ಗುರಿ ಜತೆ ಸಾಧನೆ ಹೆಜ್ಜೆ ಆತ್ಮಾವಲೋಕನ ಮಾಡಿಕೊಳ್ಳಿ
Team Udayavani, Feb 1, 2017, 12:47 PM IST
ಕಲಬುರಗಿ: ವಿದ್ಯಾರ್ಥಿಗಳು ಜೀವನದಲ್ಲಿ ಗುರಿ ಇಟ್ಟರೆ ಸಾಲದು, ಗುರಿ ಹಾದಿಯಲ್ಲಿ ಎಷ್ಟರ ಮಟ್ಟಿಗೆ ಸಾಧನೆ ಹೊಂದಲಾಗುತ್ತಿದೆ ಎನ್ನುವುದನ್ನು ಆತ್ಮಾವಲೋಕನ ಮಾಡಿಕೊಂಡು ಮುಂದಿನ ಹೆಜ್ಜೆ ಇಟ್ಟರೆ ಯಶಸ್ಸು ಖಂಡಿತ ಎಂದು ಭಾರತೀಯ ಸೇನೆ ಅಧಿಕಾರಿ ಕರ್ನಲ್ ವೆಂಕಟರೆಡ್ಡಿ ಶಿವಪುರ ಹೇಳಿದರು.
ಕಾಯಕ ಫೌಂಡೇಷನ್ ಎಜುಕೇಷನ್ ಟ್ರಸ್ಟ್ನ ನಗರದ ಕೆಸರಟಗಿ ರಸ್ತೆಯಲ್ಲಿರುವ ಕಾಯಕ ಫೌಂಡೇಷನ್ ಕಾಲೇಜು ಆವರಣದಲ್ಲಿ ನಡೆದ ಕಾಯಕ ಫೌಂಡೇಷನ್ ಪ್ರಾಥಮಿಕ ಮತ್ತು ವಸತಿ ಪ್ರೌಢಶಾಲೆ ಹಾಗೂ ಕಾಯಕ ಫೌಂಡೇಷನ್ ವಿಜ್ಞಾನ ಮತ್ತು ವಾಣಿಜ್ಯ ಪದವಿ ಪೂರ್ವ ಕಾಲೇಜುಗಳ ವಾರ್ಷಿಕ ಸ್ನೇಹ ಸಂಭ್ರಮ, ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಅವರು ಮಾತನಾಡಿದರು.
ಜೀವನದಲ್ಲಿ ಸಾಧನೆ ಮಾಡಲು ಆಗದು, ಎನ್ನುವುದು ಯಾವೂದು ಇಲ್ಲ. ಮಾಸಿಕವಾಗಿ, ದೈಹಿಕವಾಗಿ ಹಾಗೂ ಬೌದ್ಧಿಕವಾಗಿ ಸನ್ನದ್ಧರಾಗಿ ದೃಢತೆಯೊಂದಿಗೆ ಮುನ್ನುಗ್ಗುವ ಮೂಲಕ ಸಾಧನೆ ಮೆರೆಯಬೇಕು ಎಂದು ಹೇಳಿದರು. ಕಾಯಕ ಫೌಂಡೇಷನ್ ಎಜುಕೇಷನ್ಟ್ರಸ್ಟ್ ಅಧ್ಯಕ್ಷೆ ಸಪ್ನಾ ಶಿವರಾಜ ಪಾಟೀಲ ಅಧ್ಯಕ್ಷತೆ ವಹಿಸಿದ್ದರು.
ಸಂಸ್ಥಾಪಕ ಶಿವರಾಜ ಟಿ. ಪಾಟೀಲ ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾಯಕ ಫೌಂಡೇಷನ್ ಪ್ರೌಢ ಶಾಲೆಯ ಪ್ರಾಂಶುಪಾಲ ವಿಜಯಕುಮಾರ ಕಟ್ಟಿಮನಿ, ಪ್ರಾಥಮಿಕ ಶಾಲೆಯ ಪ್ರಾಂಶುಪಾಲರಾದ ವೈಶಾಲಿ ಗೋತಗಿ, ಕಾಯಕ ಫೌಂಡೇಷನ್ ಕಾಲೇಜಿನ ಪ್ರಾಚಾರ್ಯ ವಿನಾಯಕ, ನ್ಯಾಯವಾದಿ ಬಸವರಾಜ ಬಿರಾದಾರ ಸೊನ್ನ, ಅಮೃತರೆಡ್ಡಿ ಬಸವ ಕಲ್ಯಾಣ, ಗೌರಿಶಂಕರ ಗೋಗಿ ಇದ್ದರು. ನಂತರ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್
Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ
ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್ಡಿಐಎ ಧ್ಯೇಯ: ಜೆ.ಪಿ. ನಡ್ಡಾ