ರೈತರಿಗೆ ಸೋಲಾರ್‌ ಪಂಪ್ ಸೆಟ್ ಯೋಜನೆ ಜಾರಿಗೆ: ಶಾಸಕ ರಾಜಕುಮಾರ ಪಾಟೀಲ ತೇಲ್ಕೂರ


Team Udayavani, Mar 12, 2022, 5:54 PM IST

ರೈತರಿಗೆ ಸೋಲಾರ್‌ ಪಂಪ್ ಸೆಟ್ ಯೋಜನೆ ಜಾರಿಗೆ: ಶಾಸಕ ರಾಜಕುಮಾರ ಪಾಟೀಲ ತೇಲ್ಕೂರ

ಕಲಬುರಗಿ:  ಅನ್ನದಾತ ರೈತನಿಗೆ ದಿನದ 24 ಗಂಟೆ ಕಾಲ ವಿದ್ಯುತ್ ಪೂರೈಸಲು ರಾಜ್ಯ ಸರ್ಕಾರವು ಸೋಲಾರ್ ಪಂಪ್ ಸೆಟ್ ಯೋಜನೆ ಜಾರಿಗೆ ತರಲಾಗುತ್ತಿದೆ ಎಂದು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಅಧ್ಯಕ್ಷ ಹಾಗೂ ಸೇಡಂ ಶಾಸಕ ರಾಜಕುಮಾರ ಪಾಟೀಲ ತೇಲ್ಕೂರ ಹೇಳಿದರು.

ಶನಿವಾರ ಶನಿವಾರ ಸೇಡಂ ತಾಲೂಕಿನ ಖಂಡೆರಾಯನಪಲ್ಲಿಯಲ್ಲಿ ಬೆಂಬಲ ಬೆಲೆ ಯೋಜನೆಯಡಿ ನಾಡೆಪಲ್ಲಿ ಭತ್ತ ಖರೀದಿ ಕೇಂದ್ರ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

3.5 ಲಕ್ಷ ಮೊತ್ತದ ಸೋಲಾರ್‌ ಪಂಪ್ ಸೆಟ್ ಯೋಜನೆಗೆ 1.5 ಲಕ್ಷ ರೂ. ನಬಾರ್ಡ್ ನಿಂದ ಸಬ್ಸಿಡಿ ನೀಡುವುದಲ್ಲದೆ ಜೊತೆಗೆ ಶೇ.3ರ ಬಡ್ಡಿ ದರದಲ್ಲಿ 2 ಲಕ್ಷ‌ ರೂ. ಸಾಲ‌ ಸಹ ನೀಡುವ ಯೋಜನೆ ಇದಾಗಿದೆ. ಯೋಜನೆ ಜಾರಿಯಾದಲ್ಲಿ ವಿದ್ಯುತ್ ಸಮಸ್ಯೆ ಎಂದು ತಲೆ‌ ಮೇಲೆ ಕೈ ಕಟ್ಟಿಕೊಂಡು ಕೂಡುವ ಅವಶ್ಯತೆ‌ ಬೀಳಲ್ಲ. ವರ್ಷದ 12 ತಿಂಗಳು ರೈತರು ಕೃಷಿ ಬೆಳೆಗಳನ್ನು ಬೆಳೆಯಬಹುದು ಎಂದು ವಿವರಿಸಿದರು.

ಮಾರುಕಟ್ಟೆಯಲ್ಲಿ 1200-1300 ರೂ. ಗಳಿಗೆ ಭತ್ತ ಮಾರುವ ದುಸ್ಥಿತಿ ಕರ್ನಾಟಕ ಕೊನೆ ಹಳ್ಳಿ ಇಲ್ಲಿನ ರೈತರದ್ದಾಗಿತು. ಹೀಗಾಗಿ ಇಲ್ಲಿ ಭತ್ತ ಖರೀದಿ ಕೇಂದ್ರದ ಬೇಡಿಕೆಗೆ ಸರ್ಕಾರ ಮಂಜೂರಾತಿ ನೀಡಿ ಇಂದು ಖರೀದಿಯನ್ನು ಆರಂಭಿಸಿದೆ. ಪ್ರಸಕ್ತ ಸಾಲಿನ ಬೆಂಬಲ‌ ಬೆಲೆ ಯೋಜನೆಯಡಿ ಜಿಲ್ಲೆಯಲ್ಲಿ 8 ಭತ್ತ‌ ಖರೀದಿ ಕೇಂದ್ರ ತೆರೆಯಲಾಗಿದೆ. ಸೇಡಂ ತಾಲೂಕಿನಲ್ಲಿ 4, ಚಿತ್ತಾಪೂರ ಮತ್ತು ಜೇವರ್ಗಿ ತಾಲೂಕಿನ ತಲಾ 2 ಕೇಂದ್ರಗಳಿ

ವೆ. ಪ್ರತಿ ರೈತರಿಂದ ಕ್ವಿಂಟಾಲ್ ಗೆ 1940 ರೂ. ಗಳಂತೆ ಗರಿಷ್ಠ 40 ಕ್ವಿಂಟಾಲ್ ಭತ್ತವನ್ನು ಖರೀದಿಸಲಾಗುತ್ತಿದೆ ಎಂದರು.

ಸಾರ್ವಜನಿಕರ ಅನಗತ್ಯ ಕಚೇರಿ ಅಲೆದಾಟ ತಪ್ಪಿಸಲು ಇಂದು ಜನರ‌ ಬಾಗಿಲೆಗೆ ಬಸವರಾಜ ಬೊಮ್ಮಾಯಿ ಸರ್ಕಾರ ಬಂದಿದೆ. ಕಂದಾಯ ಇಲಾಖೆಯ ಸೇವೆಗಳನ್ನು ಉಚಿತವಾಗಿ ಒದಗಿಸುವ  “ಕಂದಾಯ ದಾಖಲೆ ಮನೆ ಬಾಗಿಲಿಗೆ” ಯೋಜನೆ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳೆ ನಿಮ್ಮ‌ ಮನೆಗೆ ಬಂದು ನಿಮ್ಮ ಹಕ್ಕಿನ ಪಹಣಿ ದಾಖಲೆಗಳನ್ನು‌ ನೀಡಿದ್ದಾರೆ ಎಂದರು.

ಕಲಬುರಗಿ ಕಲ್ಯಾಣಕ್ಕೆ ಡಿ.ಸಿ. ದಕ್ಷ ಅಧಿಕಾರಿ;

ಕಲಬುರಗಿಯ ಕಲ್ಯಾಣಕ್ಕೆ ದಕ್ಷ ಅಧಿಕಾರಿ ಡಿ.ಸಿ. ಯಶವಂತ ವಿ. ಗುರುಕರ್ ಅಧಿಕಾರ‌ ವಹಿಸಿದ ಎರಡೇ‌ ದಿನದಲ್ಲಿ 2 ವರ್ಷದಿಂದ ಅನುಕಂಪದ‌ ನೌಕರಿಗೆ ಅಲೆಡಾಡುತ್ತಿದ್ದ ಮಹಿಳೆಗೆ ನೌಕರಿ ನೀಡಿ ಮಾನವೀಯತೆ ಮೆರೆದಿದ್ದಾರೆ. ಹಲವಾರು ವರ್ಷಗಳಿಂದ‌ ಧೂಳು ಹಿಡಿದಿದ್ದ ಭೂವಾಜ್ಯ ಕಡತಗಳಿಗೆ ಒಂದೇ ತಿಂಗಳಿನಲ್ಲಿ ಮುಕ್ತಿ ನೀಡಿದ್ದಾರೆ. ಭ್ರಷ್ಠರಿಗೆ ಸಿಂಹ ಸ್ವಪ್ನವಾಗಿರುವ ಇವರು ಕಚೇರಿಯಲ್ಲಿ ಕಡಿಮೆ ಜನರ ಬಳಿಯೆ ಹೆಚ್ಚು ಇರುತ್ತಾರೆ ಎಂದು ಜಿಲ್ಲಾಧಿಕಾರಿಗಳ ಸೇವಾ‌ ಮನೋಭಾವವನ್ನು ಕೊಂಡಾಡಿದರು.

ಕಾರ್ಯಕ್ರಮ ಉದ್ಘಾಟಿಸಿದ ಸಂಸದ ಡಾ.ಉಮೇಶ‌ ಜಾಧವ ಅವರು ಮಾತನಾಡಿ, ತಿಂಗಳ ಹಿಂದೆ ಖಾಸಗಿ ಕಾರ್ಯಕ್ರಮದಲ್ಲಜ ಭಾಗಿಯಾಗಲು ಇಲ್ಲಿ‌ಗೆ ಬಂದಾಗ ಸ್ಥಳೀಯ‌ ಮುಖಂಡರು ಭತ್ತ ಖರೀದಿ ಕೇಂದ್ರಕ್ಕೆ ಬೇಡಿಕೆ ಇಟ್ಟಿದ್ದರು. ಕೇಂದ್ರ ತೆರೆಯುವ ಕುರಿತು ಅಂದು ನಾನು ಮತ್ತು ಶಾಸಕ ರಾಜಕುಮಾರ ತೇಲ್ಕೂರ ಅವರು ಭರವಸೆ ನೀಡಿದ್ದೇವೆ. ಅದರಂತೆ ಇಂದು ಖರೀದಿ ಕೇಂದ್ರ ಆರಂಭಿಸಲಾಗಿದೆ. ನುಡಿದಂತೆ ನಡೆಯುವ ಸರ್ಕಾರ ನಮ್ಮದಾಗಿದೆ. ಸರ್ಕಾರದ ಆಶಯದಂತೆ ಇಲ್ಲಿನ‌ ಡಿ.ಸಿ. ಯಶವಂತ‌ ವಿ. ಗುರುಕರ್ ಅವರು ಹಗಲು-ರಾತ್ರಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂದರು.

ಜಿಲ್ಲಾಧಿಕಾರಿ ಯಶವಂತ ವಿ. ಗುರುಕರ್ ಮಾತನಾಡಿ ಭತ್ತ ಖರೀದಿ ಕೇಂದ್ರದಲ್ಲಿ ಇದುವರೆಗೂ 95 ಜನ ನೊಂದಾಯಿಸಿಕೊಂಡಿದ್ದಾರೆ. 3000 ನೋಂದಣಿ ಗುರಿ ಹೊಂದಲಾಗಿದೆ. ಗರಿಷ್ಟ 40 ಕ್ವಿಂಟಾಲ್ ಭತ್ತ ಮಾರಾಟ ಮಾಡಬಹುದು. ನಾನು ರೈತಾಪಿ ಕುಟುಂಬದಿಂದ‌ ಬಂದಿದ್ದು, ನಿಮ್ಮ ಏನೇ ಸಮಸ್ಯೆಗಳಿದ್ದರೆ‌ ನನ್ನ ಗಮನಕ್ಕೆ‌ ತನ್ನಿ.‌ ಬಗೆಹರಿಸುವ‌ ಪ್ರಯತ್ನ ಮಾಡುವೆ ಎಂದರು.

ಕಾರ್ಯಕ್ರಮದಲ್ಲಿ ಪ್ರಭಾರಿ ಸಹಾಯಕ ಆಯುಕ್ತೆ ಸುರೇಖಾ, ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪನಿರ್ದೇಶಕ ಶಾಂತಗೌಡ ಗುಣಕಿ, ತಹಶೀಲ್ದಾರ‌ ಬಸವರಾಜ ಬೆಣ್ಣೆಶಿರೂರ, ಕೃಷಿ ಇಲಾಖೆಯ ಉಪನಿರ್ದೇಶಕ ಸಮದ್ ಪಟೇಲ್, ಸಹಾಯಕ‌ ನಿರ್ದೇಶಕ ಹಂಪಣ್ಣ ಚವ್ಹಾಣ, ಸಹಕಾರ ಇಲಾಖೆಯ ಸಹಾಯಕ‌ ನಿಬಂಧಕ ರವಿಂದ್ರ, ಸೇಡಂ‌ ಪಶು ಆಸ್ಪತ್ರೆಯ ಸಹಾಯಕ ನಿರ್ದೇಶಕ ಡಾ.ಮಾರುತಿ ನಾಯಕ್, ಮುಖಂಡರಾದ ಪರ್ವತರೆಡ್ಡಿ ಪಾಟೀಲ, ನಾಗರೆಡ್ಡಿ ದೇಶಮುಖ‌, ಸಿದ್ದಯ್ಯ ಸ್ವಾಮಿ ನಾಡೆಪಲ್ಲಿ, ನಾಗೇಂದ್ರಪ್ಪ ಸಾಹುಕಾರ, ಓಂಪ್ರಕಾಶ ಪಾಟೀಲ ಸೇರಿದಂತೆ ಇನ್ನಿತರ ಅಧಿಕಾರಿಗಳು, ಸಾರ್ವಜನಿಕರು ಇದ್ದರು.

ಟಾಪ್ ನ್ಯೂಸ್

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.