ಯರಾದ ವಿಜಯಕುಮಾರ ದೇಶಮುಖ ಮುಂತಾದವರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ
Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ
Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ