ಭೀಮಾ ತೀರದಲ್ಲಿ ಪುಂಡಪೋಕರಿಗಳ ಕಾಟ


Team Udayavani, May 5, 2020, 5:07 PM IST

ಭೀಮಾ ತೀರದಲ್ಲಿ ಪುಂಡಪೋಕರಿಗಳ ಕಾಟ

ಜೇವರ್ಗಿ: ತಾಲೂಕಿನ ಕೋನಾಹಿಪ್ಪರಗಿ ಗ್ರಾಮದ ಬಳಿಯ ಭೀಮಾನದಿ ತೀರ ಪುಂಡಪೋಕರಿಗಳ ಗುಂಡು ಪಾರ್ಟಿ, ಪ್ರಣಯ ಪಕ್ಷಿಗಳ ಮೋಜು ಮಸ್ತಿ ಅಡ್ಡೆಯಾಗಿದೆ.

ತಾಲೂಕಿನ ಕೋನಾಹಿಪ್ಪರಗಿ-ಸರಡಗಿ ನಡುವೆ ಭೀಮಾ ನದಿಗೆ ಇತ್ತೀಚೆಗೆ 54 ಕೋಟಿ ರೂ. ವೆಚ್ಚದ ಸೇತುವೆ ನಿರ್ಮಿಸಲಾಗಿದೆ. ಸೇತುವೆ ಕೇಳಗೆ ಕಣ್ಣಾಡಿಸದರೆ ಸಾಕು ಮದ್ಯದ ಖಾಲಿ ಬಾಟಲಿ, ನೀರಿನ ಬಾಟಲ್‌, ಸಿಗರೇಟ್‌ ಪ್ಯಾಕ್‌, ಪ್ಲಾಸ್ಟಿಕ್‌ ಗ್ಲಾಸ್‌, ಲೋಟ, ಇಸ್ಪಿಟ್‌ ಎಲೆಮ ಮಾಂಸದ ತುಂಡುಗಳು ಕಣ್ಣಿಗೆ ಬೀಳುತ್ತವೆ. ಭೀಮಾ ನದಿ ತೀರದಲ್ಲಿ ಕೆಲ ಪುಂಡರು ಮಧ್ಯಪಾನ, ಮಾಂಸ ಸುಟ್ಟು ತಿನ್ನುವುದನ್ನು ಮಾಡುತ್ತಿದ್ದಾರೆ. ಕೆಲವರು ನದಿಯಲ್ಲಿ ಸ್ನಾನ ಮಾಡಿದ ಮೇಲೆ ಬಟ್ಟೆಗಳನ್ನು ಅಲ್ಲಿಯೇ ಎಸೆದು ಹೋಗುತ್ತಿದ್ದಾರೆ. ಇದರಿಂದ ಭೀಮಾ ನದಿ ಕಲುಷಿತವಾಗುತ್ತಿದೆ. ಅಲ್ಲದೇ ನದಿ ಪಾತ್ರದಲ್ಲಿಯೇ ಅಡುಗೆ ಮಾಡಿ, ಅಲ್ಲಿಯೇ ಊಟ ಮಾಡಿ ಉಳಿದ ಪದಾರ್ಥವನ್ನು ಬಿಸಾಡಿ ಹೋಗುತ್ತಿದ್ದಾರೆ. ಕೆಲವರಂತೂ ನಿಸರ್ಗ ಕ್ರಿಯೆ ತಾಣವನ್ನಾಗಿ ಮಾಡಿಕೊಂಡಿದ್ದಾರೆ. ಇದರಿಂದ ಸಾಂಕ್ರಾಮಿಕ ರೋಗಗಳು ಹರಡಲು ಆಹ್ವಾನ ಕೊಟ್ಟಂತಾಗಿದೆ.

ಕಲಬುರಗಿ ನಗರ ಸೇರಿದಂತೆ ವಿವಿಧ ಕಡೆಗಳಿಂದ ಈ ಸೇತುವೆ ಕೆಳಗೆ ಬೇಸಿಗೆ ಕಾಲದಲ್ಲಿ ತಂಪು ವಾತಾವರಣ ಇರುತ್ತದೆ ಎನ್ನುವ ಕಾರಣಕ್ಕೆ ನಿತ್ಯ ಹಲವಾರು ಜನ ಬರುತ್ತಿದ್ದು, ಬಂದವರ ಪೈಕಿ ಕೆಲವರು ಈಜಾಡಿ ವಿಶ್ರಾಂತಿ ಪಡೆದರೇ, ಕೆಲವರು ಮದ್ಯ ಸೇವನೆ ಮಾಡಿ, ಮಾಂಸದ ಅಡುಗೆ ಮಾಡಿಕೊಂಡು ಊಟ ಮಾಡುತ್ತಿದ್ದಾರೆ. ಬೇಸಿಗೆಯಲ್ಲಿ ಮೊದಲೇ ಅಲ್ಪಸ್ವಲ್ಪ ನೀರನ್ನು ಒಡಲಿನಲ್ಲಿ ಇರಿಸಿಕೊಂಡಿರುವ ಭೀಮೆಯಲ್ಲಿ ಈ ರೀತಿಯ ಹೊಲಸು ಮಾಡುವುದರಿಂದ ಜಲಚರಗಳಿಗೆ ಕುತ್ತು ಬಂದೊದಗಿದೆ. ಈ ಕುರಿತು ಸಂಬಂಧಪಟ್ಟವರ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಿಲ್ಲ.

ಜೇವರ್ಗಿ ಹಾಗೂ ಫರತಾಬಾದ ಪೊಲೀಸ್‌ ಠಾಣೆಯಿಂದ ತಲಾ ಒಬ್ಬ ಪೊಲೀಸ್‌ ಪೇದೆಯನ್ನು ನಿಯೋಜಿಸಿ ಭೀಮಾ ನದಿ ದಂಡೆ ಮೇಲೆ ಮೋಜು ಮಸ್ತಿ ನಡೆಸುವ ಪುಂಡಪೋಕರಿಗಳ ವಿರುದ್ಧ ಕ್ರಮ ಕೈಗೊಳ್ಳಲು ಆಯಾ ಠಾಣೆಯ ಸಬ್‌ ಇನ್ಸ್ ಪೆಕ್ಟರ್‌ಗಳಿಗೆ ಸೂಚಿಸಲಾಗುವುದು.– ಸಿದರಾಯ ಭೋಸಗಿ, ತಹಶೀಲ್ದಾರ್‌

 

-ವಿಜಯಕುಮಾರ ಎಸ್‌.ಕಲ್ಲಾ

ಟಾಪ್ ನ್ಯೂಸ್

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

1—-wewewqe

Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

ಮೋದಿ ರಾಷ್ಟ್ರ ಮಟ್ಟದಲ್ಲಿ ಸುಳ್ಳು ಹೇಳಿದರೆ, ಜಾಧವ್ ಜಿಲ್ಲಾ ಮಟ್ಟದಲ್ಲಿ… ಖರ್ಗೆ ವಾಗ್ದಾಳಿ

ಮೋದಿ ರಾಷ್ಟ್ರ ಮಟ್ಟದಲ್ಲಿ ಸುಳ್ಳು ಹೇಳಿದರೆ, ಜಾಧವ್ ಜಿಲ್ಲಾ ಮಟ್ಟದಲ್ಲಿ… ಖರ್ಗೆ ವಾಗ್ದಾಳಿ

ಮೋದಿ ಗ್ಯಾರಂಟಿಗೆ ನೋ ವಾರಂಟಿ: ಸಚಿವ ಪ್ರಿಯಾಂಕ್ ಖರ್ಗೆ ಟೀಕೆ

Kalaburagi; ಮೋದಿ ಗ್ಯಾರಂಟಿಗೆ ನೋ ವಾರಂಟಿ: ಸಚಿವ ಪ್ರಿಯಾಂಕ್ ಖರ್ಗೆ ಟೀಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

5-congress

Udupi-ಚಿಕ್ಕಮಗಳೂರಿನಲ್ಲಿ ಬಿಜೆಪಿಗರೂ ಜೆಪಿ-ಜೆಪಿ ಎನ್ನುತ್ತಿದ್ದಾರೆ: ನಿಕೇತ್‌ರಾಜ್‌ ಮೌರ್ಯ

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.