ಅಕ್ರಮ ಮರಳು ಸಾಗಣೆ: ಇಬ್ಬರ ಬಂಧನ
Team Udayavani, Nov 28, 2017, 11:28 AM IST
ಕಲಬುರಗಿ: ಜಿಲ್ಲೆಯ ಚಿತ್ತಾಪುರ ತಾಲೂಕು ಹೊನಗುಂಡಾ ಗ್ರಾಮದ ಬಳಿ ಹರಿಯುವ ಕಾಗಿಣಾ ನದಿಯಿಂದ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ವೇಳೆ ವಡ್ಡರವಾಡಿ ಹತ್ತಿರ ಪೊಲೀಸರು ಟಿಪ್ಪರ್ ಜಪ್ತಿ ಮಾಡಿ ಇಬ್ಬರನ್ನು ಬಂಧಿಸಿದ್ದಾರೆ. ಬಂಧಿತರನ್ನು ರಜಾಕ್ ಪಟೇಲ್ ಹಾಗೂ ಪ್ರವೀಣ ಮಹಾದೇವಪ್ಪ ಪಾಟೀಲ ಎಂದು ಗುರುತಿಸಲಾಗಿದೆ. ಹೊನಗುಂಟಾ ಗ್ರಾಮದ ಹತ್ತಿರ ಕಾಗಿಣಾ ನದಿಯಿಂದ ಮರಳು ತೆಗೆದುಕೊಂಡು ಹೋಗುವಾಗ ವಡ್ಡರವಾಡಿ ಹತ್ತಿರ ಶಹಾಬಾದ ನಗರ ಠಾಣೆ ಪಿಐ ಹಾಗೂ ಸಿಬ್ಬಂದಿಗಳು ಪಂಚರ ಸಮಕ್ಷಮದಲ್ಲಿ ತಡೆದರು. ಚಾಲಕನಿಗೆ ವಿಚಾರಿಸಿದಾಗ ಆತ ತನ್ನ ಹೆಸರು ಎಂ.ಎಸ್.ಕೆ. ಮಿಲ್ ಪ್ರದೇಶದ ರಜಾಕ್ ಪಟೇಲ್ ತಂದೆ ಅಜಮೀರ್ ಪಟೇಲ್ ಎಂದು ಹೇಳಿದ. ಮರಳಿನ ಕುರಿತು ಯಾವುದೇ ದಾಖಲಾತಿ ಇಲ್ಲ ಎಂದು ಹೇಳಿದ.
ಪೊಲೀಸರು ಪರಿಶೀಲಿಸಿದಾಗ ಮೂರು ಲಕ್ಷ ರೂ. ಮೌಲ್ಯದ ಟಿಪ್ಪರ್ ಹಾಗೂ ಅದರಲ್ಲಿ 5000 ರೂ. ಮೌಲ್ಯದ ಅಕ್ರಮ ಮರಳು ಇದ್ದುದು ಪತ್ತೆಯಾಗಿ ಅದನ್ನು ತಮ್ಮ ವಶಕ್ಕೆ ತೆಗೆದುಕೊಂಡರು. ಚಾಲಕ ಹಾಗೂ ಮಾಲೀಕನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಅದೇ ರೀತಿ ಹೊನಗುಂಟಾ ಸೀಮಾಂತರದ ಕಾಗಿಣಾ ನದಿಯಿಂದ ಮರಳು ಕಳ್ಳತನದಿಂದ ಟಿಪ್ಪರ್ನಲ್ಲಿ ಸಾಗಿಸುತ್ತಿದ್ದಾಗ ಪಿಐ ಹಾಗೂ ಸಿಬ್ಬಂದಿಗಳು ಪಂಚರ ಸಮಕ್ಷಮದಲ್ಲಿ ಹೊನಗುಂಟಾ ಗ್ರಾಮದ ಸರಕಾರಿ ಶಾಲೆ ಹತ್ತಿರ ಟಿಪ್ಪರ್ ನಿಲ್ಲಿಸಿದಾಗ ಚಾಲಕ ಪರಾರಿಯಾದ. ಟಿಪ್ಪರ್ನಲ್ಲಿದ್ದ ಇನ್ನೋರ್ವ ವ್ಯಕ್ತಿಯನ್ನು ಹಿಡಿದು ವಿಚಾರಿಸಿದಾಗ ಆತ ತಾನು ಸಂತೋಷ ಕಾಲೋನಿಯ ಪ್ರವೀಣ ಮಹಾದೇವಪ್ಪ ಪಾಟೀಲ ಎಂದು ಹೇಳಿದ.
ಪರಾರಿಯಾದ ಚಾಲಕ ನಗರದ ಹಸನ್ ಹನ್ನುಸಾಬ್ ಎಂದೂ ಸಹ ಬಾಯಿಬಿಟ್ಟ. ಐದು ಲಕ್ಷ ರೂ.ಗಳ ಮೌಲ್ಯದ ಟಿಪ್ಪರ್ ಹಾಗೂ 5000 ರೂ. ಮೌಲ್ಯದ ಅಕ್ರಮ ಮರಳನ್ನು ಹಾಗೂ ಆರೋಪಿಯನ್ನು ಪೊಲೀಸರು ತಮ್ಮ ವಶಕ್ಕೆ ತೆಗೆದುಕೊಂಡರು. ಈ ಕುರಿತು ಶಹಾಬಾದ ನಗರ ಠಾಣೆಯಲ್ಲಿ ಮಾಲೀಕ ಹಾಗೂ ಚಾಲಕ ಹಸನ್ ಮತ್ತು ಪ್ರವೀಣ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ
Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ
Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್
MUST WATCH
ಹೊಸ ಸೇರ್ಪಡೆ
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…