ರಸ್ತೆಯಲ್ಲಿ ಬೃಹತ್ ಗುಂಡಿ; ಪ್ರಯಾಣಿಕರಿಗೆ ನಿತ್ಯ ನರಕ
Team Udayavani, Oct 19, 2021, 12:52 PM IST
ಶಹಾಬಾದ: ಭಂಕೂರ ಗ್ರಾಮದಿಂದ ಸಣ್ಣೂರ ಗ್ರಾಮಕ್ಕೆ ಹಾಯ್ದು ಹೋಗುವ ಭಂಕೂರ ಗ್ರಾಮದ ಕಮಾನ್ ಹತ್ತಿರದ ರಸ್ತೆಯಲ್ಲಿ ದೊಡ್ಡದಾದ ಗುಂಡಿಗಳು ಬಿದ್ದಿದ್ದು, ಪ್ರಯಾಣಿಕರು ಸಂಚರಿಸದಂತ ಪರಿಸ್ಥಿತಿ ಎದುರಾಗಿದೆ.
ಭಂಕೂರ ಗ್ರಾಮದಿಂದ ಹೊರಡುವ ಮುಖ್ಯ ರಸ್ತೆಯಿಂದ ಸಣ್ಣೂರಿಗೆ ಪ್ರತಿನಿತ್ಯ ಸಾವಿರಾರು ವಾಹನಗಳು ಸಂಚರಿಸುತ್ತವೆ. ಹೀಗೆ ಸಂಚಾರ ಮಾಡುವ ಪ್ರಯಾಣಿಕರ ವಾಹನಗಳು ಸೇರಿದಂತೆ ದ್ವಿಚಕ್ರ ಸವಾರರು, ಆಟೋ, ಗೂಡ್ಸ್ ವಾಹನಗಳು, ಲಾರಿ, ಬಸ್, ಟ್ರ್ಯಾಕ್ಟರ್ ಮುಂತಾದ ವಾಹನಗಳ ಸಂಚಾರಕ್ಕೆ ಸಂಚಕಾರ ಉಂಟಾಗಿದೆ.
ಭಂಕೂರ ಗ್ರಾಮದ ಕಮಾನ್ ಹತ್ತಿರವೇ ಈ ಬೃಹದಾಕಾರದ ಗುಂಡಿ ನೋಡಿದರೇ ಲೋಕೋಪಯೋಗಿ ಇಲಾಖೆ ಕಾರ್ಯವೈಖರಿ ಅರ್ಥವಾಗುತ್ತದೆ. ಈಗಾಗಲೇ ಹೆದ್ದಾರಿಗಳಲ್ಲಿ ಬಿದ್ದ ಗುಂಡಿಗಳನ್ನು ತಪ್ಪಿಸಲು ಹೋಗಿ ಅನೇಕ ಬೈಕ್ ಸವಾರರು ಪರಸ್ಪರ ಡಿಕ್ಕಿಹೊಡೆದುಕೊಂಡಿದ್ದಾರೆ. ತೆರಿಗೆ ನೀಡುವ ಸಾರ್ವಜನಿಕರಿಗೆ ಕನಿಷ್ಟ ಉತ್ತಮ ರಸ್ತೆ ನಿರ್ಮಾಣ ಮಾಡಿಕೊಡಬೇಕು ಎನ್ನುವ ಇರಾದೆ ಜನಪ್ರತಿನಿಧಿಗಳಿಗಿಲ್ಲ. ಹೆದ್ದಾರಿಯಲ್ಲಿ ದೊಡ್ಡ ಗುಂಡಿಗಳೇ ಬಿದ್ದಿವೆ. ಬಹುತೇಕ ಕಡೆಗಳಲ್ಲಿ ರಸ್ತೆ ಮೇಲಿನ ಪದರು ಕಿತ್ತು ಹೋಗಿದೆ. ಇದರಿಂದ ರಸ್ತೆಯಲ್ಲಿ ಸಂಚಾರ ಮಾಡಲು ಭಯವಾಗುತ್ತಿದೆ. ರಸ್ತೆಯಲ್ಲಿ ಬಿದ್ದಿರುವ ಗುಂಡಿಗಳನ್ನು ತಕ್ಷಣವೇ ಮುಚ್ಚಬೇಕು. ಸಾರ್ವಜನಿಕರ ಸುಗಮ ಸಂಚಾರದ ವ್ಯವಸ್ಥೆ ಕಲ್ಪಿಸಬೇಕು ಎಂದು ಪ್ರಯಾಣಿಕರು ಒತ್ತಾಯಿಸಿದ್ದಾರೆ.
ಇದನ್ನೂ ಓದಿ: ದೈಹಿಕ-ಮಾನಸಿಕ ಆರೋಗ್ಯ ಮುಖ್ಯ
ರಸ್ತೆ ಮೇಲೆ ಗುಂಡಿಗಳು ಬಿದ್ದು ಸಾರ್ವಜನಿಕರಿಗೆ ಸಂಚಾರಕ್ಕೆ ತೊಂದರೆಯಾಗುತ್ತಿದೆ. ಇದರಿಂದ ಅಪಘಾತಗಳಾಗುವ ಸಾಧ್ಯತೆಯಿದೆ. ಕೂಡಲೇ ಸಂಬಂಧಪಟ್ಟ ಇಲಾಖೆ ಕ್ರಮ ಕೈಗೊಳ್ಳಬೇಕು. -ಮಹ್ಮದ್ ಅಜರ್, ಶಹಾಬಾದ
ಭಂಕೂರ ಗ್ರಾಮದ ಐತಿಹಾಸಿಕ ಎರಡು ಉದ್ಭವ ಗಣಪಗಳನ್ನು ನೋಡಲು ಹಾಗೂ ದರ್ಶನ ಪಡೆಯಲು ನಿತ್ಯ ಸಾರ್ವಜನಿಕರು ಬರುತ್ತಾರೆ. ನೂರಾರು ಜನರು ಇದೇ ರಸ್ತೆಯಿಂದ ಸಂಚರಿಸುತ್ತಾರೆ. ಇಲ್ಲಿನ ಬೃಹದಾಕಾರದ ಗುಂಡಿ ಇವರಿಗೆಲ್ಲ ತೀವ್ರ ತೊಂದರೆ ತಂದೊಡ್ಡುತ್ತಿದೆ. -ಅಶೋಕ ಗುತ್ತೇದಾರ, ನಾಗರಿಕ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ
Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ
Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ