ಹೋಳಾ ಹಬ್ಬ ಭಾರತೀಯ ಕೃಷಿ ಸಂಸ್ಕೃತಿಯ ಜೀವಾಳ


Team Udayavani, Aug 19, 2017, 11:53 AM IST

gulbarga 10.jpg

ಕಲಬುರಗಿ: ಭಾರತ ದೇಶದ ಸಂಸ್ಕೃತಿಯಲ್ಲಿ ಮಾತ್ರ ಪ್ರಾಣಿಗಳನ್ನು ಗೌರವಿಸುವ ಮತ್ತು ಸತ್ಕರಿಸುವ ಹಲವಾರು ವಿಶೇಷ ಹಬ್ಬ ಹರಿದಿನಗಳನ್ನು ಆಚರಿಸುವ ವಿಶೇಷ ಸಂಸ್ಕೃತಿ ಮತ್ತು ಪರಂಪರೆ ರೂಢಿಯಲ್ಲಿದೆ. ಎತ್ತುಗಳು ಕೃಷಿ ಸಂಸ್ಕೃತಿಯ ಅವಿಭಾಜ್ಯ ಅಂಗ. ಸದಾ ಮಳೆ, ಗಾಳಿ, ಬಿಸಿಲನ್ನು ಲೆಕ್ಕಿಸದೆ ಕೃಷಿ ಚಟುವಟಿಕೆಗಳಿಗೆ ಹಗಲಿರುಳು ಶ್ರಮಿಸುವ ಮತ್ತು ಕಷ್ಟಪಡುವ ಈ ಮೂಕ ಪ್ರಾಣಿ ಎತ್ತುಗಳಿಗೆ ಕೃತಜ್ಞತಾ ಭಾವ ವ್ಯಕ್ತಪಡಿಸಲು ರೈತರು “ಕಾರಹುಣ್ಣಿಮೆ’ ಹಾಗೂ “ಹೋಳಾ’ ಹಬ್ಬಗಳನ್ನು ಎತ್ತುಗಳ ಹಬ್ಬಗಳೆಂದೇ ಆಚರಿಸುವ ಮೂಲಕ ಎತ್ತುಗಳ ಬಗ್ಗೆ ವಿಶೇಷ ಕಾಳಜಿ, ಪ್ರೀತಿ, ಪೂಜನೀಯ ಮತ್ತು ಗೌರವಪೂರ್ವಕ ಭಾವನೆ ತೋರುವರು. ಮಹಾರಾಷ್ಟ್ರ ರಾಜ್ಯದಲ್ಲಿ ಪೋಳಾ ಹಬ್ಬಕ್ಕೆ “ಬೈಲ ಪೋಳಾ’ ವೃಷಭ ಪೂಜನ ಎತ್ತುಗಳ ಹಬ್ಬವೆಂದು ಹಾಗೂ ಜಾರ್ಖಂಡ್‌ ರಾಜ್ಯ ಮತ್ತು ಖಂಡವಾ ಮತ್ತಿತರ ಪ್ರದೇಶಗಳಲ್ಲಿ ಲೋಕಪರ್ವದ ರೂಪದಲ್ಲಿ ಈ ಹಬ್ಬ ಆಚರಿಸುವರು. ಕರ್ನಾಟಕ ರಾಜ್ಯದ ಕೆಲವು ಜಿಲ್ಲೆಗಳಲ್ಲಿ
ರೈತರು ಕಾರಹುಣ್ಣಿಮೆ ಮತ್ತು ಮಹಾರಾಷ್ಟ್ರದ ಗಡಿಭಾಗಕ್ಕೆ ಹೊಂದಿಕೊಂಡ ರಾಜ್ಯದ ಬೀದರ, ಕಲಬುರಗಿ, ವಿಜಯಪುರ ಜಿಲ್ಲೆಗಳಲ್ಲಿ “ಹೋಳಾ’ ಹಬ್ಬವನ್ನು ವಿಭಿನ್ನ ದಿನಗಳಂದು ಆಚರಿಸುವರು. ಮರಾಠಿ ಭಾಷೆಯ “ಪೋಳಿ’ ಮೂಲ ಶಬ್ದದಿಂದ “ಪೋಳಾ’ ಶಬ್ದದ ಉಗಮ ಹಾಗೂ ಮರಾಠಿಯ “ಪೋಳಾ’ ಕನ್ನಡದಲ್ಲಿ “ಹೋಳಾ’ ಎನ್ನುವ ರೂಪ ತಾಳಿರಬಹುದು. ಕನ್ನಡದ ಆಡು ಭಾಷೆಯಲ್ಲಿಯೂ
ಪೋಳ್‌ ಎಂದರೆ ಬೀಜದ ಹೋರಿ ಎಂಬುದು ರೂಢಿಯಲ್ಲಿದೆ. ಕಾರಹುಣ್ಣಿಮೆಯ ದಿನ ಕಳೆದುಹೋದ ಎತ್ತುಗಳು ಶ್ರಾವಣ
ಮಾಸಾಂತ್ಯದಲ್ಲಿ ಬರುವ ದರ್ಶ ಅಥವಾ ಪಿಠೊರಿ(ವದ್ಯ) ಅಮಾವಾಸ್ಯೆಯಂದು ಸಿಕ್ಕಿರುವುದರಿಂದ ಪ್ರತಿ ವರ್ಷದಂತೆ ಈ ವರ್ಷವೂ ಆ. 21ರಂದು ಹೋಳಾ ಹಬ್ಬವನ್ನು ಆಚರಿಸಲಾಗುತ್ತದೆ. ರೈತರು ಹಬ್ಬದ ಹಿಂದಿನ ದಿನ ಅರಿಶಿಣ ಮತ್ತು ಎಣ್ಣೆಯಿಂದ ಎತ್ತುಗಳ ಹೆಗಲಿಗೆ ತಿಕ್ಕಿ, ಶಾಖ ನೀಡಿ ಸ್ನಾನ ಮಾಡಿಸುವರು. ಹಬ್ಬದ ದಿನದಂದು ಬೆಳಗ್ಗೆ ಎತ್ತುಗಳಿಗೆ ಪುನಃ ಸ್ನಾನ, ಅಭ್ಯಂಜನ ಮಾಡಿಸಿ ಎತ್ತುಗಳ ಕೊಂಬುಗಳಿಗೆ ವಿವಿಧ ಬಣ್ಣದ ಪೆಂಟ್‌ ಹಚ್ಚುತ್ತಾರೆ. ಕೊರಳಲ್ಲಿ ಕವಡೆ ಮತ್ತು ಗೆಜ್ಜೆನಾದದ ಸರಮಾಲೆ, ಕಾಲುಗಳಲ್ಲಿ ಗೆಜ್ಜೆ(ತೋಡೆ)
ಮತ್ತು ಬೆನ್ನಲ್ಲಿ ಬಣ್ಣಬಣ್ಣದ ಝೂಲ್‌ ಮತ್ತು ಬೆಲೆಬಾಳುವ ಶಾಲು, ಹಣೆಗೆ ರಂಗುರಂಗಿನ ಹಗ್ಗಗಳಿಂದ ತಯಾರಿಸಿದ ಬಾಸಿಂಗ್‌ ತೊಡಿಸುವರು. ಗುಗ್ಗರಿ ಮತ್ತಿತರ ದ್ರವ ಪದಾರ್ಥ ನೀಡುವರಲ್ಲದೇ ಎತ್ತುಗಳ ನಿಯಂತ್ರಣಕ್ಕಾಗಿ ಬಳಸಲಾಗುವ ನೊಗದ ಹಗ್ಗವನ್ನು ಬದಲಾಯಿಸುವರು. ಮಧ್ಯಾಹ್ನದವರೆಗೆ ಗ್ರಾಮದಲ್ಲಿ ಎತ್ತುಗಳ ಮೆರವಣಿಗೆ ಮತ್ತು ಹನುಮಂತನ ದರ್ಶನ ಮಾಡಿಸುವರು. ಬಳಿಕ ಮನೆಯಲ್ಲಿ ಮುತ್ತೆ„ದೆಯರು ಪೂಜಿಸುವರಲ್ಲದೆ ಎತ್ತುಗಳಿಗೆ ಬೆಲ್ಲ ಮತ್ತು ತುಪ್ಪದೊಂದಿಗೆ ಹೂರಣ ಹೋಳಿಗೆ, ಕರ್ಚೇಕಾಯಿ ಮುಂತಾದ ಮೃಷ್ಠಾನ್ನ ಭೋಜನ ಮಾಡಿಸುವರು. ಎತ್ತುಗಳ ಪೂಜೆ ಮಾಡುವ ರೈತರು ಈ ದಿನದಂದು ಉಪವಾಸವಿದ್ದು, ಎತ್ತುಗಳಿಗೆ ಉಣಬಡಿಸಿದ ಬಳಿಕವೇ ಊಟ ಮಾಡುತ್ತಾರೆ. ಈ ಹಬ್ಬದಂದು ಸಂಜೆ ಆಯಾ ಗ್ರಾಮದ 40-50 ಜೋಡಿ ಎತ್ತುಗಳನ್ನು ಸಣ್ಣಬಂಡಿಗೆ ಜೋಡಿಸಿ ಊರಲ್ಲಿ ವಾದ್ಯಮೇಳದೊಂದಿಗೆ ಜರುಗುವ ಆಕರ್ಷಕ ಮೆರವಣಿಗೆಯಲ್ಲಿ ಹಲವರು ಹರ್ಷೋಲ್ಲಾಸದಿಂದ ಕುಣಿದು ಕುಪ್ಪಳಿಸುತ್ತಾರೆ. ಗ್ರಾಮದ ಮುಖಂಡರು ಊರಿನ ಅಗಸಿ ಬಾಗಿಲಿನಲ್ಲಿ ಕರಿ ಕಡಿದ ನಂತರ ಎತ್ತುಗಳ ಓಟ ಪ್ರಾರಂಭವಾಗುತ್ತದೆ

ಟಾಪ್ ನ್ಯೂಸ್

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ಅರ್ಜಿ ನಿರಾಕರಿಸಿದ ನ್ಯಾಯಾಲಯ

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.