2 ಸಾವಿರ ರೂ.ಕಾಣದ್ದಕ್ಕೆ ಗರ್ಭಿಣಿಯನ್ನೇ ಸುಟ್ಟ ಪತಿ!
Team Udayavani, Sep 11, 2017, 7:15 AM IST
ಕಲಬುರಗಿ: ಮನೆಯಲ್ಲಿಟ್ಟಿದ್ದ 2 ಸಾವಿರ ರೂ. ಕಾಣದಿದ್ದಾಗ ಆ ಹಣವನ್ನು ಸೊಸೆಯೇ ಕದ್ದಿದ್ದಾಳೆಂದು ಸಂಶಯ ಪಟ್ಟ ಅತ್ತೆ ಹಾಗೂ ಪತಿ ಸೇರಿ ಆಕೆಯ ಮೈಮೇಲೆ ಸೀಮೆಎಣ್ಣೆ ಸುರಿದು ಸುಟ್ಟು ಕೊಲೆ ಮಾಡಿದ ಘಟನೆ ತಾಲೂಕಿನ ದೇವಲಾನಾಯಕ ತಾಂಡಾದಲ್ಲಿ ಇತ್ತೀಚೆಗೆ ನಡೆದಿದೆ.
ಪೂಜಾ ಕೊಲೆಯಾದ ನತದೃಷ್ಟೆ. ಈಕೆಯನ್ನು 8 ತಿಂಗಳ ಹಿಂದೆ ದೇವಲಾನಾಯಕ ತಾಂಡಾದ ತಾರಾಸಿಂಗ್ ಚವ್ಹಾಣ ಎಂಬಾತನೊಂದಿಗೆ ಮದುವೆ ಮಾಡಿಕೊಡಲಾಗಿತ್ತು. ಗರ್ಭಿಣಿಯಾಗಿದ್ದ ಪೂಜಾಳನ್ನು ಮದ್ಯ ವ್ಯಸನಿ ತಾರಾಸಿಂಗ್ ಆಗಾಗ ಪೀಡಿಸುತ್ತಿದ್ದ ಎನ್ನಲಾಗಿದೆ. ಸೆ.6ರಂದು ಪೂಜಾಳಿಗೆ ಹಣ ಎಲ್ಲಿ ಎಂದು ಆಕೆಯ ಅತ್ತೆ ಕೇಳಿದಾಗ ಗೊತ್ತಿಲ್ಲ ಎಂದಿದ್ದಳು. ನಂತರ ಪತಿ ಮನೆಗೆ ಬಂದಾಗ ಈ ವಿಷಯ ಪ್ರಸ್ತಾಪಿಸಿದ್ದಾರೆ. ಆಗ ಅತ್ತೆ ಹಾಗೂ ಆಕೆಯ ಪತಿ ಸೇರಿ ಗರ್ಭಿಣಿ ಪೂಜಾಳ ಮೇಲೆ ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿದ್ದಾರೆ. ಸುಟ್ಟ ಗಾಯಗಳಿಂದ ತೀವ್ರ ಗಾಯಗೊಂಡಿದ್ದ ಆಕೆಯನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಪೂಜಾ ಶನಿವಾರ ಮೃತಪಟ್ಟಿದ್ದಾರೆ. ಮಗಳ ಸಾವಿಗೆ ಆಕೆಯ ಪತಿ ಹಾಗೂ ಅತ್ತೆಯೇ ಕಾರಣವೆಂದು ಪೂಜಾಳ ತಾಯಿ ಕಮಲಾಪುರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ; ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ
Paper leak case: ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ; 15 ಮಂದಿ ಆರೋಪಿಗಳು ಖುಲಾಸೆ
ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ
MUST WATCH
ಹೊಸ ಸೇರ್ಪಡೆ
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ; ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ