ಸಾಲುಮರದ ತಿಮ್ಮಕ್ಕ ವೃಕ್ಷೋದ್ಯಾನ ಲೋಕಾರ್ಪಣೆ


Team Udayavani, Jul 16, 2022, 11:19 AM IST

7timmakka

ಆಳಂದ: ಬಯಲು ಪ್ರದೇಶ ಈ ಭಾಗದಲ್ಲಿ ಪರಿಸರ ಸಂರಕ್ಷಣೆ ಜೊತೆಗೆ ಕೈಗೊಂಡ ವೃಕ್ಷೊàಧ್ಯಾನವನದಲ್ಲಿ ಪ್ರಾಣಿ ಸಂಗ್ರಾಲಯ ಅವಶ್ಯಕವಾಗಿದೆ. ಅಧಿಕಾರಿಗಳು ಸಂಗ್ರಹಾಲಯ ಕೈಗೊಳ್ಳಲು ಮುಂದಾದರೆ ಅಗತ್ಯ ನೆರವು ಒದಗಿಸಲಾಗುವುದು ಎಂದು ಶಾಸಕ ಸುಭಾಷ ಗುತ್ತೇದಾರ ಭರವಸೆ ನೀಡಿದರು.

ಪಟ್ಟಣದ ಕೊರಳ್ಳಿ ರಸ್ತೆಯಲ್ಲಿ ನಿರ್ಮಾಗೊಂಡ ಸಾಲು ಮರದ ತಿಮ್ಮಕ್ಕನ ವೃಕ್ಷೊàದಾನ್ಯವನ್ನು ಶುಕ್ರವಾರ ಲೋಕಾರ್ಪಣೆ ಕೈಗೊಂಡು ಅವರು ಮಾತನಾಡಿದರು.

ವಾತಾವರಣದಲ್ಲಿ ಹೆಚ್ಚಾಗಿ ಕೈಗಾರಿಕೆ, ವಾಹನ ಸೇರಿ ಹಲವು ವಿಧಗಳಿಂದ ಪರಿಸರ ಮಾಲಿನ್ಯ ಹೆಚ್ಚತೊಡಗಿದ್ದು, ಶುದ್ಧ ಗಾಳಿಗಾಗಿ ಪರದಾಡುವಂತಾಗಿದೆ. ಈ ನಿಟ್ಟಿನಲ್ಲಿ ಗಿಡ, ಮರಗಳು ಬೆಳೆಸುವುದು ತೀರಾ ಅಗತ್ಯವಾಗಿದೆ. ಸಾಲುಮರದ ತಿಮ್ಮಕ್ಕನವರು ಗಿಡ, ಮರಗಳನ್ನು ಮಕ್ಕಳಂತೆ ಬೆಳೆಸಿ ಸಾಧನೆ ಮಾಡಿದ್ದರಿಂದ ಪದ್ಮವಿಭೂಷಣ ಸೇರಿದಂತೆ ಹಲವು ಪ್ರಶಸ್ತಿ ಪುರಸ್ಕಾರಗಳು ಅವರಿಗೆ ದಕ್ಕಿವೆ. ಅವರ ಹೆಸರಿನಲ್ಲಿ ರಾಜ್ಯ ಸರ್ಕಾರ ವೃಕ್ಷೊàದ್ಯಾನ ಸ್ಥಾಪಿಸಿ ಪರಸರ ಪ್ರಜ್ಞೆ ಮೂಡಿಸುತ್ತಿದೆ ಎಂದರು.

ಇಲ್ಲಿನ ವೃಕ್ಷೋದ್ಯಾನದಲ್ಲಿ ವಿವಿಧ ಗಿಡ, ಮರಗಳನ್ನು ಬೆಳೆಸಬೇಕು. ಮಕ್ಕಳು, ಸಾರ್ವಜನಿಕ ರನ್ನು ಕೈಬಿಸಿ ಕರೆಯುವಂತ ವಾತಾವರಣ ಇಲ್ಲಿದೆ. ಇದರ ಜತೆಗೆ ಪಕ್ಷಿ ಸಂಕುಲಕ್ಕೆ ಮತ್ತು ಪ್ರಾಣಿಗಳ ಪರಿಚಯ, ಸಂರಕ್ಷಣೆಗೆ ಪ್ರಾಣಿ ಸಂಗ್ರಾಲಯವೂ ಇಲ್ಲಿ ಆಗಬೇಕು. ಇದಕ್ಕಾಗಿ ಅಗತ್ಯ ನೆರವು ನೀಡಲು ಬದ್ಧವಾಗಿದ್ದೇನೆ ಎಂದು ಭರವಸೆ ನೀಡಿದರು.

ಕೇವಲ ಅರಣ್ಯ ಇಲಾಖೆ ಮಾತ್ರ ಅರಣ್ಯ ಕೃಷಿ ಮಾಡಿದರೆ ಸಾಲದು. ರೈತರು ಸಹ ಅರಣ್ಯ ಇಲಾಖೆ ಸೌಲಭ್ಯಗಳನ್ನು ಪಡೆದು ಅರಣ್ಯ ಕೃಷಿಯ ಲಾಭ ಪಡೆಯಬೇಕು ಎಂದು ಸಲಹೆ ನೀಡಿದರು.

ಕಲಬುರಗಿ ವೃತ್ತ ಅರಣ್ಯ ಸಂರಕ್ಷಣಾಧಿಕಾರಿ ಡಾ| ಎಸ್‌.ವೆಂಕಟೇಶನ್‌ (ಐಎಫ್‌ಎಸ್‌) ಮಾತನಾಡಿ, ಪರಿಸರ ಸಂರಕ್ಷಣೆ ಪ್ರತಿಯೊಬ್ಬರಲ್ಲೂ ಜಾಗೃತಿ ಮೂಡಿಸಬೇಕಾಗಿದೆ. ಹೆಚ್ಚು ಗಿಡ, ಮರಗಳನ್ನು ಬೆಳೆಸಿದರೆ ಪರಿಸರದಲ್ಲಿ ಶುದ್ಧ ಗಾಳಿ, ಮಳೆ ಬರಲು ಅನುಕೂಲವಾಗುತ್ತದೆ ಎಂದರು.

ಕಲಬುರಗಿ ವೃತ್ತ ಪ್ರಾದೇಶಿಕ ಉಪ ಅರಣ್ಯ ಸಂರಕ್ಷಣಾಧಿಕಾರಿ ಸಂತೋಷಕುಮಾರ ಕೆಂಚಪ್ಪನ ವರ ಪ್ರಸ್ತಾವಿಕವಾಗಿ ಮಾತನಾಡಿದರು. ಡಿವೈಎಸ್‌ಪಿ ರವಿಂದ್ರ ಶಿರೂರ, ಬಿಜೆಪಿ ಮಂಡಲ ಅಧ್ಯಕ್ಷ ಆನಂದ ಪಾಟೀಲ, ಅಮರ್ಜಾ ಎಇಇ ಗೌತಮ ಕಾಂಬಳೆ, ರೈತರಾದ ನಾಗರಾಜ ಶೇಗಜಿ, ಶರಣು ಪಾಟೀಲ ದೇವಂತಗಿ, ಸಾಮಾಜಿಕ ವಲಯ ಕಲಬುರಗಿ ಉಪ ಅರಣ್ಯಾಧಿಕಾರಿ ಎಂ.ಎಲ್‌. ಭಾವಿಕಟ್ಟಿ, ಚಂದ್ರಶೇಖರ ಹೆಮ್ಮಾ ಹಾಗೂ ನೆರೆಯ ಕಿತ್ತೂರುರಾಣಿ ಚೆನ್ನಮ್ಮ, ಮೊರಾರ್ಜಿ ದೇಸಾಯಿ ವಸತಿ ಶಾಲೆ ವಿದ್ಯಾರ್ಥಿಗಳು, ಸಿಬ್ಬಂದಿ, ಅರಣ್ಯ ಇಲಾಖೆಯ ಸಂಜು ಚವ್ಹಾಣ, ರಾಘವೇಂದ್ರ ಗಾಯಕವಾಡ, ವಿಜಯಕುಮಾರ, ಸಂತೋಷ, ಕಾಶಿನಾಥ ಕಲಶೆಟ್ಟಿ, ತುಕ್ಕಪ್ಪ ಹಾಗೂ ಮತ್ತಿತರರು ಇದ್ದರು.

ಇದೇ ವೇಳೆ ಅರಣ್ಯ ಕೃಷಿ ಕೈಗೊಂಡ ರೈತರಿಗೆ ತಲಾ 25ಸಾವಿರ ರೂ. ಪ್ರೋತ್ಸಾಹಧನದ ಚೆಕ್‌ನ್ನು ಶಾಸಕರು ವಿತರಿಸಿದರು. ಕಲಬುರಗಿ ಪ್ರಾದೇಶಿಕ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಸುನೀಲಕುಮಾರ ಚವ್ಹಾಣ ಸ್ವಾಗತಿಸಿದರು. ಶಿಕ್ಷಣ ಸಂಯೋಜಕ ಸಂತೋಷ ಕುಮಾರ ನಿರೂಪಿಸಿದರು. ಆರ್‌ಎಫ್‌ಒ ಜಗನಾಥ ಕೋರಳ್ಳಿ ವಂದಿಸಿದರು. ಕಲಾವಿದ ಶಿವಶರಣಪ್ಪ ಪೂಜಾರಿ, ಬಸವರಾಜ ಆಳಂದ ಸಂಗೀತ ನಡೆಸಿಕೊಟ್ಟರು. ಪಿಟಿಲು ವಾದಕ ಭದ್ರಿನಾಥ ಮುಡಬಿ ಸಂಗೀತ ತಂಡದಿಂದ ವಿದ್ಯಾರ್ಥಿಗಳು ಪ್ರಾರ್ಥನೆ ಮತ್ತು ನಾಡಗೀತೆ ಸಾದರಪಡಿಸಿದರು.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.