ಬಿಜೆಪಿ ಬಂದ್ರೆ ನೀರಾವರಿಗೆ ಲಕ್ಷ ಕೋಟಿ ಮೀಸಲು


Team Udayavani, Apr 30, 2018, 3:21 PM IST

gul-3.jpg

ಚಿಂಚೋಳಿ: ಬಿಜೆಪಿ ಅಧಿಕಾರಕ್ಕೆ ಬಂದರೆ ನೀರಾವರಿ ಕ್ಷೇತ್ರಕ್ಕೆ ಒಂದು ಲಕ್ಷ ಕೋಟಿ ರೂ. ಮೀಸಲಾಗಿಡುತ್ತೇನೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಭರವಸೆ ನೀಡಿದರು. ಪಟ್ಟಣದ ಪೊಲೀಸ್‌ ಪರೇಡ್‌ ಮೈದಾನದಲ್ಲಿ ರವಿವಾರ ನಡೆದ ಚಿಂಚೋಳಿ ಮೀಸಲು ವಿಧಾನಸಭೆ ಬಿಜೆಪಿ ಅಭ್ಯರ್ಥಿ ಸುನೀಲ ವಲ್ಯಾಪುರೆ ಪರವಾಗಿ ಏರ್ಪಡಿಸಲಾಗಿದ್ದ ಚುನಾವಣೆ ಪ್ರಚಾರ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ರೈತರು ಬೆಳೆದ ತೊಗರಿಯನ್ನು ಬೆಂಬಲ ಬೆಲೆಯಲ್ಲಿ ಖರೀದಿಸಲು 5 ಸಾವಿರ ಕೋಟಿ ರೂ. ಆವರ್ತ ನಿಧಿ ಮೀಸಲಿಡುತ್ತೇನೆ. ಇನ್ನು ಮುಂದೆ ರೈತರು ಸಾಲಗಾರರು ಆಗಬಾರದು ಎನ್ನುವುದು ನಮ್ಮ ಉದ್ದೇಶವಾಗಿದೆ ಎಂದರು. ದೇಶದಲ್ಲಿ ಕಾಂಗ್ರೆಸ್‌ ಪಕ್ಷ ಗರೀಬಿ ಹಟಾವೂ ಘೋಷಣೆ ಮಾಡಿರುವುದು ಕೇವಲ ತನ್ನ ಪಕ್ಷದ ಮುಖಂಡರ ಬಡತನ ಹಟಾವೋ ಆಗಿದೆಯೇ ಹೊರತು ಜನಸಾಮಾನ್ಯರ, ಬಡವರ ಕಣ್ಣೀರು ಒರೆಸಿಲ್ಲ ಎಂದು ವ್ಯಂಗ್ಯವಾಡಿದರು.

ವೀರಶೈವ ಮತ್ತು ಲಿಂಗಾಯತ ಎಂಬ ಪ್ರತ್ಯೇಕ ಧರ್ಮ ಮಾಡಲು ಹೊರಟ ಮುಖ್ಯಮಂತ್ರಿ ಸಿದ್ದರಾಮಯ್ಯಅವರಿಗೆ ಈಗ ಅದೇ ತಿರುಗುಬಾಣ ಆಗಿದೆ ಎಂದು ಲೇವಡಿ ಮಾಡಿದರು ಹೈದ್ರಾಬಾದ ಕರ್ನಾಟಕ ಪ್ರದೇಶದ ಅಭಿವೃದ್ಧಿಗೋಸ್ಕರವಾಗಿ ಪ್ರತಿವರ್ಷ 4500 ಕೋಟಿ ರೂ. ಮೀಸಲಿಡಲಾಗಿದೆ. ಆದರೆ ಅದರಲ್ಲಿ ಕೇವಲ 1702 ಕೋಟಿ ರೂ. ನೀಡಲಾಗಿದೆ. ಆದರೂ ಹೈಕ ಪ್ರದೇಶ ಇನ್ನು ಅಭಿವೃದ್ಧಿಯಾಗಿಲ್ಲ ಎಂದು ಆಪಾದಿಸಿದರು.

ಬಿಜೆಪಿ ಅಧಿಕಾರಕ್ಕೆ ಬಂದರೆ ಭಾಗ್ಯಲಕ್ಷ್ಮೀ ಯೋಜನೆಗೆ ಹೆಚ್ಚಿನ ಅನುದಾನ ನೀಡುತ್ತೇನೆ. ವಿಧವೆಯರು, ಅಂಗವಿಕಲರು, ವೃದ್ಧಾಪ್ಯರ ವೇತನ ಹೆಚ್ಚಳ ಮಾಡುತ್ತೇನೆ. ಅಲ್ಲದೇ ಸ್ತ್ರೀಶಕ್ತಿ ಸ್ವ ಸಹಾಯ ಮಹಿಳೆ ಸಂಘಕ್ಕಾಗಿ ಪ್ರತ್ಯೇಕವಾಗಿ ಬ್ಯಾಂಕ್‌ ಪ್ರಾರಂಭಿಸುತ್ತೇನೆ. ರಾಷ್ಟ್ರೀಕೃತ ಬ್ಯಾಂಕ್‌ ಮತ್ತು ಸಹಕಾರಿ ಬ್ಯಾಂಕುಗಳಿಂದ ರೈತರು ಪಡೆದ ಸಾಲ ಮನ್ನಾ ಮಾಡಿಸುತ್ತೇನೆ ಎಂದು ಹೇಳಿದರು.

ನಾನು ಮುಖ್ಯಮಂತ್ರಿ ಆಗಿದ್ದಾಗ ಕಾರಣಾಂತರದಿಂದ ಆಸ್ಥಾನಕ್ಕೆ ರಾಜೀನಾಮೆ ನೀಡಿದ ಸಂದರ್ಭದಲ್ಲಿ ಸುನೀಲ ವಲ್ಯಾಪುರೆ ಅವರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಈಗ ಮತ್ತೇ ಬಿಜೆಪಿ ಅಧಿಕಾರಕ್ಕೆ ಬಂದರೆ ನಿಮ್ಮ ಕ್ಷೇತ್ರಕ್ಕೆ ಸಚಿವ ಸ್ಥಾನ ನೀಡುತ್ತೇನೆ ಎಂದರು.

ಬಿಜೆಪಿ ಅಭ್ಯರ್ಥಿ ಸುನೀಲ ವಲ್ಯಾಪುರೆ ಮಾತನಾಡಿ, ರಾಜ್ಯದ 224 ಕ್ಷೇತ್ರಗಳಲ್ಲಿ ಚಿಂಚೋಳಿ ಕ್ಷೇತ್ರದಲ್ಲೇ ಅತಿ ಭ್ರಷ್ಟಾಚಾರವಾಗಿದೆ. ಚಿಂಚೋಳಿ-ಐನೋಳಿ ರಾಜ್ಯ ಹೆದ್ದಾರಿ ಇನ್ನು ಅಭಿವೃದ್ಧಿಗೊಂಡಿಲ್ಲ. ಹಿಂದುಳಿದ ಪ್ರದೇಶ ಅಭಿವೃದ್ಧಿಗೋಸ್ಕರ ಶಾಸಕ ಡಾ| ಉಮೇಶ ಜಾಧವ್‌ ಯಾವುದೇ ವಿಶೇಷ ಪ್ಯಾಕೇಜ್‌ ತರಲಿಲ್ಲ ಎಂದು ಹೇಳಿದರು. 

ಬೀದರ ಸಂಸದ ಭಗವಂತ ಖೂಬಾ, ಬಾಬುರಾವ್‌ ಪಾಟೀಲ, ಸುಭಾಷ ರಾಠೊಡ, ಲಕ್ಷ್ಮಣ ಆವಂಟಿ, ಬಾಬು ಪವಾರ ಚೆಂಗಟಾ ಮಾತನಾಡಿದರು. ಅಜೀತ ಪಾಟೀಲ, ಶ್ರೀಹರಿ ಕಾಟಾಪುರ, ನಾಗಯ್ಯ ಕೊಟ್ರಕಿ, ಚಂದ್ರಶೇಖರ ಹರಸೂರ, ಜಗನ್ನಾಥ ರಾಠೊಡ, ಕಿರಣರೆಡ್ಡಿ, ಆಕಾಶ ಕೊಳ್ಳುರ, ಸಂತೋಷ ಗಡಂತಿ, ಡಾ| ತುಕಾರಾಮ ಪವಾರ, ಶ್ರೀಮಂತ ಕಟ್ಟಿಮನಿ ಇನ್ನಿತರರಿದ್ದರು. ತಾಲೂಕು ಬಿಜೆಪಿ ಅಧ್ಯಕ್ಷ ಭೀಮಶೆಟ್ಟಿ ಮುರುಡಾ ಸ್ವಾಗತಿಸಿದರು, ಶೇಖ ಭಕ್ತಿಯಾರ ಜಹಗೀರದಾರ ನಿರೂಪಿಸಿದರು, ಶಶಿಧರ ಸೂಗೂರ ವಂದಿಸಿದರು.

ಚಾಮುಂಡೇಶ್ವರಿ ಹಾಗೂ ಬಾದಾಮಿ ಕ್ಷೇತ್ರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಲು ಖಚಿತ. ಜನರು ಅವರ ವಿರುದ್ಧ ಮತ
ಚಲಾಯಿಸಲು ತೀರ್ಮಾನಿಸಿದ್ದಾರೆ. ಹೀಗಾಗಿ ಅವರು ಎರಡೂ ಕ್ಷೇತ್ರದಲ್ಲಿ ಸೋಲು ಅನುಭವಿಸಲಿದ್ದಾರೆ. ಅವರು ಕಾಂಗ್ರೆಸ್‌ ಪಕ್ಷದ ಕೊನೆಯ ಮುಖ್ಯಮಂತ್ರಿಗಳಾಗಲಿದ್ದಾರೆ. ಅಲ್ಲದೇ ಬಿಜೆಪಿ ಜೆಡಿಎಸ್‌ ಒಳ ಒಪ್ಪಂದ ಹಾಗೂ ಹೊಂದಾಣಿಕೆ ಆಗಿಲ್ಲ.
 ಬಿ.ಎಸ್‌. ಯಡಿಯೂರಪ್ಪ, ಮಾಜಿ ಮುಖ್ಯಮಂತ್ರಿ

ಟಾಪ್ ನ್ಯೂಸ್

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.