![Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ](https://www.udayavani.com/wp-content/uploads/2024/07/shi1-415x229.jpg)
ವಿದ್ಯೆ ಜತೆಗೆ ಕಲೆ-ಸಾಹಿತ್ಯ ಮೈಗೂಢಿಕೊಳ್ಳಲು ಕರೆ
Team Udayavani, Feb 15, 2017, 3:01 PM IST
![gul4.jpg](https://www.udayavani.com/wp-content/uploads/2017/02/15/gul4.jpg)
ಕಲಬುರಗಿ: ಮಕ್ಕಳು ವಿದ್ಯಾಭ್ಯಾಸದ ಜತೆಗೆ ಕಲೆ ಹಾಗೂ ಸಾಹಿತ್ಯ ಸಹ ಮೈಗೂಡಿಸಿಕೊಂಡರೆ ಉತ್ತಮ ಬದುಕು ರೂಪಿಸಿಕೊಳ್ಳಲು ಹೆಚ್ಚಿನ ಸಹಕಾರಿಯಾಗುತ್ತದೆ ಎಂದು ಖ್ಯಾತ ಹಿನ್ನೆಲೆ ಗಾಯಕಿ ಬಿ.ಆರ್. ಛಾಯಾ ಕರೆ ನೀಡಿದರು. ನಗರದ ಸರ್ವಜ್ಞ ಚಿಣ್ಣರ ಲೋಕದ ವಾರ್ಷಿಕೋತ್ಸವ ಹಾಗೂ ಚಿಣ್ಣರ ಚಿಲಿಪಿಲಿ ಕಾರ್ಯಕ್ರಮ ವಿಶೇಷ ಅತಿಥಿಗಳಾಗಿ ಅವರು ಮಾತನಾಡಿದರು.
ಸಂಗೀತದ ಮನಸ್ಸಿಗೆ ಶಾಂತಿ, ಸಮಾಧಾನದ ಜತೆಗೆ ನೆಮ್ಮದಿ ಬದುಕು ಸಾಗಿಸಲು ಸಹಕಾರಿಯಾಗುತ್ತದೆ. ಚಿಣ್ಣರ ಲೋಕದ ಮಕ್ಕಳು ಸಂಗೀತ, ಕಲೆಯಲ್ಲಿ ಇನ್ನು ಅನೇಕ ಪಠ್ಯೇತರ ಚಟುವಟಿಕೆಗಳಲ್ಲಿ ಉತ್ತಮ ಪ್ರದರ್ಶನ ನೀಡಿದ್ದಾರೆ. ಅದು ಮಕ್ಕಳ ನಿಜವಾದ ಬೆಳವಣಿಗೆಗೆ ಪೂರಕವಾಗಿದೆ. ಹಿಂದುಸ್ಥಾನವ ಎಂದು ಮರೆಯದ ಭಾರತ ರತ್ನವಾಗಬೇಕು ಎಂದು ಹಾಡಿನ ಮೂಲಕ ಗಮನ ಸೆಳೆದರು.
ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೆಶಕ ಶಾಂತಗೌಡ ಬಿ.ಆರ್. ಮಾತನಾಡಿ, ರಾಷ್ಟ್ರೀಯ ಪಠ್ಯಕ್ರಮದ ನೀತಿಯಂತೆ ಮಗು ಸರ್ವತೋಮುಖವಾಗಿ ಬೆಳವಣಿಗೆ ಹೊಂದಬೇಕು. ಅದಕ್ಕಾಗಿ ಮಕ್ಕಳ ಮನಸ್ಸು ಅರಳುವ ರೀತಿಯಲ್ಲಿ ಶಿಕ್ಷಣ ನೀಡಬೇಕು. ನಾಲ್ಕು ಗೋಡೆ ನಡುವೆ ಶಿಕ್ಷಣ ನೀಡದೆ ಸಂಗೀತ, ಸಾಹಿತ್ಯ, ಕಲೆ, ಸಂಸ್ಕೃತಿಯನ್ನು ಮಕ್ಕಳಿಗೆ ಕಲಿಸಬೇಕು ಎಂದು ಹೇಳಿದರು.
ಸಂಗೀತ ಸಂಯೋಜಕ ಪದ್ಮಪಾಣಿ ಜೋಡಿದಾರ ಮಾತನಾಡಿ, ಮಕ್ಕಳು ಓದುವುದರೊಂದಿಗೆ ಬರೆಯುವುದನ್ನು ರೂಢಿಸಿಕೊಂಡರೆ ಒಂದರಿಂದ ಹತ್ತರವರೆಗೆ ರ್ಯಾಂಕ್ ಪಡೆಯಬಹುದು ಎಂದು ಹೇಳಿದರು. ಸರ್ವಜ್ಞ ಶಿಕ್ಷಣ ಸಂಸ್ಥೆಗಳ ಸಮೂಹ ಅಧ್ಯಕ್ಷ ಪ್ರೊ| ಚನ್ನಾರೆಡ್ಡಿ ಪಾಟೀಲ ಅಧ್ಯಕ್ಷತೆ ವಹಿಸಿದ್ದರು.
ಸಂಸ್ಥೆ ಅಧ್ಯಕ್ಷರಾದ ಗೀತಾ ಚನ್ನಾರೆಡ್ಡಿ ಪಾಟೀಲ, ಅಭಿಷೇಕ್ ಪಾಟೀಲ, ನ್ಯಾಯವಾದಿ ಅಯ್ಯನಗೌಡ ಪಾಟೀಲ, ಸರ್ವಜ್ಞ ಕಾಲೇಜಿನ ಪ್ರಾಚಾರ್ಯ ಎಂ.ಸಿ. ಕಿರೇದಳ್ಳಿ, ಸರ್ವಜ್ಞ ಚಿಣ್ಣರ ಲೋಕದ ಪ್ರಾಂಶುಪಾಲರಾದ ಆರ್.ಎಂ. ಸಿಂಧೆ, ನಿರ್ದೇಶಕರಾದ ಡಾ| ಸಂತೋಷಕುಮಾರ ನಾಗಲಾಪುರ, ಕಾಂತಾ ಲಿಂಗಮ್, ಪ್ರಶಾಂತ ಕುಲಕರ್ಣಿ, ಕರುಣೇಶ ಹಿರೇಮಠ, ಗುರುರಾಜ ಕುಲಕರ್ಣಿ ಇದ್ದರು.
ಶರಣ್ಯ ತಂಡದವರು ಪ್ರಾರ್ಥಿಸಿದರು. ಡಾ| ಸಂತೋಷಕುಮಾರ ಸ್ವಾಗತಿಸಿದರು. ಗಂಗಾಧರ ಬಡಿಗೇರ ನಿರೂಪಿಸಿದರು. ನಂತರ ಸರ್ವಜ್ಞ ಚಿಣ್ಣರ ಲೋಕದ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಎರಡು ಸಾವಿರಕ್ಕೂ ಹೆಚ್ಚು ಪಾಲಕರು ಭಾಗವಹಿಸಿ ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮ ವೀಕ್ಷಿಸಿದರು.
ಟಾಪ್ ನ್ಯೂಸ್
![Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ](https://www.udayavani.com/wp-content/uploads/2024/07/shi1-415x229.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![2-chithapura](https://www.udayavani.com/wp-content/uploads/2024/07/2-chithapura-150x90.jpg)
Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ
![13-sedam](https://www.udayavani.com/wp-content/uploads/2024/07/13-sedam-150x90.jpg)
Sedam: ಕರ್ತವ್ಯ ನಿರತ ವೈದ್ಯರ ಮೇಲೆ ಹಲ್ಲೆ, ಆರೋಪಿಗಳ ಬಂಧನಕ್ಕೆ ಆಗ್ರಹ
![1-sci](https://www.udayavani.com/wp-content/uploads/2024/07/1-sci-150x91.jpg)
Agricultural scientist ತಳಿ ಸಂಶೋಧಕ ಡಾ. ಎಸ್.ಎ.ಪಾಟೀಲ್ ನಿಧನ
![ಅರಣ್ಯ ಭೂಮಿ ಒತ್ತುವರಿ ಮಾಡಿ ನಿರ್ಮಿಸಿದ್ದ ಶೆಡ್ ನೆಲಸಮ ಮಾಡಿದ ಅಧಿಕಾರಿಗಳು](https://www.udayavani.com/wp-content/uploads/2024/07/chikk1-150x83.jpg)
Kaduru; ಅರಣ್ಯ ಭೂಮಿ ಒತ್ತುವರಿ ಮಾಡಿ ನಿರ್ಮಿಸಿದ್ದ ಶೆಡ್ ನೆಲಸಮ ಮಾಡಿದ ಅಧಿಕಾರಿಗಳು
![Serial Thief: ಚಿತ್ತಾಪುರ ಪಟ್ಟಣದ ಐದು ಮನೆಗಳಲ್ಲಿ ಕಳ್ಳತನ; ಸಿಸಿಟಿವಿಯಲ್ಲಿ ದೃಶ್ಯ ಸೆರೆ](https://www.udayavani.com/wp-content/uploads/2024/07/chittapura-1-150x84.jpg)
Serial Thief: ಚಿತ್ತಾಪುರ ಪಟ್ಟಣದ ಐದು ಮನೆಗಳಲ್ಲಿ ಕಳ್ಳತನ, ಸಿಸಿಟಿವಿಯಲ್ಲಿ ದೃಶ್ಯ ಸೆರೆ
MUST WATCH
ಹೊಸ ಸೇರ್ಪಡೆ
![Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ](https://www.udayavani.com/wp-content/uploads/2024/07/shi1-150x83.jpg)
Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ
![2-chithapura](https://www.udayavani.com/wp-content/uploads/2024/07/2-chithapura-150x90.jpg)
Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-150x90.jpg)
Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ
![Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ](https://www.udayavani.com/wp-content/uploads/2024/07/BUILDING-1-150x84.jpg)
Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ
![Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು](https://www.udayavani.com/wp-content/uploads/2024/07/BIKE-7-150x86.jpg)
Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.