ಮಾನವೀಯತೆಯೇ ನಿಜ ಭಕ್ತಿ: ಪಾಳಾ ಶ್ರೀ
Team Udayavani, Aug 17, 2022, 4:27 PM IST
ವಾಡಿ: ದೇವರ ಮೇಲೆ ಭಕ್ತಿ ಹೊಂದುವುದು ಆತ್ಮಶಕ್ತಿಯ ನಂಬಿಕೆ. ಆದರೆ ಮಾನವೀಯತೆ ಎಂಬುದು ಮನುಷ್ಯನ ನಿಜವಾದ ಭಕ್ತಿಯಾಗಿದೆ ಎಂದು ಪಾಳಾ ಕಟ್ಟಿಮನಿ ಹಿರೇಮಠದ ಶ್ರೀ ಗುರುಮೂರ್ತಿ ಸ್ವಾಮೀಜಿ ನುಡಿದರು.
ಶ್ರಾವಣ ಮಾಸಾಚರಣೆ ನಿಮಿತ್ತ ಪಟ್ಟಣದ ಶ್ರೀಶೈಲ ಮಲ್ಲಿಕಾರ್ಜುನ ದೇವಸ್ಥಾನದಲ್ಲಿ ವೀರಶೈವ ಲಿಂಗಾಯಿತ ಸಮಾಜದ ವತಿಯಿಂದ ಏರ್ಪಡಿಸಲಾಗಿದ್ದ ಶರಣ ಪಲ್ಲಕ್ಕಿ ಉತ್ಸವದ ಸಾನ್ನಿಧ್ಯ ವಹಿಸಿ ಸ್ವಾಮೀಜಿ ಆಶೀರ್ವಚನ ನೀಡಿದರು. ದೇವರ ಧ್ಯಾನ ಎಂಬುದು ಜೀವನದ ನಿಜ ಮಾರ್ಗದ ತಪಸ್ಸು ಇದ್ದಂತೆ. ಸುಸಂಸ್ಕೃತ ಮೌಲ್ಯಗಳನ್ನು ಅಳವಡಿಸಿಕೊಂಡವರು ಸದಾ ಸಮಾಜದ ಒಳಿತನ್ನೇ ಬಯಸುತ್ತಾರೆ. ಅಂತಹ ಸಜ್ಜನರಿಂದಲೇ ಧರ್ಮ ಕಾರ್ಯಗಳು ಮುಂದೆ ಸಾಗುತ್ತವೆ ಎಂದರು.
ದೇವಸ್ಥಾನ ಸಮಿತಿ ಅಧ್ಯಕ್ಷ ಶಾಂತಪ್ಪ ಶೆಳ್ಳಗಿ, ವೀರಶೈವ ಲಿಂಗಾಯಿತ ಸಮಾಜದ ಅಧ್ಯಕ್ಷ ಶರಣಗೌಡ ಪಾಟೀಲ ಚಾಮನೂರ, ಕಾರ್ಯದರ್ಶಿ ಬಸವರಾಜ ಕಿರಣಗಿ, ಮುಖಂಡರಾದ ಅಣ್ಣಾರಾವ ಪಸಾರೆ, ಭೀಮಶಾ ಜಿರೊಳ್ಳಿ, ಶಿವಶಂಕರ ಕಾಶೆಟ್ಟಿ, ಶಂಕ್ರಯ್ಯಸ್ವಾಮಿ ಮದರಿ, ಪರುತಪ್ಪ ಕರದಳ್ಳಿ, ಮಲ್ಲಣಗೌಡ ಗೌಡಪ್ಪನೋರ, ಸಂಗಣ್ಣ ಇಂಡಿ, ನಿಂಗಣ್ಣ ದೊಡ್ಡಮನಿ, ವೀರಣ್ಣ ಯಾರಿ, ಕಾಶೀನಾಥ ಶೆಟಗಾರ, ಅರುಣಕುಮಾರ ಪಾಟೀಲ ಹಾಗೂ ನೂರಾರು ಭಕ್ತರು ಪಲ್ಲಕ್ಕಿ ಉತ್ಸವದಲ್ಲಿ ಪಾಲ್ಗೊಂಡಿದ್ದರು. ನಂತರ ದೇವಸ್ಥಾನದಲ್ಲಿ ಯುವಕರಿಂದ ಭಜನೆ ಕಾರ್ಯಕ್ರಮ ನಡೆಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ
Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ
Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
MUST WATCH
ಹೊಸ ಸೇರ್ಪಡೆ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Students Notes: ಸ್ಕ್ರೀನ್ ಶಾರ್ಟ್ಗಳೆಂದು ಪುಸ್ತಕವಾಗದಿರಲಿ
ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ
Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ