ಮಾರ್ಗದರ್ಶನ ದೊರೆತರೆ ಯಶಸ್ಸು


Team Udayavani, Jan 13, 2018, 11:34 AM IST

gul-8.jpg

ಕ‌ಲಬುರಗಿ: ವಿದ್ಯಾರ್ಥಿ ಜೀವನವಲ್ಲದೇ ಯಾವುದೇ ಕ್ಷೇತ್ರದಲ್ಲಿಯೂ ಸೂಕ್ತ ತರಬೇತಿ ಹಾಗೂ ಉತ್ತಮ ಮಾರ್ಗದರ್ಶನ ದೊರೆತರೆ ಖಂಡಿತವಾಗಿ ಯಶಸ್ಸು ಸಾಧಿಸಬಹುದು ಎಂದು ಮಹಾದೇವಪ್ಪ ರಾಂಪುರೆ ವೈದ್ಯಕೀಯ ಕಾಲೇಜಿನ ಡೀನ್‌ ಡಾ| ಶರಣಬಸವಪ್ಪ ಹರವಾಳ ಹೇಳಿದರು.

ವಿಷನ್‌ ಎಜುಕೇಷನ್‌ ಗ್ರೂಪ್‌ನ ವಿಷನ್‌ ನೀಟ್‌ ಅಕಾಡೆಮಿ ವತಿಯಿಂದ ನಗರದ ಆಳಂದ ರಸ್ತೆಯ ಅಣ್ಣಾರಾವ್‌ ಬೆಣ್ಣೂರಕರ್‌ ಕಲ್ಯಾಣ ಮಂಟಪದಲ್ಲಿ ಅಕಾಡೆಮಿಯಿಂದ ನೀಟ್‌ ವೈದ್ಯಕೀಯ ಪ್ರವೇಶಾತಿ ತರಬೇತಿ ಪಡೆದು ವೈದ್ಯಕೀಯ ಪ್ರವೇಶಾತಿ ಪಡೆದ ವಿದ್ಯಾರ್ಥಿಗಳ ಸತ್ಕಾರ ಸಮಾರಂಭ ಹಾಗೂ ಯಶಸ್ವಿ ಸಂಪರ್ಕ ಸಭೆ ಉದ್ಘಾಟಿಸಿ ಅವರು ಮಾತನಾಡಿದರು.

ವೈದ್ಯಕೀಯ ಕೋರ್ಸ್‌ ಪ್ರವೇಶಾತಿ ಪಡೆಯಬೇಕಾದರೆ ಹೈಕ ಭಾಗದ ವಿದ್ಯಾರ್ಥಿಗಳು ದೂರದ ಬೆಂಗಳೂರು, ಹೈದ್ರಾಬಾದ, ಮುಂಬೆ„, ಚೆನ್ನೈ ಮಹಾನಗರಗಳನ್ನೇ ನೆಚ್ಚಿಕೊಳ್ಳಬೇಕಿತ್ತು. ಆದರೆ ಹಿಂದುಳಿದ ಈ ಭಾಗಕ್ಕೆ ವಿಷನ್‌ ಅಕಾಡೆಮಿ ಕಲಬುರಗಿ ನಗರಕ್ಕೆ ಬಂದಿರುವುದು ಸುದೈವ ಎನ್ನಬಹುದಾಗಿದೆ ಎಂದರು.

ತಂದೆ-ತಾಯಿ ತಮ್ಮ ಮಕ್ಕಳು ವೈದ್ಯ, ಇಂಜಿನಿಯರ್‌ ಆಗಬೇಕೆಂದು ಅಭಿಲಾಷೆ ಹೊಂದುತ್ತಾರೆ. ಇಂತಹ ಅಕಾಡೆಮಿಗಳಲ್ಲಿ ತರಬೇತಿ ನೀಡುವಂತಹ ಅವಕಾಶ ಕಲ್ಪಿಸಿದರೆ ಆಸೆ ಈಡೇರಬಹುದು. ಒಟ್ಟಾರೆ ಈ ನೂತನ ಅಕಾಡೆಮಿಯ ಲಾಭವನ್ನು ಸದುಪಯೋಗ ಪಡೆದುಕೊಳ್ಳಬೆಕೆಂದು ಕರೆ ನೀಡಿದರು.

ಮುಖ್ಯ ಅಥಿಯಾಗಿದ್ದ ಆದಾಯ ತೆರಿಗೆ ಇಲಾಖೆಯ ಮುಖ್ಯ ಆಯುಕ್ತ ಟಿ. ವೆಂಕಟರೆಡ್ಡಿ ಮಾತನಾಡಿ, ವೈದ್ಯೋ ನಾರಾಯಣ ಎನ್ನಲಾಗುತ್ತದೆ. ಈ ವಾಕ್ಯಕ್ಕೆ ಮತ್ತಷ್ಟು ಬಲ ತುಂಬಲು ವೈದ್ಯರಾಗುತ್ತಿರುವ ನಾವುಗಳೆಲ್ಲ ಉತ್ತಮ
ಸಮಾಜಮುಖೀಯಾಗಿ ಸೇವೆ ಸಲ್ಲಿಸುತ್ತೇವೆಂದು ಶಪಥ ಮಾಡಬೇಕು ಎಂದು ಕರೆ ನೀಡಿದರು.

ಅಧ್ಯಕ್ಷತೆ ವಹಿಸಿದ್ದ ವಿಷನ್‌ ಎಜುಕೇಷನ್‌ ಗ್ರೂಪ್‌ನ ಅಧ್ಯಕ್ಷ ರಾಮ ಮನೋಹರ ರೆಡ್ಡಿ ಮಾತನಾಡಿ, ಕಳೆದ ಮೇ ತಿಂಗಳಲ್ಲಿ ಅಕಾಡೆಮಿ ವತಿಯಿಂದ ತರಬೇತಿ ಪಡೆದವರಲ್ಲಿ 500 ವಿದ್ಯಾರ್ಥಿಗಳು ವೈದ್ಯಕೀಯ ಕೋರ್ಸ್‌ಗಳಿಗೆ
ಪ್ರವೇಶಾತಿ ಪಡೆದಿದ್ದಾರೆ. ಅದರಲ್ಲಿ 40 ವಿದ್ಯಾರ್ಥಿಗಳು ಟಾಪ್‌ನಲ್ಲಿ ರ್‍ಯಾಂಕ್‌ ಪಡೆದಿದ್ದಾರೆ ಎಂದು ಹೇಳಿದರು.

ಕಲ್ಯಾಣ ಕರ್ನಾಟಕ ಶಿಕ್ಷಣ ಸಂಸ್ಥೆಯ ಎಂ.ಎನ್‌. ಪಾಟೀಲ, ಐಡಿಯಾ ಬೋರ್ಡ್‌ನ ನಿರ್ದೇಶಕ ರಾವನ್‌, ಉಪನ್ಯಾಸಕರಾದ ಜಾಹೀದ್‌ ಅಹ್ಮದ, ಎನ್‌. ಜಾಗೀರದಾರ್‌, ಕೃಷ್ಣಾರೆಡ್ಡಿ ಸೇರಿದಂತೆ ಮುಂತಾದವರಿದ್ದರು.
ವಿಷನ್‌ ಎಜುಕೇಷನ್‌ ಗ್ರೂಪ್‌ನನ ನಿರ್ದೇಶಕ ಐ. ಲಕ್ಷ್ಮೀರೆಡ್ಡಿ ಸ್ವಾಗತಿಸಿ ಪ್ರಾಸ್ತಾವಿಕ ಮಾತನಾಡಿದರು. ಉತ್ತಮ ರ್‍ಯಾಂಕ್‌ ಪಡೆದ ವಿದ್ಯಾರ್ಥಿಗಳು ತಮ್ಮ ಅನುಭವ ಹಂಚಿಕೊಂಡರು.

ಟಾಪ್ ನ್ಯೂಸ್

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.