ಅಕ್ರಮ ಅಕ್ಕಿ ಸಾಗಾಣಿಕೆ: ಪೊಲೀಸರ ದಾಳಿ
Team Udayavani, Oct 14, 2021, 4:49 PM IST
ಜೇವರ್ಗಿ: ನೆರೆಯ ಯಾದಗಿರಿ ಜಿಲ್ಲೆಯ ಶಹಾಪುರ ವಲಯದ ಗೋಗಿ ಪಟ್ಟಣದಿಂದ ಮಹಾರಾಷ್ಟ್ರಕ್ಕೆ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಪಡಿತರ ಅಕ್ಕಿ ತುಂಬಿದ ಲಾರಿಯನ್ನು ಜೇವರ್ಗಿ ಪೊಲೀಸರು ದಾಳಿ ನಡೆಸಿ, ವಶಪಡಿಸಿಕೊಂಡಿದ್ದಾರೆ.
ಜೇವರ್ಗಿ ತಾಲೂಕಿನ ಬೀದರ- ಬೆಂಗಳೂರು ರಾಜ್ಯ ಹೆದ್ದಾರಿಯ ಚಿಗರಳ್ಳಿ ಕ್ರಾಸ್ ಮೂಲಕ ಪಡಿತರ ಅಕ್ಕಿಯನ್ನು ಅಕ್ರಮವಾಗಿ ಮಹಾರಾಷ್ಟ್ರಕ್ಕೆ ಸಾಗಿಸಲಾಗುತ್ತಿತ್ತು ಎನ್ನಲಾದ ಸುಮಾರು 260 ಕ್ವಿಂಟಲ್ ಅಕ್ಕಿ ಮೂಟೆ ಹಾಗೂ ಲಾರಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಲಾರಿ ಚಾಲಕ ಪರಾರಿಯಾಗಿದ್ದು, ಕ್ಲಿನರ್ನನ್ನು ಪೊಲೀಸರು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ. ಕಾರ್ಯಾಚರಣೆಯಲ್ಲಿ ಜೇವರ್ಗಿ ಪಿಎಸ್ಐ ಸಂಗಮೇಶ ಅಂಗಡಿ, ಆಹಾರ ಇಲಾಖೆ ಶಿರಸ್ತೇದಾರ ಡಿ.ಬಿ.ಪಾಟೀಲ ಹಾಗೂ ಸಿಬ್ಬಂದಿ ಇದ್ದರು. ಕಂದಾಯ ಇಲಾಖೆಯ ದೌಲತ್ರಾಯ ಪಾಟೀಲ ಈ ಕುರಿತು ದೂರು ನೀಡಿದ್ದು, ಜೇವರ್ಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್ಡಿಐಎ ಧ್ಯೇಯ: ಜೆ.ಪಿ. ನಡ್ಡಾ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ
Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ