ಕಾನೂನು ಅರ್ಥೈಸಿಕೊಂಡರೆ ಸಮಸ್ಯೆ ಬಗೆಹರಿಯಲು ಸಾಧ್ಯ
Team Udayavani, Aug 28, 2017, 11:15 AM IST
ಶಹಾಬಾದ: ಕಾನೂನನ್ನು ಸರಿಯಾಗಿ ಅರ್ಥೈಸಿಕೊಂಡರೆ ಮಹಿಳೆಯರ ಸಮಸ್ಯೆಗಳು ಬಗೆಹರಿಯಲು ಸಾಧ್ಯವಾಗುತ್ತದೆ ಎಂದು ಎಐಎಂಎಸ್ಎಸ್ನ ರಾಜ್ಯ ಜಂಟಿ ಕಾರ್ಯದರ್ಶಿ ಕಾ| ಹರಿಣಿ ಹೇಳಿದರು. ಎಐಎಂಎಸ್ಎಸ್ ಶಹಾಬಾದ ಸ್ಥಳೀಯ ಸಮಿತಿ ವತಿಯಿಂದ ನಗರದ ಹನುಮನ ನಗರ ಬಡಾವಣೆಯಲ್ಲಿ ಮಹಿಳೆ ಮತ್ತು ಮಕ್ಕಳ ಮೇಲಿನ ದೌರ್ಜನ್ಯ ತಡೆಗಟ್ಟಿ ಎಂಬ ವಿಷಯದ ಕುರಿತು ಆಯೋಜಿಸಲಾಗಿದ್ದ ಮಹಿಳಾ ಸಮಾವೇಶದಲ್ಲಿ ಮುಖ್ಯಭಾಷಣಕಾರರಾಗಿ ಅವರು ಮಾತನಾಡಿದರು. ಸಮಾಜದಲ್ಲಿ ಆಳವಾಗಿ ಬೇರೂರಿರುವ ಪುರುಷ ಪ್ರಧಾನ ಮನೋಭಾವ ಮತ್ತು ಸಾಂಸ್ಕೃತಿಕ ಅವನತಿಯಿಂದಾಗಿ ಈಗ ಮಹಿಳೆ ಎಲ್ಲ ರಂಗದಲ್ಲಿಯೂ ಸಮಸ್ಯೆ ಎದುರಿಸಬೇಕಾಗಿದೆ. ಮಹಿಳೆಯರು ತಮ್ಮ ಪ್ರಜ್ಞಾಮಟ್ಟ ಬೆಳೆಸಿಕೊಳ್ಳಬೇಕಾಗಿದೆ. ತಾನು ಅಬಲೆ ಅಲ್ಲ. ಎಲ್ಲ ವಿಷಯ ತಿಳಿದುಕೊಳ್ಳಬಹುದು. ಧೈರ್ಯದಿಂದ ತಿಳಿದುಕೊಳ್ಳುವ ಪ್ರಯತ್ನ ಮಾಡಬೇಕು. ನಮ್ಮ ವಿಮೋಚನೆ ನಾವೇ ಪಡೆದುಕೊಳ್ಳಬೇಕು. ಮಕ್ಕಳನ್ನು ಶಾಲೆಗೆ ಕಳುಹಿಸದೆ ಕೂಲಿಗಾಗಿ ಹೊಲಗದ್ದೆಗಳಿಗೆ ಹಾಗೂ ಅಂಗಡಿಗಳಿಗೆ ಕಳುಹಿಸುವುದು ಅಪರಾಧ. ಇದನ್ನು ತಪ್ಪಿಸಲು ಬಡತನ ಹಾಗೂ ನಿರುದ್ಯೋಗ ಸಮಸ್ಯೆಗಳು ಹೋಗಬೇಕು. ಇಡೀ ದೇಶದ ಆಸ್ತಿ ಎಲ್ಲರಿಗೂ ಸಮಾನವಾಗಿ ಹಂಚಿಕೆಯಾಗಬೇಕು ಹಾಗೂ ಎಲ್ಲರೂ ಸಾಂಸ್ಕೃತಿಕವಾಗಿ, ನೈತಿಕವಾಗಿ, ಸಾಮಾಜಿಕವಾಗಿ ಒಂದೇ ವೇದಿಕೆ ಹಂಚಿಕೊಂಡು ಹೊಸ ಆಲೋಚನೆ ಮೇಲೆ ದುಡಿಯುವ ವರ್ಗ ಪ್ರತಿಬಿಂಬಿಸಬೇಕು. ಆಗ ಮಾತ್ರ ಎಲ್ಲ ಸಮಸ್ಯೆಗಳಿಗೆ ಪರಿಹಾರ ಸಾಧ್ಯ ಎಂದು ಹೇಳಿದರು. ಸ್ಥಳೀಯ ಸಮಿತಿ ಅಧ್ಯಕ್ಷೆ ಗುಂಡಮ್ಮ ಎಸ್. ಮಡಿವಾಳ ಅಧ್ಯಕ್ಷತೆ ವಹಿಸಿದ್ದರು. ಅಂಬುಜಾ ದೇಸಾಯಿ ಹಾಗೂ ಮಹಾದೇವಿ ಅತನೂರ, ಸದಸ್ಯರಾದ ಮಹಾದೇವಿ ಮಾನೆ, ರೇಷ್ಮಾ ಸುಬೇದಾರ, ಸವಿತಾ ಆರ್.ಅಲ್ಲಿಪುರ, ಸಿದ್ದಮ್ಮ ಕೊಟನೂರ, ಭೀಮಬಾಯಿ ಬಿ. ಸಾತನೂರ, ಶಿಲ್ಪಾ ಎನ್. ಹುಲಿ ಸೇರಿದಂತೆ ಹನುಮಾನ ನಗರದ ಮಹಿಳೆಯರು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ
Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ
Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
MUST WATCH
ಹೊಸ ಸೇರ್ಪಡೆ
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು