ತೆಲಂಗಾಣ ಸಿಎಂ ಭಾವಚಿತ್ರಕ್ಕೆ ಚಪ್ಪಲಿ ಏಟು
Team Udayavani, Sep 15, 2021, 5:26 PM IST
ವಾಡಿ (ಚಿತ್ತಾಪುರ): ತೆಲಂಗಾಣ ರಾಜ್ಯದಲ್ಲಿ ಆರು ವರ್ಷದ ಬಾಲಕಿ ಮೇಲೆ ನಡೆದ ಅತ್ಯಾಚಾರ ಹಾಗೂ ಕೊಲೆ ಘಟನೆ ಖಂಡಿಸಿ ಬಂಜಾರಾ ಗೋರ್ ಸೇನಾ ಮುಖಂಡರು ಬುಧವಾರ ಸಂಜೆ ವಾಡಿ ಪಟ್ಟಣದಲ್ಲಿ ಪ್ರತಿಭಟನೆ ನಡೆಸಿದರು.
ಪಟ್ಟಣದ ಅಂಬೇಡ್ಕರ್ ವೃತ್ತದಲ್ಲಿ ತೆಲಂಗಾಣ ಸಿಎಂ ಕೆ.ಚಂದ್ರಶೇಖರ ರಾವ್ ಅವರ ಭಾವಚಿತ್ರವನ್ನು ರಸ್ತೆಗೆ ಎಸೆದು ಚಪ್ಪಲಿ ಸೇವೆ ಮಾಡಿದ ಪ್ರತಿಭಟನಾಕಾರರು, ಬೆಂಕಿ ಹಚ್ಚಿ ದಹಿಸುವ ಮೂಲಕ ಆಕ್ರೋಶ ಹೊರಹಾಕಿದರು.
ಬಾಲಕಿಯ ಮೇಲೆ ಅಮಾನವೀಯವಾಗಿ ವರ್ತಿಸಿದ ಆರೋಪಿಗಳನ್ನು ಗಲ್ಲಿಗೇರಿಸಬೇಕು. ಬಂಜಾರಾ ಜನಾಂಗದ ಮೇಲೆ ಹೆಚ್ಚುತ್ತಿರುವ ದೌರ್ಜನ್ಯಗಳನ್ನು ತಡೆಯಬೇಕು. ತೆಲಂಗಾಣ ಸಿಎಂ, ಕೂಡಲೇ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು.
ಇದನ್ನೂ ಓದಿ:23 ಅನಧಿಕೃತ ಧಾರ್ಮಿಕ ಕೇಂದ್ರಗಳ ತೆರವಿಗೆ ಸಿದ್ಧತೆ
ಗೋರ್ ಸೇನಾ ಅಧ್ಯಕ್ಷ ರವಿ ಕಾರಬಾರಿ, ಬಿಜೆಪಿ ಮಹಿಳಾ ಮೋರ್ಚಾ ಜಿಲ್ಲಾ ಕಾರ್ಯದರ್ಶಿ ನಿವೇದಿತಾ ದಹಿಹಂಡೆ, ಮಖಂಡರಾದ ವಿಠ್ಠಲ ನಾಯಕ, ಬಾಬುಮಿಯ್ಯಾ, ಹಣಮಂತ ಚವ್ಹಾಣ, ರಾಹುಲ ಸಿಂಧಗಿ, ವೀರಣ್ಣ ಯಾರಿ, ಲೋಕೇಶ ರಾಠೋಡ, ಕಿಶನ ಜಾಧವ, ಗಿರಿಮಲ್ಲಪ್ಪ ಕಟ್ಟಿಮನಿ, ಅಂಬಾದಾಸ ಜಾಧವ,ಅಶೋಕ ಪವಾರ, ಜಗತ್ ಸಿಂಗ್ ರಾಠೋಡ ಸೇರಿದಂತೆ ನೂರಾರು ಜನ ಬಂಜಾರಾ ಪ್ರತಿಭಟನಾಕಾರರು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ
Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
MUST WATCH
ಹೊಸ ಸೇರ್ಪಡೆ
ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ
MDH- Everest ಮಸಾಲೆ ನಿಷೇಧ: ಸಿಂಗಾಪುರ, ಹಾಂಕಾಂಗ್ ನಿಂದ ವಿವರ ಕೇಳಿದ ಭಾರತ
Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ
Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು
Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್