ಮುಂಗಾರು ಹಂಗಾಮಿನಲ್ಲಿ ಶೇ. 19 ಪ್ರತಿಶತದಷ್ಟು ಬೆಳೆ ಹಾನಿ


Team Udayavani, Sep 24, 2022, 2:15 PM IST

4crop

ಅಫಜಲಪುರ: 2022ರ ಸಾಲಿನಲ್ಲಿ ವ್ಯಾಪಕ ಮಳೆಯಾಗಿದ್ದರಿಂದ ಈ ಬಾರಿಯೂ ಮುಂಗಾರು ಹಂಗಾಮಿನಲ್ಲಿ ಶೇ. 19 ಪ್ರತಿಶತದಷ್ಟು ಬೆಳೆ ಹಾನಿಯಾಗಿದೆ.

ತಾಲೂಕಿನ ಗೊಬ್ಬೂರ(ಬಿ), ಅತನೂರ, ಅಫಜಲಪುರ, ಕರ್ಜಗಿ ವಲಯಗಳಲ್ಲಿ ಮಳೆ ಹೆಚ್ಚಾಗಿದ್ದರಿಂದ ಬೆಳೆಗಳೆಲ್ಲ ಹಾಳಾಗಿವೆ. ಸಾಲ ಮಾಡಿ ಬಿತ್ತನೆ ಮಾಡಿದ್ದ ರೈತರಿಗೆ ಈಗ ಆಘಾತ ಉಂಟಾಗಿದೆ.

ರೈತರ ಕಣ್ಣೀರು ಒರೆಸುವವರು ಯಾರು?: ಪ್ರತಿ ವರ್ಷ ವ್ಯಾಪಕ ಮಳೆ, ಬರಗಾಲ ದಿಂದಾಗಿ ಬೆಳೆಗಳು ಹಾಳಾಗುತ್ತಿವೆ. ಆದರೆ ರೈತರಿಗೆ ಪುಡಿಗಾಸಿನಷ್ಟು ಪರಿಹಾರ ಸಿಗುತ್ತಿಲ್ಲ ರೈತರು ಕಣ್ಣೀರು ಹಾಕುತ್ತಿದ್ದಾರೆ.

ಶೇ.50 ಹತ್ತಿ, ಶೇ. 24.2 ತೊಗರಿ ಹಾಳು: ತಾಲೂಕಿನಾದ್ಯಂತ 1.30.479 ಹೆಕ್ಟೇರ್‌ ಭೌಗೋಳಿಕ ಕ್ಷೇತ್ರವಿದೆ. 1.10.590 ಹೆಕ್ಟೇರ್‌ ಬಿತ್ತನೆಯಾಗಿದೆ. ಇದರಲ್ಲಿ 20.227 ಹೆಕ್ಟೇರ್‌ ಮುಂಗಾರು ಹಂಗಾಮಿನ ಬೆಳೆಗಳು ಹಾಳಾಗಿವೆ. ಅದರಲ್ಲೂ ಶೇ.50 ಹತ್ತಿ, ಶೇ. 24.2 ಪ್ರತಿಶತದಷ್ಟು ತೊಗರಿ ಬೆಳೆ ಹಾಳಾಗಿವೆ. 110 ಹೆಕ್ಟೇರ್‌ ಹೆಸರು, 112 ಹೆಕ್ಟೇರ್‌ ಉದ್ದು, 3504 ಹೆಕ್ಟೇರ್‌ ಹತ್ತಿ, 16,066 ಹೆಕ್ಟೇರ್‌ ತೊಗರಿ, 265 ಹೆಕ್ಟೇರ್‌ ಮೆಕ್ಕೆಜೋಳ, 24 ಹೆಕ್ಟೇರ್‌ ಸೋಯಾಬಿನ್‌ ಬೆಳೆಗಳೆಲ್ಲ ಸೇರಿ ಒಟ್ಟು ಶೇ. 19 ಪ್ರತಿಶತದಷ್ಟು, ಸೂರ್ಯಕಾಂತಿ196ಹೆಕ್ಟೇರ್‌ ಬೆಳೆ ಹಾಳಾಗಿದೆ.

ವಾಡಿಕೆಗಿಂತ ಹೆಚ್ಚಿನ ಮಳೆ: ತಾಲೂಕಿನಾ ದ್ಯಂತ ವಾಡಿಕೆ ಮಳೆ ಜನವರಿಯಿಂದ ಸೆಪ್ಟೆಂಬರ್‌ 21ರ ವರೆಗೆ 507.7 ಮಿ.ಮೀ ಆಗಬೇಕಿಗಿತ್ತು. ಆದರೆ 649.8 ಮಿ.ಮೀ ಮಳೆ ದಾಖಲಾಗುವ ಮೂಲಕ ಶೇ. 28% ಪ್ರತಿಶತದಷ್ಟು ಹೆಚ್ಚಾಗಿದೆ. ಜೂನ್‌ 1ರಿಂದ 30ರ ವರೆಗೆ 97 ಮಿ.ಮೀ ಮಳೆಯಾಗಬೇಕಾಗಿತ್ತು. ಆದರೆ 65 ಮಿ.ಮೀ ಮಾತ್ರ ಮಳೆಯಾಗಿ ಶೇ. 33 ರಷ್ಟು ಕೊರತೆಯಾಗಿತ್ತು. ಹೀಗಾಗಿ ಬಿತ್ತನೆಗೆ ಸ್ವಲ್ಪ ಹಿನ್ನಡೆಯಾಗಿತ್ತು. ಆದರೆ ನಂತರದ ತಿಂಗಳುಗಳಲ್ಲಿ ವಾಡಿಕೆಗಿಂತ ಹೆಚ್ಚಿನ ಮಳೆ ದಾಖಲಾಗಿ ಬಿತ್ತಿದ ಬೆಳೆಗಳೆಲ್ಲ ನೀರಿಗೆ ಆಹುತಿಯಾಗುವಂತೆ ಆಗಿದೆ. ಒಟ್ಟಾರೆ ಹವಾಮಾನ ವರದಿ ನೋಡಿದಾಗ ಜೂನ್‌ ತಿಂಗಳಲ್ಲಿ ಶೇ.33ಪ್ರತಿಶತ ಮಳೆ ಕೊರತೆಯಾದರೂ ಇಲ್ಲಿಯವರೆಗೆ ಒಟ್ಟು ಶೇ.108 ಪ್ರತಿಶತದಷ್ಟು ಮಳೆ ಹೆಚ್ಚಾಗಿದೆ.

ಈಗಾಗಲೇ ಕೃಷಿ, ಕಂದಾಯ ಹಾಗೂ ತೋಟಗಾರಿಕೆ ಇಲಾಖೆಗಳು ಜಂಟಿ ಬೆಳೆ ಹಾನಿ ಸರ್ವೇ ಮಾಡಿ ಸರ್ಕಾರಕ್ಕೆ ವರದಿ ಸಲ್ಲಿಸಿವೆ. ಸರ್ಕಾರದಿಂದ ಬರುವ ಪರಿಹಾರ ನೇರವಾಗಿ ರೈತರ ಖಾತೆಗೆ ಪಾವತಿ ಆಗಲಿದೆ. ಎಸ್‌.ಎಚ್ಗಡಗಿಮನಿ, ಸಹಾಯಕ ಕೃಷಿ ನಿರ್ದೇಶಕ, ಅಫಜಲಪುರ

-ಮಲ್ಲಿಕಾರ್ಜುನ ಹಿರೇಮಠ

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Mallikarjun Kharge ಕ್ಷೇತ್ರದಲ್ಲಿ 19 ಚುನಾವಣೆಯಲ್ಲಿ 16 ಬಾರಿ ಗೆದ್ದ ಕಾಂಗ್ರೆಸ್‌

Mallikarjun Kharge ಕ್ಷೇತ್ರದಲ್ಲಿ 19 ಚುನಾವಣೆಯಲ್ಲಿ 16 ಬಾರಿ ಗೆದ್ದ ಕಾಂಗ್ರೆಸ್‌

Kalaburagi; ಪಾಪರ್ ಆಗಿದ್ದರೆ KKRDB ಅಭಿವೃದ್ದಿಗೆ ಹೇಗೆ ಹಣ ಕೊಡುತ್ತಿದ್ದೇವು?: ಖಂಡ್ರೆ

Kalaburagi; ಪಾಪರ್ ಆಗಿದ್ದರೆ KKRDB ಅಭಿವೃದ್ದಿಗೆ ಹೇಗೆ ಹಣ ಕೊಡುತ್ತಿದ್ದೆವು?: ಖಂಡ್ರೆ

Kalaburagi; ಸೋಲಿನ ಭಯದಿಂದ ಹಿಂದೆ ಸರಿದ ಡಾ.‌ಖರ್ಗೆ: ವಿಪಕ್ಷ ನಾಯಕ ಆರ್ ಅಶೋಕ

Kalaburagi; ಸೋಲಿನ ಭಯದಿಂದ ಹಿಂದೆ ಸರಿದ ಡಾ.‌ಖರ್ಗೆ: ವಿಪಕ್ಷ ನಾಯಕ ಆರ್ ಅಶೋಕ

1-wqeqwewq

Minister ಪ್ರಿಯಾಂಕ ಖರ್ಗೆ ಉದ್ಧಟತನ ಅತಿಯಾಗಿದೆ: ಸಂಸದ ಡಾ.ಜಾಧವ್

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.