ಮಹಿಳೆ ತಂಟೆಗೆ ಹೋದರೆ ಶಾಕ್‌ ಹೊಡೆಸುತ್ತೆ ಚಪ್ಪಲಿ!

ಟ್ರ್ಯಾಕ್‌ ಮಾಡಲು ಪೊಲೀಸರಿಗೆ ನೆರವಾಗುವಂತೆ ತಂತ್ರಜ್ಞಾನ ರೂಪಿಸಲಾಗಿದೆ

Team Udayavani, Dec 15, 2022, 10:25 AM IST

ಮಹಿಳೆ ತಂಟೆಗೆ ಹೋದರೆ ಶಾಕ್‌ ಹೊಡೆಸುತ್ತೆ ಚಪ್ಪಲಿ!

ಕಲಬುರಗಿ: ಮಹಿಳೆಯರ ಮೇಲಾಗುತ್ತಿರುವ ದೌರ್ಜನ್ಯ ಮತ್ತು ಅತ್ಯಾಚಾರ, ಕೊಲೆಯಂತಹ ದಾಳಿಗಳನ್ನು ಆರಂಭಿಕವಾಗಿ ಹತ್ತಿಕ್ಕುವ ಅಥವಾ ಹಿಮ್ಮೆಟ್ಟಿಸುವ ನಿಟ್ಟಿನಲ್ಲಿ ನಗರದ ಬಾಲಕಿಯೊಬ್ಬಳು ವಿಶೇಷ ಸಾಧನ ಕಂಡುಹಿಡಿದಿದ್ದಾಳೆ.

ನಗರದ ಎಸ್‌.ಆರ್‌.ಎನ್‌. ಮೆಹತಾ ಶಾಲೆಯಲ್ಲಿ ಹತ್ತನೇ ತರಗತಿಯಲ್ಲಿ ಓದುತ್ತಿರುವ ವಿಜಯಲಕ್ಷ್ಮೀ ಬಿರಾದಾರ ತಯಾರು ಮಾಡಿರುವ ಸಾಧನ ಈಗ ರಾಜ್ಯ- ದೇಶವಲ್ಲದೇ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸದ್ದು ಮಾಡಲಾರಂಭಿಸಿದೆ. ವಿದೇಶದಲ್ಲಿ ಈ ಸಾಧನ ಪ್ರಸ್ತುತಪಡಿಸಲು ಆಹ್ವಾನವೂ ಬಂದಿದೆ. 2023ರ ಜನವರಿಯಲ್ಲಿ ನಡೆಯುವ ಸೈನ್ಸ್‌ ಫೇರ್‌ನಲ್ಲಿ ಪ್ರದರ್ಶನವಾಗಲಿದೆ.

ಏನಿದು ಸಾಧನ ಸದ್ಯ ಭಾರತ ಸೇರಿದಂತೆ ಜಗತ್ತಿನ ಮಹಿಳೆಯರನ್ನು ಕಾಡುವ ಬೀದಿ ಕಾಮಣ್ಣರಿಗೆ ಶಿಕ್ಷೆ ನೀಡುವ ಸಾಧನ ಇದಾಗಿದೆ. ಮಹಿಳೆ ತನ್ನ ಮೇಲಾಗುವ ದಾಳಿಯಿಂದ ತಪ್ಪಿಸಿಕೊಳ್ಳಲು ಸಿದ್ಧಪಡಿಸಿದ ಸಾಧನವೂ ಆಗಿದೆ. ಇದು ಎಲೆಕ್ಟ್ರಾನಿಕ್ಸ್‌ ಸಾಧನ ಬಳಸಿಕೊಂಡು ಮಾಡಿರುವ ಚಪ್ಪಲಿ ಅಥವಾ ಪಾದರಕ್ಷೆ. ಇದರ ವೈಜ್ಞಾನಿಕ ಹೆಸರು ಆ್ಯಂಟಿ ರೇಪ್‌ ಫುಟ್‌ವೇರ್‌.

ಇದನ್ನು ಬ್ಲಿಂಕ್‌ ಆಪ್‌ ತಂತ್ರಜ್ಞಾನ ಬಳಸಿ ನಿರ್ಮಿಸಲಾಗಿದೆ. ಈ ಚಪ್ಪಲಿ ಕೆಳಭಾಗದಲ್ಲಿ ಬ್ಯಾಟರಿ ಚಾಲಿತ 0.5ರಷ್ಟು ಆ್ಯಂಪಿಯರ್‌ನಷ್ಟು ವಿದ್ಯುತ್‌ ಉತ್ಪಾದನೆಯಾಗುತ್ತದೆ. ಮಷಿನ್‌ ನಡೆಯುವಾಗಲೇ ಬ್ಯಾಟರಿ ಚಾರ್ಜ್‌ ಆಗುತ್ತದೆ.

ಸಂಕಷ್ಟದಲ್ಲಿರುವ ಮಹಿಳೆ ಹೆಬ್ಬೆರಳ ಬಳಿ ಬಟನ್‌ ಒತ್ತಿದರೆ ಸಾಕು, ಪೊಲೀಸರಿಗೆ ಮತ್ತು ಕುಟುಂಬದವರಿಗೆ ಎಚ್ಚರಿಕೆ ಸಂದೇಶ ಹೋಗುವಂತಹ ವ್ಯವಸ್ಥೆ ರೂಪಿಸಲಾಗಿದೆ. ಚಿಪ್‌ ಇದ್ದು, ಅಪ್ಲಿಕೇಶನ್‌ನಲ್ಲಿ ಯಾರ ನಂಬರ್‌ ದಾಖಲಿಸಿರುತ್ತೇವೆಯೋ ಆ ನಂಬರ್‌ಗೆ ಸಹಾಯದ ಸಂದೇಶ ಹೋಗುತ್ತದೆ. ಇದರಿಂದ ಸಂಕಷ್ಟಕ್ಕೊಳಗಾದವರು ಎಲ್ಲಿದ್ದಾರೆ ಎಂಬುದನ್ನು ಟ್ರ್ಯಾಕ್‌ ಮಾಡಲು ಪೊಲೀಸರಿಗೆ ನೆರವಾಗುವಂತೆ ತಂತ್ರಜ್ಞಾನ ರೂಪಿಸಲಾಗಿದೆ.

ಬಾಲಕಿ ಕಂಡುಹಿಡಿದ ವಿಶೇಷ ಸಾಧನ; ಏನಿದು ಐಡಿಯಾ?
ಈ ಸಾಧನ ಮಹಿಳೆಯರ ಮೇಲೆ ಯಾರಾದರೂ ದಾಳಿ ಮಾಡಿದರೆ ವಿರೋಧಿಸಲು ಅನುಕೂಲವಾಗುತ್ತದೆ. ಹೆಬ್ಬೆರಳಿನಿಂದಲೇ ಆಪರೇಟ್‌ ಮಾಡಬಹುದು. ಹೆಬ್ಬೆರಳಿನಿಂದ ಮುಂಭಾಗದಲ್ಲಿ ಒತ್ತಿದರೆ ಚಪ್ಪಲಿಯ ಹಿಮ್ಮಡಿಯಲ್ಲಿರುವ ಬ್ಯಾಟರಿ ಶುರುವಾಗುತ್ತದೆ. ಇದರ ಮುಖಾಂತರ ಮುಂಭಾಗದ ತುದಿಯಲ್ಲಿ ಅಳವಡಿಸಿರುವ ಸಾಧನದಲ್ಲಿ ವಿದ್ಯುತ್‌ ಪ್ರವಹಿಸಿ ಅದು ಎದುರಿನ ವ್ಯಕ್ತಿಗೆ ಶಾಕ್‌ ಹೊಡೆಸುತ್ತದೆ. ಇದರಿಂದ ಸಂಭಾವ್ಯ ಆಪತ್ತಿನಿಂದ ಮಹಿಳೆ ಪಾರಾಗಬಹುದು. ಶಿಕ್ಷಕರ ಮಾರ್ಗದರ್ಶನ ಪಡೆದು ಈ ಪಾದರಕ್ಷೆ ರೂಪಿಸಿದ್ದೇನೆ ಎನ್ನುತ್ತಾಳೆ ವಿಜಯಲಕ್ಷ್ಮೀ ಬಿರಾದಾರ.

ಚಾರ್ಜೆಬಲ್‌ ಬ್ಯಾಟರಿ
ಫಿಜೋ ಎಲೆಕ್ಟ್ರಿಕ್‌ಎಫೆಕ್ಸ್‌ಟ್‌ ತಣ್ತೀದಡಿ ಈ ಚಪ್ಪಲಿಗಳನ್ನು ನಿರ್ಮಿಸಲಾಗಿದೆ. ಇದು ವ್ಯಕ್ತಿ ನಡೆಯುತ್ತಿರುವಾಗಲೇ ಚಾರ್ಜ್‌ ಆಗುತ್ತದೆ. ಈ ಶಕ್ತಿ ಚಾರ್ಜೆಬಲ್‌ ಬ್ಯಾಟರಿಯಲ್ಲಿ ಸಂಗ್ರಹವಾಗಿರುತ್ತದೆ. ವ್ಯಕ್ತಿ ನಿಮ್ಮ ಮೇಲೆ ದಾಳಿ ಮಾಡಿದಾಗ ಹೆಬ್ಬೆರಳನ್ನು ಒತ್ತಿದಾಗ ಸಾಧನ ಆರಂಭವಾಗುತ್ತದೆ. ವಿದ್ಯುತ್‌ ಪ್ರವಹಿಸಿ ದಾಳಿ ಮಾಡಿದ ವ್ಯಕ್ತಿಗೆ ಶಾಕ್‌ ತಗಲುತ್ತದೆ. ಇದರಿಂದ ವ್ಯಕ್ತಿಯನ್ನು ಹಿಮ್ಮೆಟ್ಟಿಸಬಹುದು.

 

ಟಾಪ್ ನ್ಯೂಸ್

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

19

Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್‌

BCCI instructions to share photos of the IPL match day ground!

IPL 2024 ಪಂದ್ಯ ದಿನ ಮೈದಾನದ ಫೋಟೋ ಹಂಚದಂತೆ ಬಿಸಿಸಿಐ ಸೂಚನೆ!

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Sensible voters know who to win: Yatnal

Vijayapura; ಯಾರನ್ನು ಗೆಲ್ಲಿಸಬೇಕೆಂದು ಪ್ರಜ್ಞಾವಂತ ಮತದಾರರಿಗೆ ಗೊತ್ತಿದೆ: ಯತ್ನಾಳ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

1-ckm-rsrt-close

Tourists ಗಮನಕ್ಕೆ: ಈ 2 ದಿನಗಳ ಕಾಲ ಚಿಕ್ಕಮಗಳೂರಿನ‌ ಎಲ್ಲ ಹೋಂ ಸ್ಟೇ, ರೆಸಾರ್ಟ್‌ ಬಂದ್!

ಯತ್ನಾಳ್

Loksabha Election; ಈಶ್ವರಪ್ಪ ಬಂಡಾಯವನ್ನು ರಾಜಾಹುಲಿ ಶಮನ ಮಾಡಲಿ: ಯತ್ನಾಳ್

ಶಿವಮೊಗ್ಗ: ಅಪ್ಪ ಮಕ್ಕಳ ಶಿಕಾರಿ ನಾನು ಮಾಡುತ್ತೇನೆ… ವಿಜಯೇಂದ್ರ ವಿರುದ್ಧ ಈಶ್ವರಪ್ಪ ಕಿಡಿ

ಶಿವಮೊಗ್ಗ: ಅಪ್ಪ ಮಕ್ಕಳ ಶಿಕಾರಿ ನಾನು ಮಾಡುತ್ತೇನೆ… ವಿಜಯೇಂದ್ರ ವಿರುದ್ಧ ಈಶ್ವರಪ್ಪ ಕಿಡಿ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

MUST WATCH

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

ಹೊಸ ಸೇರ್ಪಡೆ

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Loksabha

Udupi Chikmagalur Lok Sabha Election: ಮಹಿಳಾ ಮತದಾರರೇ ಅಧಿಕ

ಮೂಡಿಗೆರೆ: ನೆಮ್ಮದಿ ಕಳೆದುಕೊಂಡ ಜನರಿಂದ ತಕ್ಕ ಉತ್ತರ- ಕೆ.ಜಯಪ್ರಕಾಶ್‌ ಹೆಗ್ಡೆ

ಮೂಡಿಗೆರೆ: ನೆಮ್ಮದಿ ಕಳೆದುಕೊಂಡ ಜನರಿಂದ ತಕ್ಕ ಉತ್ತರ- ಕೆ.ಜಯಪ್ರಕಾಶ್‌ ಹೆಗ್ಡೆ

3-

ಕಾರ್ಯಕರ್ತರ ಸಭೆ; ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆಗೆ ಬೆಂಬಲ ನೀಡಿ ಗೆಲ್ಲಿಸುವಂತೆ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.