ಅಕ್ರಮವಾಗಿ ಡೀಸೆಲ್‌ ಮಾರಾಟ: ಟ್ಯಾಂಕರ್‌ ವಶ


Team Udayavani, Jul 31, 2022, 11:26 AM IST

1tanker

ಚಿಂಚೋಳಿ: ತಾಲೂಕಿನ ಕಲ್ಲೂರ-ಮಿರಿಯಾಣ ಗ್ರಾಮಗಳ ಮಧ್ಯೆ ಇರುವ ಪದ್ಮನಾಭ ಫ್ಯೂಲ್ಸ್‌ ಪೆಟ್ರೋಲ್‌ ಪಂಪ್‌ನಿಂದ ರಾತ್ರಿ ವೇಳೆ ಟ್ಯಾಂಕರ್‌ದಲ್ಲಿ ಡೀಸೆಲ್‌ ತುಂಬಿಕೊಂಡು ಅಕ್ರಮವಾಗಿ ಮಾರಾಟ ಮಾಡಲು ತೆಲಂಗಾಣದ ನಿಜಾಮಬಾದ ವಿಕಾರಬಾದ ಜಿಲ್ಲೆಗಳಿಗೆ ಹೊರಟಿದ್ದ ಮೂರು ಟ್ಯಾಂಕರ್‌ಗಳನ್ನು ಮಿರಿಯಾಣ ಪೊಲೀಸರು ದಾಳಿ ನಡೆಸಿ, ಲಾರಿ ಚಾಲಕನನ್ನು ಬಂಧಿಸಿ ಡೀಸೆಲ್‌ ತುಂಬಿದ ಟ್ಯಾಂಕರ್‌ ವಶಪಡಿಸಿಕೊಂಡಿದ್ದಾರೆ ಎಂದು ಸಿಪಿಐ ಮಹಾಂತೇಶ ಪಾಟೀಲ ತಿಳಿಸಿದ್ದಾರೆ.

ಮಿರಿಯಾಣ ಗ್ರಾಮದ ಹತ್ತಿರ ಇರುವ ಪದ್ಮಾನಾಭ ಪೆಟ್ರೋಲ್‌ ಬಂಕ್‌ ನಿಂದ ಅಕ್ರಮವಾಗಿ ತೆಲಂಗಾಣ ರಾಜ್ಯದ ವಿಕಾರಬಾದ ಮತ್ತು ನಿಜಾಮಬಾದ ಜಿಲ್ಲೆಗಳಲ್ಲಿ ಹೆಚ್ಚು ದರಕ್ಕೆ ಮಾರುವುದಕ್ಕಾಗಿ ಇಲ್ಲಿಂದ ರಾತ್ರಿ ವೇಳೆ ತೆಲಂಗಾಣ ರಾಜ್ಯದ ಟ್ಯಾಂಕರ್‌ಗಳಲ್ಲಿ ಡೀಸೆಲ್‌ ತುಂಬಿಸಿಕೊಂಡು ಹೊರಟಿರುವ ವಾಹನಗಳನ್ನು ಖಚಿತ ಮಾಹಿತಿ ಆಧರಿಸಿ 112 ಪೊಲೀಸರು ದಾಳಿ ಮಾಡಿ ಲಾರಿ ಚಾಲಕನನ್ನು ವಶಕ್ಕೆ ಪಡೆದುಕೊಂಡು ಮಿರಿಯಾಣ ಪೋಲಿಸರಿಗೆ ಒಪ್ಪಿಸಿದ್ದಾರೆ.

ಚಿಂಚೋಳಿ ಪೊಲೀಸ್‌ ಠಾಣೆಗೆ ಜಿಲ್ಲಾ ಹೆಚ್ಚುವರಿ ಪೊಲೀಸ್‌ ಅಧೀಕ್ಷಕ ಪ್ರಸನ್ನಕುಮಾರ ದೇಸಾಯಿ ಭೇಟಿ ನೀಡಿದ ಸಂದರ್ಭದಲ್ಲಿ ತಾಲೂಕಿನ ಗಡಿಪ್ರದೇಶದಲ್ಲಿ ಕೆಲವು ಪೆಟ್ರೋಲ್‌ ಪಂಪ್‌ಗ್ಳಿಂದ ಅಕ್ರಮವಾಗಿ ಪೆಟ್ರೋಲ್‌, ಡೀಸೆಲ್‌ ತೆಲಂಗಾಣ ರಾಜ್ಯಗಳಿಗೆ ಟ್ಯಾಂಕರ್‌ಗಳನ್ನು ತುಂಬಿ ಸಾಗಿಸಲಾಗುತ್ತಿದೆ. ಅಂತವರವನ್ನು ಬಂಧಿಸಿ ಕಠಿಣ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಸೂಚನೆ ನೀಡಿದ್ದರು. ಶುಕ್ರವಾರ ರಾತ್ರಿ 10ಗಂಟೆಗೆ ತೆಲಂಗಾಣ ರಾಜ್ಯದ ಟ್ಯಾಂಕ್‌ನಲ್ಲಿ ಆರು ಸಾವಿರ ಲೀಟರ್‌ ಡೀಸೆಲ್‌ ತುಂಬಿಕೊಂಡು ಹೊರಟಿದ್ದ ಲಾರಿ ಚಾಲಕ ಶೇಖ ಯೂಸೂಫ್‌ ನಿಜಾಮಾಬಾದ ಎನ್ನುವನನ್ನು ವಿಚಾರಿಸಿದಾಗ ಮಾಲಿಕ ನವೀನಕುಮಾರ ಎನ್ನುವವರು ಇಲ್ಲಿಂದ ಡೀಸೆಲ್‌ ತುಂಬಿಕೊಂಡು ಬರುವಂತೆ ಹೇಳಿದ್ದರಿಂದ ಟ್ಯಾಂಕರ್‌ದಲ್ಲಿ ತುಂಬಿಕೊಂಡು ವಿಕಾರಾಬಾದಗೆ ಕೊಂಡ್ನೂತ್ತಿದ್ದೇನೆ ಎಂದು ತಿಳಿಸಿದ್ದಾನೆ.

ಚಿಂಚೋಳಿ ತಾಲೂಕಿನ ಮಿರಿಯಾಣ ಗ್ರಾಮದ ಪದ್ಮನಾಭನ್‌ ಪೆಟ್ರೋಲ್‌ ಬಂಕನಿಂದ ತೆಲಂಗಾಣ ರಾಜ್ಯಕ್ಕೆ ಅಕ್ರಮವಾಗಿ ಸಾಗಿಸುತ್ತಿದ್ದ ಡಿಸೇಲ್‌ ಟ್ಯಾಂಕರ್‌ ಬಗ್ಗೆ ಪೊಲೀಸರು ತನಿಖೆ ನಡೆಸಿದ್ದಾರೆ. ಪೆಟ್ರೋಲ್‌ ಬಂಕ ಮಾಲೀಕ ಚಂದ್ರಕಾಂತರೆಡ್ಡಿ ಮಿರಿಯಾಣ ಎನ್ನುವರನ್ನು ಪೊಲೀಸರು ವಿಚಾರಣೆ ನಡೆಸಿದಾಗ ಕಲಬುರಗಿ ನಗರದಿಂದ ಇಂಡಿಯನ್‌ ಆಯಿಲ್‌ ಕಾರ್ಪೋರೇಷನ್‌ ವತಿಯಿಂದ ಪ್ರತಿ ದಿವಸ 20ಸಾವಿರ ಲೀಟರ್‌ ಡೀಸೆಲ್‌ ತರಿಸಲಾಗುತ್ತಿದೆ. ಅದರಂತೆ ಪ್ರತಿನಿತ್ಯ 16ಸಾವಿರ ಲೀಟರ್‌ ಡೀಸೆಲ್‌ ಮಾರಾಟ ಮಾಡಲಾಗುತ್ತಿದೆ ಎಂದು ತಿಳಿಸಿದ್ದಾನೆ.

ಪದ್ಮಾನಾಭನ್‌ ಪೆಟ್ರೋಲ್‌ ಪಂಪ್‌ನಲ್ಲಿ ರಾತ್ರಿ ಸಮಯ ದಲ್ಲಿ ತೆಲಂಗಾಣ ರಾಜ್ಯದ ಟ್ಯಾಂಕರ್‌ಗಳು ಡೀಸೆಲ್‌ ತುಂಬಿಸಿಕೊಂಡು ಸಂಚರಿಸುತ್ತಿದ್ದರೂ, ಹೆದ್ದಾರಿಯಲ್ಲಿಯೇ ಮಿರಿಯಾಣ ಪೊಲೀಸ್‌ ಠಾಣೆ ಇದ್ದರೂ ಪೊಲೀಸರು ಗಮನಹರಿಸದೇ ಇರುವುದು ಗಮನಾರ್ಹ ವಿಷಯವಾಗಿದೆ. ಲಾರಿ ಚಾಲಕನ ವಿರುದ್ಧ ಮಿರಿಯಾಣ ಸಬ್‌ ಇನ್ಸಪೆಕ್ಟರ್‌ ನಿಂಗಪ್ಪ ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂದು ಸಿಪಿಐ ಮಹಾಂತೇಶ ಪಾಟೀಲ ತಿಳಿಸಿದ್ದಾರೆ.

ಟಾಪ್ ನ್ಯೂಸ್

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Mallikarjun Kharge ಕ್ಷೇತ್ರದಲ್ಲಿ 19 ಚುನಾವಣೆಯಲ್ಲಿ 16 ಬಾರಿ ಗೆದ್ದ ಕಾಂಗ್ರೆಸ್‌

Mallikarjun Kharge ಕ್ಷೇತ್ರದಲ್ಲಿ 19 ಚುನಾವಣೆಯಲ್ಲಿ 16 ಬಾರಿ ಗೆದ್ದ ಕಾಂಗ್ರೆಸ್‌

Kalaburagi; ಪಾಪರ್ ಆಗಿದ್ದರೆ KKRDB ಅಭಿವೃದ್ದಿಗೆ ಹೇಗೆ ಹಣ ಕೊಡುತ್ತಿದ್ದೇವು?: ಖಂಡ್ರೆ

Kalaburagi; ಪಾಪರ್ ಆಗಿದ್ದರೆ KKRDB ಅಭಿವೃದ್ದಿಗೆ ಹೇಗೆ ಹಣ ಕೊಡುತ್ತಿದ್ದೆವು?: ಖಂಡ್ರೆ

Kalaburagi; ಸೋಲಿನ ಭಯದಿಂದ ಹಿಂದೆ ಸರಿದ ಡಾ.‌ಖರ್ಗೆ: ವಿಪಕ್ಷ ನಾಯಕ ಆರ್ ಅಶೋಕ

Kalaburagi; ಸೋಲಿನ ಭಯದಿಂದ ಹಿಂದೆ ಸರಿದ ಡಾ.‌ಖರ್ಗೆ: ವಿಪಕ್ಷ ನಾಯಕ ಆರ್ ಅಶೋಕ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.