ಶಿರಪೂರ ಮಾದರಿಯಿಂದ ಆಳಂದದಲ್ಲಿ ಅಂತರ್ಜಲ ಹೆಚ್ಚಳ


Team Udayavani, Sep 2, 2022, 2:37 PM IST

4-water

ಮಾದನಹಿಪ್ಪರಗಿ: ಐದಾರು ವರ್ಷಗಳ ಹಿಂದೆ ಆಳಂದ ತಾಲೂಕು ಬರದ ಛಾಯೆಯಲ್ಲಿತ್ತು. ಮಳೆಗಾಲದಲ್ಲೂ ಮಳೆ ಅಪರೂಪವಾಗಿತ್ತು. ಜನ-ಜಾನುವಾರುಗಳು ಕುಡಿಯುವ ನೀರಿಗಾಗಿ ಬಡಿದಾಡುವುದು ಸಾಮಾನ್ಯ ಸಂಗತಿಯಾಗಿತ್ತು. ಹಳ್ಳಿಹಳ್ಳಿಗಳಲ್ಲಿ ಟ್ಯಾಂಕರ್‌ ಮೂಲಕ ನೀರು ಸರಬರಾಜು ಮಾಡಲಾಗುತ್ತಿತ್ತು. ಇಂತಹ ಸಂದರ್ಭದಲ್ಲಿ ಕೈ ಹಿಡಿದಿದ್ದೇ ಮಹಾರಾಷ್ಟ್ರ ರಾಜ್ಯದ ಧುಳೆ ಜಿಲ್ಲೆಯ ಶಿರಪೂರ ಮಾದರಿ ಯೋಜನೆ.

ಜಾನುವಾರುಗಳಿಗೆ ನೀರು, ಮೇವಿನ ಕೊರತೆ ತೀವ್ರ ವಾಗಿದ್ದಾಗ ಆಗಿನ ಶಾಸಕರಾಗಿದ್ದ ಬಿ.ಆರ್‌.ಪಾಟೀಲ ಅಂದಿನ ಸರ್ಕಾರಕ್ಕೆ ಬರಗಾಲದ ವರದಿ ಸಲ್ಲಿಸಿದ್ದರು. ಹೀಗಾಗಿ ಸರ್ಕಾರ ಆಳಂದ ತಾಲೂಕಿನಲ್ಲಿ ಐದಾರು ಕಡೆ ಗೋಶಾಲೆ ತೆರೆದಿತ್ತು. ರೈತರು ತಮ್ಮ ಜಾನುವಾರುಗಳನ್ನು ಬದುಕಿಸಲು ಗೋಶಾಲೆಯಲ್ಲಿ ದನಕರುಗಳೊಂದಿಗೆ ತಿಂಗಳಗಟ್ಟಲೆ ಬೀಡುಬಿಟ್ಟಿದ್ದರು. ಆಗ ರಾಜ್ಯದಲ್ಲಿ ಅತೀ ದೊಡ್ಡ ಗೋಶಾಲೆಯನ್ನು ಮಾದನಹಿಪ್ಪರಗಿಯಲ್ಲಿ ತೆರೆಯಲಾಯಿತು. ಇದನ್ನು ನೋಡಲು ರಾಜ್ಯದ ಕೆಲ ಸಚಿವರು, ಶಾಸಕರು ಗೋಶಾಲೆಗೆ ಭೇಟಿ ನೀಡಿದ್ದರು. ಆದರೀಗ ಆಳಂದ ತಾಲೂಕಿನ ಕೆಲವು ಪ್ರದೇಶಗಳಲ್ಲಿ ಚಿತ್ರಣ ಬದಲಾಗಿದೆ.

ಕಡು ಬೇಸಿಗೆ ಕಾಲದಲ್ಲೂ ಕುಡಿಯುವ ನೀರಿಗೆ ಬರವಿಲ್ಲ. ಜಾನುವಾರುಗಳಿಗೆ ಮೇವಿನ ಕೊರತೆಯಿಲ್ಲ. ಹಳ್ಳಕೊಳ್ಳ, ನಾಲಾಗಳಲ್ಲಿ ಜಾನುವಾರುಗಳಿಗೆ ನೀರು ಸಿಗುತ್ತಿದೆ. ಬಾವಿ, ಕೊಳವೆ ಬಾವಿಗಳಲ್ಲಿ ನೀರು ಬತ್ತಿಲ್ಲ. ರೈತರು ಬೇಸಿಗೆ ಕಾಲದಲ್ಲೂ ನೀರಾವರಿ ಬೆಳೆಗಳನ್ನು ಬೆಳೆಯುತ್ತಿದ್ದಾರೆ. ಇಷ್ಟೆಲ್ಲ ಹೇಗಾಯಿತು? ಇದು ಶಿರಪುರ ಮಾದರಿಯಲ್ಲಿ ಹಳ್ಳಕೊಳ್ಳ ನಾಲಾಗಳಿಗೆ ನಿರ್ಮಿಸಿದ ಚೆಕ್‌ ಡ್ಯಾಂಗಳಿಂದ ಸಾಧ್ಯವಾಯಿತು.

ಮಳೆಗಾಲದಲ್ಲಿ ಬಿದ್ದ ಮಳೆ ನೀರು ಹರಿದು ಹೋಗದಂತೆ ಕೆರೆ, ಗೋಕಟ್ಟೆ ಹಳ್ಳ, ನಾಲಾಗಳಿಗೆ ಒಡ್ಡು ಕಟ್ಟಿ ನೀರು ನಿಲ್ಲಿಸಿದ್ದರಿಂದ ಸಾಧ್ಯವಾಯಿತು. ಮಹಾರಾಷ್ಟ್ರದ ಧುಳೆ ಜಿಲ್ಲೆಯ ಶಿರಪೂರ ತಾಲೂಕಿನಲ್ಲಿ “ಹಳ್ಳಿಗಳ ಪುನರುಜ್ಜೀವನ’ ಕಾರ್ಯಕ್ರಮದ ಮಾದರಿ ಇದು. ಮಳೆ ನೀರನ್ನು ವ್ಯರ್ಥವಾಗಿ ಹರಿದು ಹೋಗುವುದನ್ನು ತಡೆಯಲು ಅಲ್ಲಿನ ಜನ ಹಳ್ಳಕೊಳ್ಳ, ನಾಲಾಗಳಿಗೆ ಒಡ್ಡು ಕಟ್ಟಿ (ಚೆಕ್‌ ಡ್ಯಾಂ)ದ್ದಾರೆ. ಇದರಿಂದ ಮಳೆ ನೀರು ಸಂಗ್ರಹವಾಗಿ ಅಂತರ್ಜಲ ನೀರಿನಮಟ್ಟ ಹೆಚ್ಚಳವಾಗಿದೆ. ಅಲ್ಲಿ ವಾರ್ಷಿಕ ಸರಾಸರಿ 400ಮಿ.ಮೀ ಮಳೆ ಬರುತ್ತದೆ. ಅಷ್ಟೇ ಮಳೆ ನೀರಿನ ಪ್ರಮಾಣದಲ್ಲಿ ಅಲ್ಲಿನ ರೈತರು ಸಾಕಷ್ಟು ಅಭಿವೃದ್ಧಿ ಹೊಂದಿದ್ದಾರೆ. ಅಲ್ಲಿನ ಸರಕಾರ ಮಳೆ ನೀರು ಹಿಡಿದಿಡುವ ಯೋಜನೆಯನ್ನು ಇಡೀ ರಾಜ್ಯಕ್ಕೆ ವಿಸ್ತರಿಸಿದೆ.

ಈ ಯೋಜನೆ ಕುರಿತು ಅರಿಯಲು ಆಳಂದ ವಿಧಾನಸಭೆ ಮತಕ್ಷೇತ್ರದಲ್ಲಿ ಕಳೆದ ಅವಧಿಯಲ್ಲಿ ಶಾಸಕರಾಗಿದ್ದ ಬಿ.ಆರ್‌.ಪಾಟೀಲರು ಮಹಾರಾಷ್ಟ್ರ ರಾಜ್ಯದ ಧುಳೆ ಜಿಲ್ಲೆಗೆ ಅಧ್ಯಯನ ತಂಡ ಕಳುಹಿಸಿದ್ದರು. ಸ್ವತಃ ಅವರು ಹೋಗಿ ಅಲ್ಲಿನ ಜಲತಜ್ಞರಾದ ಸುರೇಶ ಖಾನಾಪುರ, ಲಾತೂರಿನ ಪಾಷಾ ಪಟೇಲ ಅವರನ್ನು ಭೇಟಿ ಮಾಡಿ ಮಾಹಿತಿ ಪಡೆದಿದ್ದರು. ಪ್ರಾಯೋಗಿಕವಾಗಿ ತಾಲೂಕಿನಲ್ಲಿ ಕೆಲ ಹಳ್ಳಿಗಳಲ್ಲಿ 56ಕಿ.ಮೀ ಉದ್ದಳತೆಯಲ್ಲಿ 14ನಾಲಾಗಳಿಗೆ, 52 ಚೆಕ್‌ ಡ್ಯಾಂಗಳನ್ನು ನಿರ್ಮಿಸಲು ಆರ್ಥಿಕ ನೆರವಿಗಾಗಿ ಅಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬಿ.ಆರ್‌.ಪಾಟೀಲ ಮನವಿ ಮಾಡಿದ್ದರು. ಈ ಯೋಜನೆಯನ್ನು ಸಣ್ಣ ನೀರಾವರಿ ಇಲಾಖೆ ಸಚಿವರಾಗಿದ್ದ ಟಿ.ಬಿ.ಜಯಚಂದ್ರ ಅವರನ್ನು ಕರೆಯಿಸಿ ಉದ್ಘಾಟಿಸಿದ್ದರು.

ತಾಲೂಕಿನ ಬಬಲೇಶ್ವರ, ರುದ್ರವಾಡಿ, ಹೊದ ಲೂರು, ಜಂಬಗಾ(ಆರ್‌), ಕೋತನ ಹಿಪ್ಪರಗಾ, ಕಿಣ್ಣಿಸುಲ್ತಾನ, ಬಸವನ ಸಂಗೋಳಗಿ, ದೇಗಾಂವ್‌, ಪಡಸಾವಳಿ, ಖಾನಾಪುರ, ಹೆಬಳಿ, ಮಾದನಹಿಪ್ಪರಗಿ, ಚಲಗೇರಾ, ಮದಗುಣಕಿ, ಖೇಡಉಮರಗಾ, ದುತ್ತರ ಗಾಂವ್‌, ಸರಸಂಬಾ, ನಾಗಲೇಗಾಂವ್‌, ಸಕ್ಕರಗಾ, ಕಿಣ್ಣಿ ಅಬ್ಟಾಸ್‌, ಸಾವಳೇಶ್ವರ, ಮೋಘಾ(ಬಿ) ಮತ್ತು ಜಮಗಾ ಜೆ. ಸೇರಿದಂತೆ ಒಟ್ಟು 23 ಹಳ್ಳಿಗಳಲ್ಲಿ ಶಿರಪೂರ ಮಾದರಿ ಯೋಜನೆಯನ್ನು ಸಣ್ಣ ನೀರಾವರಿ ಇಲಾಖೆ ಕೈಗೆತ್ತಿಕೊಂಡಿತ್ತು. ಹೀಗಾಗಿ ಮಣ್ಣು ತುಂಬಿದ ನಾಲಾ ಮತ್ತು ಹಳ್ಳಗಳಲ್ಲಿ ಅಗೆತ ಶುರುಮಾಡಲಾಗಿತ್ತು. 10 ಮೀಟರ್‌ ಅಗಲ ಮತ್ತು 3ಮೀಟರ್‌ ಆಳ ತೋಡಿ, ಒಟ್ಟು 56 ಕಿ.ಮೀ ಉದ್ದದ ನಾಲೆಗಳಲ್ಲಿ 52ಚೆಕ್‌ ಡ್ಯಾಂಗಳನ್ನು ನಿರ್ಮಿಸಲಾಯಿತು. ಪ್ರತಿಯೊಂದು ಚೆಕ್‌ ಡ್ಯಾಂಗಳಲ್ಲಿ ಮೂರು ಜಲಪೂರಣ ಕೊಳವೆ ಬಾವಿಗಳನ್ನು ಕೊರೆಯಲಾಗಿದೆ. ಈ ಯೋಜನೆಗೆ ಒಟ್ಟು 21.59ಲಕ್ಷ ರೂ. ತಗುಲಿದೆ.

ಈಗ ಎರಡು ವರ್ಷಗಳಿಂದ ಮಳೆ ಚೆನ್ನಾಗಿ ಬರುತ್ತಿದೆ. ಇಲ್ಲಿ ಬೇಸಿಗೆ ಕಾಲದಲ್ಲೂ ರೈತರು ನೀರಾವರಿ ಬೆಳೆಗಳನ್ನು ಬೆಳೆಯುತ್ತಿದ್ದಾರೆ. ಚೆಕ್‌ ಡ್ಯಾಂಗಳನ್ನು ನಿರ್ಮಿಸಿದ ನಾಲ್ಕೈದು ಕಿ.ಮೀ ದೂರದ ಬಾವಿ, ಕೊಳವೆಬಾವಿಗಳಲ್ಲಿಯೂ ಬೇಸಿಗೆಯಲ್ಲೂ ನೀರು ಕಾಣಸಿಗುತ್ತದೆ. ಒಟ್ಟಾರೆಯಾಗಿ ಶಿರಪೂರ ಮಾದರಿ ಯೋಜನೆಯಿಂದ ರೈತರ ಬಾಳಿಗೆ ಸಂತೋಷ ಒದಗಿಬಂದಿದೆ.

ಮಾಡಿದ ಕೆಲಸ ಜನರಪರವಾಗಿರಬೇಕು. ನಮ್ಮ ಅನುಕೂಲಕ್ಕಾಗಿ ಅಲ್ಲ. ಜನಮಾನಸದಲ್ಲೂ ಉಳಿಯುವಂತಹ ಕಾರ್ಯಗಳು ಬಹಳಷ್ಟಿವೆ. ಆದರೆ ಮಾಡುವ ಇಚ್ಛಾಶಕ್ತಿ ಇಲ್ಲದಿದ್ದರೇ ಅಭಿವೃದ್ಧಿ ಕುಂಠಿತವಾಗುತ್ತದೆ. ಶಿರಪೂರ ಮಾದರಿ ಯೋಜನೆ ರೈತರಿಗೆ, ಸಾರ್ವಜನಿಕರಿಗೆ ಸಂತಸ ತಂದಿದೆ. ಸರ್ಕಾರ ಈ ಯೋಜನೆಯನ್ನು ನೀರಿನ ಅಭಾವ ಇರುವ ಪ್ರದೇಶಗಳಿಗೆ ವಿಸ್ತರಿಸಬೇಕು. ಬಿ.ಆರ್‌.ಪಾಟೀಲ, ಮಾಜಿ ಶಾಸಕ, ಆಳಂದ

-ಪರಮೇಶ್ವರ ಭೂಸನೂರ

ಟಾಪ್ ನ್ಯೂಸ್

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ

1-weewqewqe

LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ

crime (2)

Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Billionaire Priyanka; Here is the property details of Satish Jarakiholi’s daughter

Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

1—-wewewqe

Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

ಮೋದಿ ರಾಷ್ಟ್ರ ಮಟ್ಟದಲ್ಲಿ ಸುಳ್ಳು ಹೇಳಿದರೆ, ಜಾಧವ್ ಜಿಲ್ಲಾ ಮಟ್ಟದಲ್ಲಿ… ಖರ್ಗೆ ವಾಗ್ದಾಳಿ

ಮೋದಿ ರಾಷ್ಟ್ರ ಮಟ್ಟದಲ್ಲಿ ಸುಳ್ಳು ಹೇಳಿದರೆ, ಜಾಧವ್ ಜಿಲ್ಲಾ ಮಟ್ಟದಲ್ಲಿ… ಖರ್ಗೆ ವಾಗ್ದಾಳಿ

ಮೋದಿ ಗ್ಯಾರಂಟಿಗೆ ನೋ ವಾರಂಟಿ: ಸಚಿವ ಪ್ರಿಯಾಂಕ್ ಖರ್ಗೆ ಟೀಕೆ

Kalaburagi; ಮೋದಿ ಗ್ಯಾರಂಟಿಗೆ ನೋ ವಾರಂಟಿ: ಸಚಿವ ಪ್ರಿಯಾಂಕ್ ಖರ್ಗೆ ಟೀಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

11

ಆಲೆಟ್ಟಿ: ಅರಣ್ಯಕ್ಕೆ ತಗುಲಿದ ಬೆಂಕಿ

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

Tiger

Ponnampet; ಹುಲಿ ದಾಳಿಗೆ ಅಸ್ಸಾಂ ಮೂಲದ ಕಾರ್ಮಿಕ ಬಲಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.