ಹೈಕಮಾಂಡ್ ನಿಂದ ಸಚಿವರ ರಹಸ್ಯ ವರದಿ ವಿಚಾರ ನನಗೆ ಗೊತ್ತಿಲ್ಲ: ಈಶ್ವರಪ್ಪ

ಸಿದ್ದರಾಮಯ್ಯ ಒಬ್ಬ ಹುಚ್ಚ, ಇಂತಹ ಹುಚ್ಚನನ್ನು ಕರ್ನಾಟಕ ಜನ ಯಾವತ್ತೂ ನೋಡಿರಲಿಲ್ಲ!

Team Udayavani, Nov 30, 2021, 2:22 PM IST

ಈಶ್ವರಪ್ಪ

ಕಲಬುರಗಿ: ಬಿಜೆಪಿ ಹೈಕಮಾಂಡ್ ರಾಜ್ಯದ ಸಚಿವರ ರಹಸ್ಯ ವರದಿ ತರಿಸಿರುವ ವಿಚಾರ ತಮಗೇನು ಗೊತ್ತಿಲ್ಲ ಎಂದು ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದರು.

ನಗರದ ವೀರಶೈವ ಕಲ್ಯಾಣ ಮಂಟಪದಲ್ಲಿ ನಡೆದ ಬಿಜೆಪಿ ಹಿಂದುಳಿದ ವರ್ಗಗಳ ಪ್ರಮುಖರ ಸಭೆಯಲ್ಲಿ ಪಾಲ್ಗೊಳ್ಳಲು ಆಗಮಿಸಿದ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

ಸಚಿವರ ಕಾರ್ಯವೈಖರಿ ಕುರಿತಾಗಿ ಹೈಕಮಾಂಡ್ ರಹಸ್ಯ ವರದಿ ತರಿಸಿಕೊಂಡಿಲ್ಕ. ಇದೆಲ್ಲ ಸುಳ್ಳು ಸುದ್ದಿ ಎಂದರು.

ನಿರಾಣಿ ಮುಂದಿನ ಸಿಎಂ ಹೇಳಿಕೆ ಸಮರ್ಥಿಸಿಕೊಂಡ ಈಶ್ವರಪ್ಪನವರು, ನಿರಾಣಿ ಆರಂಭದಲ್ಲಿ ಸಣ್ಣ ಉದ್ಯಮಿ. ಈಗ ವಿಶ್ವದಲ್ಲಿ ಹೆಚ್ಚು ಸಕ್ಕರೆ ಉತ್ಪಾದಿಸುವ ಉದ್ಯಮಿಗಳ ಸಾಲಿನಲ್ಲಿದ್ದಾರೆ. ನಾಳೆನೇ ಬೊಮ್ಮಾಯಿ ಅವರನ್ನು ತೆಗೆದು ನಿರಾಣಿಯವರನ್ನ ಸಿಎಂ ಮಾಡುತ್ತಾರೆಂದು ನಾನೆಲ್ಲೂ ಹೇಳಿಲ್ಲ.‌ ಮುಂದೊಂದು ದಿನ ಆಗುತ್ತಾರೆಂದು ಹೇಳಿದ್ದೇನೆ. ಇದಕ್ಕೆ ಇಷ್ಟೊಂದು ಪ್ರಚಾರ ಸಿಗುತ್ತದೆ ಅಂದು ಕೊಂಡಿರಲಿಲ್ಲ. ಪ್ರಚಾರ ಸಿಕ್ಕಿದರೆ ಸಂತೋಷ. ನಾನೇನು ಮಾಡಲಾಗದು ಎಂದು ವಿವರಿಸಿದರು.

ಇದನ್ನೂ ಓದಿ:ಕುತೂಹಲ ಮೂಡಿಸಿದ ಪ್ರಧಾನಿ ಮೋದಿ-ದೇವೇಗೌಡರ ಭೇಟಿ

ಕಲಬುರಗಿಯಲ್ಲಿ ಶ್ರೀಮಂತರಿಗೆ ಬಿಜೆಪಿ ಟಿಕೆಟ್ ಎನ್ನುವ ಕಾಂಗ್ರೆಸ್ ನಾಯಕರ ಹೇಳಿಕೆಗೆ ಪ್ರತಿಕ್ರಿಯಿಸಿದ ಈಶ್ವರಪ್ಪ, 1734 ಕೋಟಿ ರೂ. ಆಸ್ತಿ ಇರುವ ವ್ಯಕ್ತಿಗೆ ಕಾಂಗ್ರೆಸ್ ಟಿಕೆಟ್ ನೀಡಿದೆ. ಇಷ್ಟು ದುಡ್ಡು ಒಬ್ಬ ವ್ಯಕ್ತಿ ಬಳಿ ಇರುತ್ತದೆಂದು ನನಗೆ ಗೊತ್ತೇ ಇರಲಿಲ್ಲ. ಇಂತಹ ವಿಚಾರ ನಾ ಹೇಳಿದರೆ ಸಿದ್ರಾಮಯ್ಯ ತಮಗೆ ಪೆದ್ದ ಎನ್ನುತ್ತಾ. ಆದರೆ ಎಸ್.ಆರ್. ಪಾಟೀಲ್ ಒಬ್ಬ ಸಜ್ಜನ ರಾಜಕಾರಣಿ. ಸಿದ್ದರಾಮಯ್ಯನಂತೆ ಹತ್ತಾರು ಪಕ್ಷಕ್ಕೆ ಹೋದವರಲ್ಲ. ಅಂಥವರಿಗೆ ಕಾಂಗ್ರೆಸ್ ಟಿಕೆಟ್ ಕೊಡಲ್ಲ. ಕರ್ನಾಟಕದಲ್ಲಿ ಸಿದ್ದರಾಮಯ್ಯನಷ್ಟು ಜಾತಿವಾದಿ ಇನ್ನೊಬ್ಬರಿಲ್ಲ. ವೀರಶೈವ ಲಿಂಗಾಯತ ಜಾತಿ ಒಡೆದಿದ್ದು ಇದೇ ಸಿದ್ರಾಮಯ್ಯ. ಗೋಹತ್ಯೆ ವಿರುದ್ದ ಹೋರಾಟ ಮಾಡಿದರೆ ಅಂತವರನ್ನೇ ಜೈಲಿಗೆ ಹಾಕಿದ ಮಹಾನುಭಾವ. ಸಿದ್ದರಾಮಯ್ಯ ಒಬ್ಬ ಹುಚ್ಚ. ಇಂತಹ ಹುಚ್ಚನನ್ನು ಕರ್ನಾಟಕ ಜನ ಯಾವತ್ತೂ ನೋಡಿರಲಿಲ್ಲ ಎಂದು ವಾಗ್ದಾಳಿ ನಡೆಸಿದರು.

ಈಗ ಸಿದ್ರಾಮಯ್ಯ ಜೆಡಿಎಸ್ ಬಗ್ಗೆ ಮಾತನಾಡುತ್ತಿದ್ದಾರೆ.‌ ಬರುವ ವಿಧಾನ ಸಭಾ ಚುನಾವಣೆಯಲ್ಲಿ ಜೆಡಿಎಸ್ ಗಿಂತ ಕಡಿಮೆ ಸೀಟು ಕಾಂಗ್ರೆಸ್ ಪಡೆಯುತ್ತದೆ ಎಂದು ಭವಿಷ್ಯ ನುಡಿದರು.

ಟಾಪ್ ನ್ಯೂಸ್

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

ಪಿಯು ಮೌಲ್ಯಮಾಪನಕ್ಕೆ ವಿರೋಧ

Second PU ಮೌಲ್ಯಮಾಪನಕ್ಕೆ ವಿರೋಧ

1-24-tuesday

Daily Horoscope: ಹಿತವಾದುದನ್ನು ಮಾತ್ರ ಆರಿಸಿಕೊಳ್ಳುವುದು ವಿವೇಕಿಗಳ ಲಕ್ಷಣ

Lok Sabha Election 2024; ಬಿಜೆಪಿ 2ನೇ ಪಟ್ಟಿ ಇನ್ನೆರಡು ದಿನ ವಿಳಂಬ?

Lok Sabha Election 2024; ಬಿಜೆಪಿ 2ನೇ ಪಟ್ಟಿ ಇನ್ನೆರಡು ದಿನ ವಿಳಂಬ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

ಪಿಯು ಮೌಲ್ಯಮಾಪನಕ್ಕೆ ವಿರೋಧ

Second PU ಮೌಲ್ಯಮಾಪನಕ್ಕೆ ವಿರೋಧ

Lok Sabha Election 2024; ಬಿಜೆಪಿ 2ನೇ ಪಟ್ಟಿ ಇನ್ನೆರಡು ದಿನ ವಿಳಂಬ?

Lok Sabha Election 2024; ಬಿಜೆಪಿ 2ನೇ ಪಟ್ಟಿ ಇನ್ನೆರಡು ದಿನ ವಿಳಂಬ?

Congress

21 ಕಾಂಗ್ರೆಸ್‌ ಅಭ್ಯರ್ಥಿ ಪಟ್ಟಿ ಇಂದು?ದಿಲ್ಲಿಯಲ್ಲಿ ಮಂಗಳವಾರ ಪಕ್ಷದ ಚುನಾವಣ ಸಮಿತಿ ಸಭೆ

Mandya ಟಿಕೆಟ್‌ಗಾಗಿ ದಿಲ್ಲಿಯಲ್ಲಿ ಸಂಸದೆ ಸುಮಲತಾ ಠಿಕಾಣಿ

Mandya ಟಿಕೆಟ್‌ಗಾಗಿ ದಿಲ್ಲಿಯಲ್ಲಿ ಸಂಸದೆ ಸುಮಲತಾ ಠಿಕಾಣಿ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

ಪಿಯು ಮೌಲ್ಯಮಾಪನಕ್ಕೆ ವಿರೋಧ

Second PU ಮೌಲ್ಯಮಾಪನಕ್ಕೆ ವಿರೋಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.