ಸೌಹಾರ್ದ ಕರ್ನಾಟಕಕ್ಕಾಗಿ ಮಾನವ ಸರಪಳಿ ರಚನೆ


Team Udayavani, Jan 30, 2019, 7:17 AM IST

gul-5.jpg

ಕಲಬುರಗಿ: ವಿವಿಧತೆಯಲ್ಲಿ ಏಕತೆ ಹೊಂದಿರುವ ನಮ್ಮ ದೇಶ ಸರ್ವ ಜನಾಂಗದ ಶಾಂತಿಯ ತೋಟವಾಗಿದ್ದು, ಜನತೆಯಲ್ಲಿ ದ್ವೇಷ ಭಾವನೆ ಮೂಡಿಸುವ ಕೋಮುವಾದಿ ಶಕ್ತಿಗಳ ವಿರುದ್ಧ ಒಟ್ಟಾಗಿ ನಿಲ್ಲೋಣ ಎನ್ನುವ ಸಂದೇಶದೊಂದಿಗೆ ಸೌಹಾರ್ದ ಕರ್ನಾಟಕ ನಿರ್ಮಾಣಕ್ಕಾಗಿ ಜಾಗೃತಿ ಮೂಡಿಸಲು ಮಂಗಳವಾರ ನಗರದಲ್ಲಿ ಮಾನವ ಸರಪಳಿ ರಚಿಸಲಾಯಿತು.

ನಗರದ ಜಗತ್‌ ವೃತ್ತದಲ್ಲಿ ಸೌಹಾರ್ದ ಕರ್ನಾಟಕ ವೇದಿಕೆಯಡಿ ಪ್ರಗತಿಪರ ಸ್ವಾಮೀಜಿಗಳು, ಚಿಂತಕರು, ಬರಹಗಾರರು, ಹೋರಾಟಗಾರರು, ವಿದ್ಯಾರ್ಥಿಗಳು ಬೃಹತ್‌ ಮಾನವ ಸರಪಳಿ ನಿರ್ಮಿಸಿ ನೆಲದ ಸೌಹಾರ್ದತೆ, ಸಹಬಾಳ್ವೆಗೆ ಎಲ್ಲರೂ ಬದ್ಧರಾಗಿದ್ದೇವೆಂದು ಘೋಷಣೆ ಕೂಗಿದರು.

ದೇಶದಲ್ಲಿ ಇತ್ತೀಚೆಗೆ ಕೋಮುವಾದ ಹೆಚ್ಚಾಗಿದ್ದು, ರಾಜಕೀಯ ಲಾಭಕ್ಕಾಗಿ ಭಾಷೆ, ಆಹಾರ, ಜಾತಿ, ಮತದ ಹೆಸರಲ್ಲಿ ವಿಷ ಬೀಜ ಬಿತ್ತಲಾಗುತ್ತಿದೆ. ಶಾಂತಿ, ನೆಮ್ಮದಿಯಿಂದ ಕೂಡಿರುವ ಸಮಾಜ ಒಡೆಯುವ ಕೆಲಸ ಮಾಡಲಾಗುತ್ತಿದೆ. ಪ್ರಶ್ನಿಸುವರಿಗೆ ದೇಶದ್ರೋಹಿಯ ಹಣೆಪಟ್ಟಿ ಕಟ್ಟಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಪ್ರಜಾಪ್ರಭುತ್ವ, ಅಭಿವ್ಯಕ್ತಿ ಸ್ವಾತಂತ್ರ್ಯ, ಸಮಾನತೆ, ಸಂವಿಧಾನದ ಆಶಯಗಳಿಗೆ ಧಕ್ಕೆಯಾಗಿದ್ದು, ಕೊಲ್ಲುವ ಸಂಸ್ಕೃತಿ ಬೆಳೆಯುತ್ತಿದೆ. ಹಿಂದೂ ಜಾಗೃತಿ ಹೆಸರಲ್ಲಿ ಸಮಾಜದಲ್ಲಿ ಭಯದ ವಾತಾವರಣ ನಿರ್ಮಿಸಲಾಗುತ್ತಿದೆ. ಆದ್ದರಿಂದ ಶಾಂತಿ, ಸಾಮರಸ್ಯ ನೆಲೆಸಲು ಸಹಕರಿಸಿ ಎಂದು ಮನವಿ ಮಾಡಿದರು.

ಕೋಮುವಾದಿಗಳ ವಿಚ್ಛಿದ್ರಕಾರಿ ನಡೆಗಳು ಸಂವಿಧಾನಕ್ಕೆ ಅಪಾಯ ತಂದೊಡ್ಡುತ್ತಿವೆ. ಪ್ರಾಣ ಕೊಟ್ಟಾದರೂ ಪ್ರಜಾಪ್ರಭುತ್ವ ವ್ಯವಸ್ಥೆ, ಸಂವಿಧಾನ ರಕ್ಷಿಸಿಕೊಳ್ಳುತ್ತೇವೆ. ಸೌಹಾರ್ದ ಕರ್ನಾಟಕ, ಸೌಹಾರ್ದ ಭಾರತದ ಸ್ವರೂಪಕ್ಕೆ ಧಕ್ಕೆ ಬರದಂತೆ ನೋಡಿಕೊಳ್ಳುತ್ತೇವೆ ಎಂದು ನೆರೆದವರು ಸಂಕಲ್ಪ ತೊಟ್ಟರು.

ಮುಖಂಡರಾದ ಮಾರುತಿ ಮಾನ್ಪಡೆ, ಪ್ರೊ| ಕಾಶಿನಾಥ ಅಂಬಲಗಿ, ಶರಣಬಸಪ್ಪ ಮಮಶೆಟ್ಟಿ, ಅಲ್ತಾಫ್‌ ಇನಾಮದಾರ, ಮಠಾಧೀಶರು, ಪಾದ್ರಿಗಳು, ಮೌಲ್ವಿಗಳು ಹಾಗೂ ಶಾಲಾ-ಕಾಲೇಜು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.