ಡ್ರಗ್ಸ್‌ ಮಾರಾಟ ಕಂಡರೆ ಮಾಹಿತಿ ನೀಡಿ: ಶ್ರೀನಿವಾಸುಲು


Team Udayavani, Jun 27, 2021, 3:38 PM IST

w3er3r4t

ಕಲಬುರಗಿ: ಮಾದಕ ದ್ರವ್ಯ ಮುಕ್ತ ಸಮಾಜ ನಿರ್ಮಾಣ ಗುರಿ ಎಲ್ಲರ ಕರ್ತವ್ಯವಾಗಿದೆ. ಹೀಗಾಗಿ ಎಲ್ಲಿಯಾದರೂ ಗಾಂಜಾ ಹಾಗೂ ಮತ್ತಿತರ ಡ್ರಗ್ಸ್‌ ಮಾರಾಟ, ಸಾಗಣೆ ಕಂಡು ಬಂದಲ್ಲಿ ಕೂಡಲೇ ಪೊಲೀಸರಿಗೆ ತಿಳಿಸಿ ಎಂದು ಉಪ ಪೊಲೀಸ್‌ ಆಯುಕ್ತ ಅಡೂxರು ಶ್ರೀನಿವಾಸುಲು ಹೇಳಿದರು.

ಅಂತಾರಾಷ್ಟ್ರೀಯ ಮಾದಕ ದ್ರವ್ಯ ವಿರೋಧಿ ದಿನಾಚರಣೆ ಅಂಗವಾಗಿ ನಗರದ ಜಗತ್‌ ವೃತ್ತದಲ್ಲಿ ಶನಿವಾರ ಮಾದಕ ದ್ರವ್ಯ ದಾಸರಾಗುವುದರಿಂದ ಸಂಭವಿಸುವ ಆರೋಗ್ಯ ಸಮಸ್ಯೆ, ಆರ್ಥಿಕ ಹಾನಿ ಕುರಿತು ಯುವ ಸಮುದಾಯಕ್ಕೆ ಜಾಗೃತಿ ಮೂಡಿಸಲು ಮತ್ತು ದೃಶ್ಯಗಳು ಮತ್ತು ಗಣ್ಯರ ಸಂದೇಶಗಳ ಸಾರುವ ಎಲ್‌ಇಡಿ ಪರದೆಯ ವಾಹನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಮಕ್ಕಳ ಮೇಲೆ ಪೋಷಕರು ಸದಾ ನಿಗಾ ಇಟ್ಟಿರಬೇಕು.

ಅದರಲ್ಲೂ ಹದಿಹರೆಯದ ಮತ್ತು ಕಾಲೇಜುಗಳಲ್ಲಿ ಓದುತ್ತಿರುವ ಯುವಕರ ಕಾಳಜಿ ಮಾಡಬೇಕು. ಅವರ ವರ್ತನೆ ಹಾಗೂ ಅವರಲ್ಲಿ ಏನಾದರೂ ಅಸಹಜ ಬದಲಾವಣೆ, ನಡವಳಿಕೆಯಲ್ಲಿ ಸಂಶಯ ಬರುವಂತೆ ಕಂಡು ಬಂದಲ್ಲಿ ಸೂಕ್ಷ್ಮವಾಗಿ ಗಮನಿಸುತ್ತಿರಬೇಕೆಂದು ಕರೆ ನೀಡಿದರು. ಯುವ ಸಮುದಾಯ ಅಲ್ಪತೃಪ್ತಿಗಾಗಿ ಮಾದಕ ವ್ಯಸನಿಗಳಾಗುತ್ತಿದ್ದಾರೆ. ಹೀಗಾಗಿ ಮಕ್ಕಳು ನೋಡಿಕೊಂಡು ಅವರನ್ನು ಡ್ರಗ್ಸ್‌ ಚಟದಿಂದ ವಿಮುಕ್ತಗೊಳಿಸುವಂತೆ ಮಾಡಬೇಕು.

ಆರಂಭಿಕ ಹಂತದಲ್ಲಿಯೇ ಪತ್ತೆ ಮಾಡಿದರೆ ಅವರಿಗೆ ಸೂಕ್ತ ಚಿಕಿತ್ಸೆ, ಸಮಾಲೋಚನೆ ಮಾಡುವ ಮೂಲಕ ಮಾದಕ ವ್ಯಸನದಿಂದ ದೂರವಾಗುವಂತೆ ಮಾಡಬಹುದಾಗಿದೆ ಎಂದರು. ಗಾಂಜಾ ಮಾರಾಟ ನಿಯಂತ್ರಣಕ್ಕೆ ಪೊಲೀಸ್‌ ಇಲಾಖೆ ಕಠಿಣ ಕ್ರಮ ವಹಿಸುತ್ತಿದೆ. ಈ ಹಿಂದೆ ಹಲವರ ವಿರುದ್ಧ ಕೇಸ್‌ ದಾಖಲಿಸಲಾಗಿದೆ. ಈಗಲೂ ಗಾಂಜಾ ಮಾರಾಟ ಮೇಲೆ ಹೆಚ್ಚಿನ ನಿಗಾ ಇಡಲಾಗಿದೆ. ಸಾರ್ವಜನಿಕರು ಗಾಂಜಾ ಮಾರಾಟ ಮತ್ತು ಸಾಗಣೆ ಕಂಡು ಬಂದಲ್ಲಿ ಮಾಹಿತಿ ನೀಡಬೇಕು. ಜತೆಗೆ ತುರ್ತು ಸ್ಪಂದನೆ ಸಂಖ್ಯೆ 112ಗೆ ಕರೆ ಮಾಡಿ ಮಾಹಿತಿ ನೀಡಬೇಕೆಂದು ಮನವಿ ಮಾಡಿದರು.

“ಬಿ’ ಉಪ ವಿಭಾಗದ ಎಸಿಪಿ ಗಿರೀಶ ಎಸ್‌.ಬಿ. ಮಾತನಾಡಿ, ಡ್ರಗ್ಸ್‌ ಸೇವಿಸುವ ಚಟಗಾರರಾಗದಂತೆ ಜನರಿಗೆ ಅರಿವು ಮೂಡಿಸಲು ಧಾರ್ಮಿಕ ನಾಯಕರು, ಪೊಲೀಸ್‌ ಅಧಿಕಾರಿಗಳು ಸೇರಿದಂತೆ ಪ್ರಮುಖರ ಸಂದೇಶವಿರುವ ದೃಶ್ಯಗಳನ್ನು ಎಲ್‌ಇಡಿ ಪರದೆ ಮೇಲೆ ತೋರಿಸಲಾಗುತ್ತದೆ. ಪೊಲೀಸ್‌ ಆಯುಕ್ತಾಲಯದ ವ್ಯಾಪ್ತಿಯ ಎಲ್ಲ ಪ್ರದೇಶಗಳಲ್ಲಿ ಸಂಚರಿಸಿ ಜಾಗೃತಿ ಸಂದೇಶ ತಲುಪಿಸುವ ಪ್ರಯತ್ನ ಇದಾಗಿದೆ ಎಂದರು. “ಎ’ ಉಪ ವಿಭಾಗದ ಎಸಿಪಿ ಅಂಶುಕುಮಾರ, ಸಂಚಾರ ವಿಭಾದ ಎಸಿಪಿ ಸುಧಾ ಆದಿ, ಇನ್‌ಸ್ಪೆಕ್ಟರ್‌ ಗಳಾದ ಎಸ್‌.ಆರ್‌.ನಾಯಕ, ಅಸ್ಲಂಭಾಷಾ, ಕಪಿಲ್‌ ದೇವ, ಸಂತೋಷ ಎಲ್‌.ಟಿ. ಇದ್ದರು.

ಟಾಪ್ ನ್ಯೂಸ್

1-dfsadsad

ಪ್ರೊ ಅಸ್ಸಾದಿ ಅವರಿಗೆ 26 ವರ್ಷಗಳ ನಂತರ ಕೈ ಸೇರಿದ ರಾಜೀನಾಮೆ ಪತ್ರ

1-wewqewqe

Nothing ಭಾರತದ ಮಾರ್ಕೆಟಿಂಗ್ ಡೈರೆಕ್ಟರ್ ಆಗಿ ಪ್ರಣಯ್ ರಾವ್ ನೇಮಕ

1-ssdsad

Shirva ಬೈಕುಗಳ ಮುಖಾಮುಖಿ:ಓರ್ವ ಮೃತ್ಯು, ಇನ್ನೋರ್ವ ಗಂಭೀರ

1-qwwqewq

Gadag ವಿರೇಶ್ವರ ಪುಣ್ಯಾಶ್ರಮದಲ್ಲಿ ಅದ್ದೂರಿ ಮಹಾರಥೋತ್ಸವ

Jaishankar

Rahul Gandhi ಅವರಿಗೆ ವಿದೇಶದಲ್ಲಿ ಭಾರತವನ್ನು ಟೀಕಿಸುವ ಅಭ್ಯಾಸ: ಜೈಶಂಕರ್

sanjay-raut

BJPಗೆ ಬಜರಂಗ ಬಲಿ ಸಹಾಯ ಮಾಡಲಿಲ್ಲ,ಈಗ ಔರಂಗಜೇಬ..: ರಾವುತ್

1-saddsad

Chikkamagaluru ; ನಾಲ್ವರು ಕುಖ್ಯಾತ ಶ್ರೀಗಂಧ ಕಳ್ಳರ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Agriculture ಮಾಹಿತಿ ರಥಕ್ಕೆ ಸಚಿವ ಡಾ.ಶರಣಪ್ರಕಾಶ ಪಾಟೀಲ ಚಾಲನೆ

Agriculture ಮಾಹಿತಿ ರಥಕ್ಕೆ ಸಚಿವ ಡಾ.ಶರಣಪ್ರಕಾಶ ಪಾಟೀಲ ಚಾಲನೆ

Kalaburagi: ತಲ್ವಾರ್ ನಿಂದ ಕೊಚ್ಚಿ ಯುವಕನ ಕೊಲೆ

Kalaburagi: ತಲ್ವಾರ್ ನಿಂದ ಕೊಚ್ಚಿ ಯುವಕನ ಕೊಲೆ

ಸಣ್ಣ ಖಾತೆ- ದೊಡ್ಡ ಖಾತೆ ಎಂಬುದಿಲ್ಲ: ಶರಣಬಸಪ್ಪ ದರ್ಶನಾಪುರ

ಸಣ್ಣ ಖಾತೆ- ದೊಡ್ಡ ಖಾತೆ ಎಂಬುದಿಲ್ಲ: ಶರಣಬಸಪ್ಪ ದರ್ಶನಾಪುರ

2-wadi

ವಾಡಿ: ಶಿವಲಿಂಗ ಕಿತ್ತು ನಿಧಿ ಶೋಧಿಸಿದ ಕಳ್ಳರು

ಕಲಬುರಗಿ-ಯಾದಗಿರಿ ಡಿಸಿಸಿ ಬ್ಯಾಂಕ್ ಹಂಗಾಮಿ ಅಧ್ಯಕ್ಷರಾಗಿ ಸುರೇಶ ಸಜ್ಜನ್

ಕಲಬುರಗಿ-ಯಾದಗಿರಿ ಡಿಸಿಸಿ ಬ್ಯಾಂಕ್ ಹಂಗಾಮಿ ಅಧ್ಯಕ್ಷರಾಗಿ ಸುರೇಶ ಸಜ್ಜನ್

MUST WATCH

udayavani youtube

ಪಾಕ್ ಆಕ್ರಮಿತ ಪ್ರದೇಶದಲ್ಲಿ ತಲೆಯೆತ್ತಿದ ಶಾರದಾ ಪೀಠ | ಏನಿದರ ಹಿನ್ನೆಲೆ ?

udayavani youtube

Balasore Train Tragedy; ಎರಡೂ ರೈಲುಗಳನ್ನು ದುರಸ್ತಿ ಮಾಡಲಾಗಿದೆ: ಅಶ್ವಿನಿ ವೈಷ್ಣವ್

udayavani youtube

ಶುಚಿ ರುಚಿಗೆ ಹೆಸರುವಾಸಿ ಅರ್ಚನಾ ಹೋಟೆಲ್ ಇನ್ನಂಜೆ

udayavani youtube

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

udayavani youtube

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ

ಹೊಸ ಸೇರ್ಪಡೆ

1-adasds

Hunsur; ಅಕ್ರಮ ಮರಳು ಸಾಗಾಟ;ಟಿಪ್ಪರ್‌ ಗಳು ವಶ, ಚಾಲಕರು ಪರಾರಿ

1-asds-dsad

ವಸತಿ ವಿದ್ಯಾಲಯದಲ್ಲಿ ಬಾಲಕಿ ಆಕಸ್ಮಿಕ ಸಾವು; ಸೂಕ್ತ ತನಿಖೆಗೆ ಬೇಳೂರು ಸೂಚನೆ

1-dfsadsad

ಪ್ರೊ ಅಸ್ಸಾದಿ ಅವರಿಗೆ 26 ವರ್ಷಗಳ ನಂತರ ಕೈ ಸೇರಿದ ರಾಜೀನಾಮೆ ಪತ್ರ

1-wewqewqe

Nothing ಭಾರತದ ಮಾರ್ಕೆಟಿಂಗ್ ಡೈರೆಕ್ಟರ್ ಆಗಿ ಪ್ರಣಯ್ ರಾವ್ ನೇಮಕ

1-ssdsad

Shirva ಬೈಕುಗಳ ಮುಖಾಮುಖಿ:ಓರ್ವ ಮೃತ್ಯು, ಇನ್ನೋರ್ವ ಗಂಭೀರ