ಪ್ರಿಯಕರನ ಜತೆ ಸೇರಿ ಪತಿಯ ಕೊಂದ ಪತ್ನಿ
Team Udayavani, Apr 24, 2022, 10:38 AM IST
ಚಿಂಚೋಳಿ: ಕುಂಚಾವರಂ ವನ್ಯಜೀವಿಧಾಮ ಅರಣ್ಯಪ್ರದೇಶ ವ್ಯಾಪ್ತಿಯ ಮೊಗದಂಪುರ ಅರಣ್ಯ ಪ್ರದೇಶದಲ್ಲಿ ಪತ್ತೆಯಾದ ಶವದ ರಹಸ್ಯ ಬಯಲಾಗಿದ್ದು, ಪ್ರಿಯಕರನ ಜತೆ ಸೇರಿಕೊಂಡು ಪತ್ನಿಯೇ ಪತಿಯನ್ನು ಕೊಲೆ ಮಾಡಿರುವುದು ಬೆಳಕಿಗೆ ಬಂದಿದೆ.
ತೆಲಂಗಾಣ ರಾಜ್ಯದ ಘನಪುರ ಹತ್ತಿರದ ಮಲ್ಕಿಮೇನ ತಾಂಡಾದ ರವಿ ಪಿರ್ಯಾ ಪತ್ಲಾವತ್ (29) ಕೊಲೆಯಾದ ವ್ಯಕ್ತಿ.
ಮೃತನ ಪತ್ನಿ ಲಕ್ಷ್ಮೀ ಮತ್ತು ಆಕೆಯ ಪ್ರಿಯಕರ ಸುಮನ್ ಮಾನಯ್ಯ ತಲ್ಹಾರಿ ಮೊಗದಂಪುರ ಸೇರಿಕೊಂಡು ರವಿಯನ್ನು ದ್ವಿಚಕ್ರ ವಾಹನದಲ್ಲಿ ಕಾಡಿಗೆ ಕರೆದುಕೊಂಡು ಬಂದು ಕೊಲೆ ಮಾಡಿದ್ದರು ಎನ್ನಲಾಗಿದೆ.
2020ರ ಜನವರಿ 17ರಂದು ಮೊಗದಂಪುರ ಅರಣ್ಯ ಪ್ರದೇಶದಲ್ಲಿ ಅಪರಿಚಿತ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ವ್ಯಕ್ತಿಯೊಬ್ಬರು ನೀಡಿದ ದೂರಿನ ಮೇರೆಗೆ ಕುಂಚಾವರಂ ಪೊಲೀಸ್ ಠಾಣೆಯಲ್ಲಿ ಅಸಹಜ ಸಾವು ಪ್ರಕರಣ ದಾಖಲಾಗಿತ್ತು. ಸಾಕಷ್ಟು ಶೋಧ ಕಾರ್ಯ ನಡೆಸಿದ ಬಳಿಕವೂ ಪೊಲೀಸರಿಗೆ ಮೃತ ವ್ಯಕ್ತಿಯ ಮಾಹಿತಿ ಸಿಕ್ಕಿರಲಿಲ್ಲ. ಕೆಲವು ತಿಂಗಳ ಬಳಿಕ ರವಿ ಕಾಣೆಯಾದ ಬಗ್ಗೆ ಪೊಲೀಸ್ ಠಾಣೆಗೆ ದೂರು ನೀಡಬೇಕೆಂದು ಅವರ ತಂದೆ ಸೊಸೆ ಲಕ್ಷ್ಮೀಗೆ ಕೇಳುತ್ತಲೇ ಇದ್ದರು. ಪದೇ ಪದೇ ಒತ್ತಡ ಹಾಕಿದಾಗ ಪತಿ ರವಿಯನ್ನು ನಾನು ಮತ್ತು ಸುಮನ್ ಸೇರಿ ಮೊಗದಂಪುರ ಅರಣ್ಯ ಪ್ರದೇಶದಲ್ಲಿ ಕೊಲೆ ಮಾಡಿದ್ದೇವೆ ಎಂದು ಆರೋಪಿ ಲಕ್ಷ್ಮೀ ಬಾಯಿ ಬಿಟ್ಟಿದ್ದಾರೆ.
ಇದನ್ನೂ ಓದಿ:ಪತ್ನಿಗೆ ಮುದ್ದೆಕೋಲಿನಿಂದ ಹೊಡೆದು ಕೊಂದ ಪತಿ!
ಮೃತ ರವಿಯ ತಂದೆ ಪಿರ್ಯಾ ಬದ್ದ್ಯಾ ಪತ್ಲಾವತ್(ರಾಠೊಡ) ಕುಂಚಾವರಂ ಠಾಣೆಯಲ್ಲಿ ಸೊಸೆ ಲಕ್ಷ್ಮೀ ಮತ್ತು ಆಕೆಯ ಪ್ರಿಯಕರ ಸುಮನ್ ವಿರುದ್ಧ ದೂರು ನೀಡಿದ್ದರು. ಚಿಂಚೋಳಿ ಸಿಪಿಐ ಮಹಾಂತೇಶ ಪಾಟೀಲ, ಕುಂಚಾವರಂ ಪೊಲೀಸರು ಆರೋಪಿತರನ್ನು ಗುರುವಾರ ಬಂಧಿಸಿ ನ್ಯಾಯಾಂಗ ವಶಕ್ಕೆ ಒಪ್ಪಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್
Mallikarjun Kharge ಕ್ಷೇತ್ರದಲ್ಲಿ 19 ಚುನಾವಣೆಯಲ್ಲಿ 16 ಬಾರಿ ಗೆದ್ದ ಕಾಂಗ್ರೆಸ್
Kalaburagi; ಪಾಪರ್ ಆಗಿದ್ದರೆ KKRDB ಅಭಿವೃದ್ದಿಗೆ ಹೇಗೆ ಹಣ ಕೊಡುತ್ತಿದ್ದೆವು?: ಖಂಡ್ರೆ
Kalaburagi; ಸೋಲಿನ ಭಯದಿಂದ ಹಿಂದೆ ಸರಿದ ಡಾ.ಖರ್ಗೆ: ವಿಪಕ್ಷ ನಾಯಕ ಆರ್ ಅಶೋಕ
Minister ಪ್ರಿಯಾಂಕ ಖರ್ಗೆ ಉದ್ಧಟತನ ಅತಿಯಾಗಿದೆ: ಸಂಸದ ಡಾ.ಜಾಧವ್