ಗೃಹರಕ್ಷಕ ದಳದ ಕಾರ್ಯ ಮಾದರಿ


Team Udayavani, Jan 1, 2018, 11:04 AM IST

gul-2.jpg

ಕಲಬುರಗಿ: ಹಬ್ಬ ಹರಿದಿನ, ಬಂದೋ ಬಸ್ತ್, ತುರ್ತು ಸೇವೆ ಮತ್ತು ಸುಗಮ ಸಂಚಾರ ನಿರ್ವಹಣೆಯಲ್ಲಿ ಸೇವಾ ಮನೋಭಾವದಿಂದ ತೊಡಗುವ ಗೃಹರಕ್ಷಕ ದಳದ ಸಿಬ್ಬಂದಿ ಕಾರ್ಯ ಮಾದರಿಯಾಗಿದೆ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಎನ್‌. ಶಶಿಕುಮಾರ ಶ್ಲಾಘಿಸಿದರು.

ರವಿವಾರ ಇಲ್ಲಿನ ಜಿಲ್ಲಾ ಗೃಹರಕ್ಷಕ ದಳ ಕಾರ್ಯಾಲಯದ ಆವರಣದಲ್ಲಿ ಹಮ್ಮಿಕೊಂಡಿದ್ದ ಅಖೀಲ ಭಾರತ ಗೃಹರಕ್ಷಕರ
ದಿನಾಚರಣೆಯನ್ನು ಪಾರಿವಾಳಗಳನ್ನು ಹಾರಿ ಬಿಡುವ ಮೂಲಕ ಉದ್ಘಾಟಿಸಿ ಮಾತನಾಡಿದರು.

ರಾಜ್ಯದಲ್ಲಿ ಕಲಬುರಗಿ ಗೃಹರಕ್ಷಕ ದಳ ದೊಡ್ಡದಾಗಿದೆ. ನಿಸ್ವಾರ್ಥ ಸೇವೆ ಸಲ್ಲಿಸಲು ಇಲ್ಲಿನ ದಳಕ್ಕೆ ಇತ್ತೀಚೆಗೆ
ಹೆಚ್ಚಿನ ಸಂಖ್ಯೆಯಲ್ಲಿ ಯುವಕರು ಸೇರುತ್ತಿರುವುದು ಸ್ವಾಗತಾರ್ಹ ಬೆಳವಣಿಗೆಯಾಗಿದೆ. ಗೃಹರಕ್ಷಕ ದಳದವರಿಗೆ ನೀಡಲಾಗುವ ಗೌರವಧನ ಹೆಚ್ಚಿಸಲು ಸರ್ಕಾರದ ಮಟ್ಟದಲ್ಲಿ ಚಿಂತನೆ ನಡೆಯುತ್ತಿದೆ.

ಇಲ್ಲಿನ ಗೃಹರಕ್ಷಕ ದಳಕ್ಕೆ ಬೇಕಾಗುವ ಎಲ್ಲ ರೀತಿಯ ನೆರವನ್ನು ಪೊಲೀಸ್‌ ಇಲಾಖೆಯಿಂದ ನೀಡಲಾಗುವುದು
ಎಂದು ಅಭಯ ನೀಡಿದರು.
 
ಕಾರ್ಯಕ್ರಮ ಅಧ್ಯಕ್ಷತೆ ವಹಿಸಿದ್ದ ಕಲಬುರಗಿ ಗೃಹರಕ್ಷಕ ದಳದ ಸಮಾದೇಷ್ಠರಾದ ಸಂತೋಷಕುಮಾರ ಪಾಟೀಲ ಮಾತನಾಡಿ, 1967ರಲ್ಲಿ ಇಲ್ಲಿ ಗೃಹರಕ್ಷಕ ದಳಪಿಸಿಲಾಗಿದೆ. 50 ವರ್ಷಗಳನ್ನು ಸೇವೆಯಲ್ಲಿ ಪೂರೈಸುವ ಮೂಲಕ ಗೃಹರಕ್ಷಕ ದಳವು ಸುವರ್ಣ ಸಂಭ್ರಮಕ್ಕೆ ಸಾಕ್ಷಿಯಾಗಿದೆ ಎಂದರು. 

ಹೆಚ್ಚುವರಿ ಜಿಲ್ಲಾ ಪೊಲೀಸ್‌ ಅಧೀಕ್ಷಕ ಜಯಪ್ರಕಾಶ, ನಿವೃತ್ತ ಗೃಹರಕ್ಷಕ ದಳದ ಜಿಲ್ಲಾ ಸಮಾದೇಷ್ಠ ಬಿ.ಮಹಾಂತೇಶ ಮಾತನಾಡಿದರು. ಇದೇ ವೇಳೆ ಬಳ್ಳಾರಿಯಲ್ಲಿ ಇತ್ತೀಚೆಗೆ ನಡೆದ 2017-18ನೇ ಸಾಲಿನ ವಿಭಾಗ ಮಟ್ಟದ ಕ್ರೀಡಾಕೂಟದಲ್ಲಿ ಲಘು ರಕ್ಷಣೆಯಲ್ಲಿ ದ್ವಿತೀಯ ಸ್ಥಾನ ಪಡೆದ ಸೈದಪ್ಪ ಎಸ್‌.ಕೆ ನೇತೃತ್ವದ ತಂಡಕ್ಕೆ, ವಲಯ ಮಟ್ಟದ ಅಗ್ನಿಶಾಮಕದಲ್ಲಿ ದ್ವಿತೀಯ ಸ್ಥಾನ ಪಡೆದ ಸೋಮಸೇಖರ ನೇತೃತ್ವದ ತಂಡಕ್ಕೆ, ಪ್ರಸ್ತಕ ಸಾಲಿನಲ್ಲಿ ಉತ್ತಮ ಸಾಧನೆಗೆ„ದು ಮುಂಬಡ್ತಿ ಹೊಂದಿರುವ ಮತ್ತು ನಿವೃತ್ತರಾದ ಗೃಹರಕ್ಷಕ ದಳದ ಸಿಬ್ಬಂದಿಗಳನ್ನು ಸನ್ಮಾನಿಸಲಾಯಿತು.

ಗೃಹರಕ್ಷಕ ದಳದ ಉಪ ಸಮಾದೇಷ್ಠರಾದ ಮಲ್ಲಪ್ಪ ಪ್ರಸಕ್ತ ಸಾಲಿನ ಗೃಹರಕ್ಷಕ ದಳದ ಸಾಧನೆ ಬಿಂಬಿಸುವ ವಾರ್ಷಿಕ ವರದಿ ಮಂಡಿಸಿದರು. ರಾಮಣ್ಣಗೌಡ ಸ್ವಾಗತಿಸಿದರು. ಸಿದ್ರಾಮ ರಾಜಮಾನೆ ನಿರೂಪಿಸಿದರು.

ಇದಕ್ಕೂ ಮುನ್ನ ಕಮಾಂಡೆಂಟ್‌ ವಿಜಯಕುಮಾರ ಗೋಡಬೋಲೆ ನೇತ್ಥತ್ವದಲ್ಲಿ ನಡೆದ ಪಥಸಂಚಲನದಲ್ಲಿ
ಮಹಿಳಾ ತುಕಡಿ ಸೇರಿದಂತೆ ನಾಲ್ಕು ತುಕಡಿಗಳಿಂದ ಗೌರವ ವಂದನೆ ಸ್ವೀಕರಿಸಿದ ಜಿಲ್ಲಾ ಪೊಲೀಸ್‌ ರಿಷ್ಠಾಧಿಕಾರಿಗಳು ನಂತರ ಗೃಹ ರಕ್ಷಕ ದಳದ ಸಿಬ್ಬಂದಿಗೆ ಪ್ರತಿಜ್ಞಾವಿಧಿ ಬೋಧಿಸಿದರು. ಹೆಚ್ಚಿನ ಸಂಖ್ಯೆಯ ಗೃಹರಕ್ಷಕ ದಳದ ಸಿಬ್ಬಂದಿ, ಸಾರ್ವಜನಿಕರು ಭಾವಹಿಸಿದ್ದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.