ಹೋಂ ಕ್ವಾರಂಟೈನ್‌ 14 ದಿನ ವಿಸ್ತರಣೆ


Team Udayavani, Mar 30, 2020, 11:37 AM IST

ಹೋಂ ಕ್ವಾರಂಟೈನ್‌ 14 ದಿನ ವಿಸ್ತರಣೆ

ಕಲಬುರಗಿ: ಕೋವಿಡ್ 19 ಸೋಂಕು ನಿಯಂತ್ರಣ ನಿಟ್ಟಿನಲ್ಲಿ ವಿದೇಶದಿಂದ ಜಿಲ್ಲೆಗೆ ಮರಳಿದವರು ಮತ್ತು ಶಂಕಿತ ವ್ಯಕ್ತಿಗಳನ್ನು ಮತ್ತೆ 14 ದಿನಗಳ ಕಾಲ ಹೋಂ ಕ್ವಾರಂಟೈನ್‌ನಲ್ಲೇ ಇರಿಸಿ ನಿಗಾ ವಹಿಸುವ ಕೆಲಸ ಮಾಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಜಿಲ್ಲಾಡಳಿತಕ್ಕೆ ಸೂಚಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ರವಿವಾರ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕೋವಿಡ್ 19 ಸೋಂಕು ನಿಯಂತ್ರಿಸಲು ಬಿಗಿಯಾದ ಕ್ರಮ ತೆಗೆದುಕೊಳ್ಳಬೇಕು. ತುಮಕೂರಿನಲ್ಲಿ 15ನೇ ದಿನಕ್ಕೆ ಕೊರೊನಾ ಸೋಂಕು ಪತ್ತೆಯಾಗಿದೆ. ಆದ್ದರಿಂದ ಈಗಾಗಲೇ 14 ದಿನ ಹೋಂ ಕ್ವಾರಂಟೈನ್‌ ಮುಗಿದವರೆಗೆ ಮತ್ತೆ 14 ದಿನ ಮನೆಯಲ್ಲೇ ಇರಿಸಿ ನಿಗಾವಣೆ ಮಾಡಬೇಕು. ಇಂತಹ ವ್ಯಕ್ತಿಗಳ ಮನೆಗೆ “ಹೋಂ ಕ್ವಾರಂಟೈನ್‌’ ಚೀಟಿ ಅಂಟಿಸಬೇಕು ಎಂದು ಹೇಳಿದರು.

ಜಿಲ್ಲೆಗೆ ಬೇಕಾಗಿರುವ ವೈದ್ಯರು, ಪ್ಯಾರಾ ಮೆಡಿಕಲ್‌ ಸಿಬ್ಬಂದಿ, ವೈದ್ಯಕೀಯ ಉಪಕರಣಗಳು, ಮೆಡಿಸಿನ್‌ಗಳ ಬಗ್ಗೆ ಪಟ್ಟಿ ಮಾಡಬೇಕು. ಬೆಂಗಳೂರಿನಲ್ಲಿ ಸ್ಥಾಪಿಸಿರುವ ಕೋವಿಡ್ 19  ವಾರ್‌ ರೂಂಗೆ ಮಾಹಿತಿ ಕಳುಹಿಸಿದಲ್ಲಿ ಸರಬರಾಜಿಗೆ ಕ್ರಮ ವಹಿಸಲಾಗುತ್ತದೆ. ವಾರ್‌ ರೂಂನಲ್ಲಿ ಖುದ್ದು ವೈದ್ಯಕೀಯ ಶಿಕ್ಷಣ ಸಚಿವ ಕೆ.ಸುಧಾಕರ ಇದರ ಮೇಲ್ವಿಚಾರಣೆ ಮಾಡುತ್ತಿದ್ದಾರೆ ಎಂದರು.

ಜಿಲ್ಲಾಧಿಕಾರಿ ಶರತ್‌ ಬಿ. ಮಾತನಾಡಿ, ಕೋವಿಡ್ 19  ಸೋಂಕಿತರಿಗೆ ಚಿಕಿತ್ಸೆ ನೀಡುವ ವೈದ್ಯಕೀಯ ಸಿಬ್ಬಂದಿಗಾಗಿ 1,465 ಸುರಕ್ಷಾ ಕಿಟ್‌ಗಳು ಲಭ್ಯ ಇವೆ. ಜಿಮ್ಸ್‌, ಇಎಸ್‌ಐ ಮತ್ತು ಖಾಸಗಿ ಆಸ್ಪತ್ರೆಗಳು ಸೇರಿ ಒಟ್ಟು 40 ವೆಂಟಿಲೇಟರ್‌ಗಳು ಇವೆ. ಜಿಮ್ಸ್‌ ಮತ್ತು ಇಎಸ್‌ಐ ಆಸ್ಪತ್ರೆಗಳನ್ನು ವಿಶೇಷವಾಗಿ ಕೊರೊನಾ ಆಸ್ಪತ್ರೆಗಳೆಂದು ಘೋಷಿಸಲಾಗಿದೆ. ಐಸಿಯುಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವ ರೋಗಿಗಳನ್ನು ಖಾಸಗಿ ಆಸ್ಪತ್ರೆಗೆ ವರ್ಗಾಯಿಸಲಾಗಿದೆ. ಚಿಕಿತ್ಸೆ ನೀಡಲು ಹಾಗೂ ಎಬಿಆರ್‌ಕೆ ಕಾರ್ಡ್‌ ಮೇಲೆ ವೈದ್ಯಕೀಯ ವೆಚ್ಚ ಪಾವತಿಸುವಂತೆ ಸರ್ಕಾರಕ್ಕೆ ಕೋರಲಾಗಿದೆ ಎಂದರು.

ಈ ವೇಳೆ ಡಿಸಿಎಂ ಕಾರಜೋಳ, ಪ್ರಸ್ತುತ 40 ವೆಂಟಿಲೇಟರ್‌ಗಳು ಸಾಕಾಗುವುದಿಲ್ಲ. ಮಹಿಂದ್ರಾ ಕಂಪನಿಯವರು 7,500 ರೂ. ಬೆಲೆಯಲ್ಲಿ ವೆಂಟಿಲೇಟರ್‌ ತಯಾರಿಸಿ ಕೊಡಲು ಮುಂದೆ ಬಂದಿದ್ದಾರೆ. ಇಂತಹ 100 ವೆಂಟಿಲೇಟರ್‌ಗಳು ಹಾಗೂ ಐದು ಸಾವಿರ ಎನ್‌-95 ಮಾಸ್ಕ್ಗಳು ಮತ್ತು ಸುರಕ್ಷಾ ಕಿಟ್‌ಗಳು ಖರೀದಿಸುವಂತೆ ನಿದೇರ್ಶನ ನೀಡಿದರು.

ಸಂಸದ ಡಾ.ಉಮೇಶ ಜಾಧವ, ಶಾಸಕರಾದ ದತ್ತಾತ್ರೇಯ ಪಾಟೀಲ ರೇವೂರ, ಸುಭಾಷ ಗುತ್ತೇದಾರ, ಬಸವರಾಜ ಮತ್ತಿಮಡು, ಡಾ.ಅವಿನಾಶ ಜಾಧವ, ಜಿಪಂ ಸಿಇಒ ಡಾ.ಪಿ.ರಾಜಾ, ಮಹಾನಗರ ಪಾಲಿಕೆ ಆಯುಕ್ತ ರಾಹುಲ್‌ ಪಾಂಡ್ವೆ, ಎಸ್‌ಪಿ ಯಡಾ ಮಾರ್ಟಿನ್‌ ಮಾರ್ಬ್ನ್ಯಾಂಗ್‌, ಡಿಸಿಪಿ ಕಿಶೋರಬಾಬು, ಡಿಎಚ್‌ಒ ಡಾ.ಎಂ.ಎ.ಜಬ್ಟಾರ್‌, ಜಿಮ್ಸ್‌ ನಿರ್ದೇಶಕಿ ಡಾ.ಕವಿತಾ ಪಾಟೀಲ, ವೈದ್ಯಕೀಯ ಅಧೀಕ್ಷಕ ಡಾ.ಮಹಮ್ಮದ್‌ ಶಫಿಯುದ್ದಿನ್‌, ಇಎಸ್‌ಐ ಮೆಡಿಕಲ್‌ ಕಾಲೇಜಿನ ಡೀನ್‌ ಡಾ.ಎ.ಎಲ್‌.ನಾಗರಾಜ, ಜಿಲ್ಲಾ ಶಸ್ತ್ರಜ್ಞ ಡಾ.ಅಂಬರಾಯ ರುದ್ರವಾಡಿ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.

ಟಾಪ್ ನ್ಯೂಸ್

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

1—-wewewqe

Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

ಮೋದಿ ರಾಷ್ಟ್ರ ಮಟ್ಟದಲ್ಲಿ ಸುಳ್ಳು ಹೇಳಿದರೆ, ಜಾಧವ್ ಜಿಲ್ಲಾ ಮಟ್ಟದಲ್ಲಿ… ಖರ್ಗೆ ವಾಗ್ದಾಳಿ

ಮೋದಿ ರಾಷ್ಟ್ರ ಮಟ್ಟದಲ್ಲಿ ಸುಳ್ಳು ಹೇಳಿದರೆ, ಜಾಧವ್ ಜಿಲ್ಲಾ ಮಟ್ಟದಲ್ಲಿ… ಖರ್ಗೆ ವಾಗ್ದಾಳಿ

ಮೋದಿ ಗ್ಯಾರಂಟಿಗೆ ನೋ ವಾರಂಟಿ: ಸಚಿವ ಪ್ರಿಯಾಂಕ್ ಖರ್ಗೆ ಟೀಕೆ

Kalaburagi; ಮೋದಿ ಗ್ಯಾರಂಟಿಗೆ ನೋ ವಾರಂಟಿ: ಸಚಿವ ಪ್ರಿಯಾಂಕ್ ಖರ್ಗೆ ಟೀಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.