ಪ್ರಶಸ್ತಿಯಿಂದ ಹೊಣೆಗಾರಿಕೆ ಹೆಚ್ಚಳ
Team Udayavani, Dec 2, 2018, 11:22 AM IST
ಆಳಂದ: ಮಠದ ಧರ್ಮ ಸೇವೆಯೊಂದಿಗೆ ಸಾಮೂಹಿಕ ವಿವಾಹ, ಕೃಷಿಯಲ್ಲಿ ಸಾಧನೆ ಸೇರಿದಂತೆ ಸಮಾಜಮುಖೀ ಕಾರ್ಯ ಮಾಡಿದವರಿಗೆ ನೀಡುವ ಗೌರವ ಡಾಕ್ಟರೇಟ್ನ್ನು ಶಿವಲಿಂಗೇಶ್ವರ ಸಂಸ್ಥಾನ ಹಿರೇಮಠದ ಪೀಠಾಧಿಪತಿ ಡಾ| ಶಂಭುಲಿಂಗ ಶಿವಾಚಾರ್ಯರಿಗೆ ಪಾಂಡಿಚೇರಿ ಅಂತಾರಾಷ್ಟ್ರೀಯ ವಿಶ್ವ ವಿದ್ಯಾಲಯ ನೀಡಿದ್ದು, ಈ ಪ್ರಶಸ್ತಿಗಳು ಸಾಮಾಜಿಕ ಹೊಣೆಗಾರಿಕೆ ಹೆಚ್ಚಳ ಮಾಡುತ್ತವೆ ಎಂದು ಶಾಸಕ ಸುಭಾಷ ಗುತ್ತೇದಾರ ಹೇಳಿದರು.
ತಾಲೂಕಿನ ಪಡಸಾವಳಿ ಮಠದ ಶಂಭುಲಿಂಗ ಶಿವಾಚಾರ್ಯರಿಗೆ ಗೌರವ ಡಾಕ್ಟರೇಟ್ ಲಭಿಸಿದ್ದಕ್ಕೆ ಗ್ರಾಮದ ಶಿವಲಿಂಗೇಶ್ವರ ಸಂಸ್ಥಾನ ಮಠದಲ್ಲಿ ಭಕ್ತರು ಹಮ್ಮಿಕೊಂಡಿದ್ದ ಅಭಿನಂಧನಾ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.
ಗುರುಗಳಿಗೆ ಗೌರವ ಡಾಕ್ಟರೇಟ್ ಬಂದಿದ್ದಕ್ಕೆ ಖುಷಿಯಾಗಿದೆ. ಶ್ರೀಗಳು ಡೋಣಗಾಂವ, ಉದಗೀರ ಮಠಗಳಿಗಿಂತ ಇಲ್ಲಿನ ಮಠಕ್ಕೆ ಮೊದಲ ಪ್ರಾಶಸ್ತ್ಯ ನೀಡಬೇಕು ಎಂದು ಮನವಿ ಮಾಡಿದರಲ್ಲದೇ, ಮಠದಲ್ಲಿ ಸಮುದಾಯ ಭವನ ನಿರ್ಮಿಸಲು ಅನುದಾನ ನೀಡುವುದಾಗಿ ಭರವಸೆ ನೀಡಿದರು.
ಹಿರೇನಾಗಾಂವ ಮಠದ ಶ್ರೀ ಜಯಶಾಂತಲಿಂಗ ಸ್ವಾಮೀಜಿ ನೇತೃತ್ವ ವಹಿಸಿದ್ದರು. ಅಚಲೇರ ಮಠದ ಪೀಠಾಧಿಪತಿ ಬಸವರಾಜೇಂದ್ರ ಸ್ವಾಮೀಜಿ ಸಮ್ಮುಖದಲ್ಲಿ ಕಾರ್ಯಕ್ರಮ ನಡೆಯಿತು. ಕಲಬುರಗಿಯ ಶಿವರಾಜ ಪಾಟೀಲ ಉಪನ್ಯಾಸ ನೀಡಿ, ಶ್ರೀಗಳು ಸಾರ್ವಜನಿಕರು, ರೈತರು, ಭಕ್ತರ ಪರವಾಗಿ ಮಾಡಿದ ಅನುಪಮ ಸೇವೆಗೆ ಗೌರವ ಡಾಕ್ಟರೆಟ್ ಲಭಿಸಿದೆ ಎಂದು ಹೇಳಿದರು.
ಭಕ್ತರ ಸನ್ಮಾನ ಸ್ವೀಕರಿಸಿ ಮಾತನಾಡಿದ ಡಾ| ಶಂಭುಲಿಂಗ ಶಿವಾಚಾರ್ಯರು ನಾನು ಕಾಡಿ, ಬೇಡಿ ತೆಗೆದುಕೊಂಡ ಡಾಕ್ಟರೆಟ್ ಪದವಿ ಇದಲ್ಲ. ಜನಪರ, ಜೀವಪರ ಕಾಳಜಿಗೆ ಸಂದ ಗೌರವ ಇದಾಗಿದೆ. ಇದು ಮಠಕ್ಕೆ ಮತ್ತು ಭಕ್ತರಿಗೆ ಸಲ್ಲುವ ಗೌರವ ಎಂದರು.
ಅಣದೂರಿನ ಶಿವಯೋಗೇಶ್ವರ ಶಿವಾಚಾರ್ಯರು, ಅಕ್ಕಲಕೋಟದ ಬಸವಲಿಂಗ ಸ್ವಾಮೀಜಿ, ನರೋಣಾದ ಗುರುಮಹಾಂತ ಸ್ವಾಮೀಜಿ, ಆಳಂದದ ಸಿದ್ದೇಶ್ವರ ಶಿವಾಚಾರ್ಯರು, ರಾಜೇಶ್ವರದ ಘನಲಿಂಗ ಶಿವಾಚಾರ್ಯರು, ಅಚಲೇರದ ಶಿವಮೂರ್ತಿ ಶಿವಾಚಾರ್ಯರು, ಕೇಸರಜವಳಗಾದ ವೀರಂತೇಶ್ವರ ಸ್ವಾಮೀಜಿ, ಜವಳಿಯ ಗಂಗಾಧರ ಸ್ವಾಮೀಜಿ, ಕಡಣಿಯ ರೇವಣಸಿದ್ದ ಸ್ವಾಮೀಜಿ ಸಮ್ಮುಖ ವಹಿಸಿದ್ದರು.
ಗ್ರಾಪಂ ಅಧ್ಯಕ್ಷೆ ಭೌರಮ್ಮ ಮಲ್ಲಿನಾಥ ಧುಲಂಗೆ ಅಧ್ಯಕ್ಷತೆ ವಹಿಸಿದ್ದರು. ಮುಖಂಡ ಮಲ್ಲಣ್ಣಾ ನಾಗೂರೆ, ಶರಣಬಸಪ್ಪ ಬಿರಾದಾರ, ರಮೇಶ ಲೋಹಾರ, ಕಾಂಗ್ರೆಸ್ ಜಿಲ್ಲಾ ಮುಖಂಡ ಶಂಕರರಾವ ದೇಶಮುಖ ನಿರಗುಡಿ, ರೇವಣಸಿದ್ದಪ್ಪ ನಾಗೂರೆ, ಸೋಮನಾಥ ಪಾಟೀಲ, ಅಶೋಕ ಹೌದೆ, ವೈಜನಾಥ ಕೋರೆ, ಸಿದ್ರಾಮಪ್ಪ ಕುಂಬಾರ, ಭೋಜರಾಜ ನಿಂಬರ್ಗಿ, ಯಶ್ವಂತ ಪ್ರಜಾರಿ
ಭಾಗವಹಿಸಿದ್ದರು. ಮಹಾದೇವಪ್ಪ ಪೂಜಾರಿ ಭಕ್ತಿಗೀತೆ ಹೇಳಿಕೊಟ್ಟರು.
ರಾಜಕುಮಾರ ಸುತಾರ ಸ್ವಾಗತಿಸಿದರು.ಗಜಾನಂದ ಕುಂಬಾರ ಪ್ರಾಸ್ತಾವಿಕವಾಗಿ ಮಾತನಾಡಿದರು. ಶ್ರೀಪಾಲ ಭೋಗಾರ ನಿರೂಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ
Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
MUST WATCH
ಹೊಸ ಸೇರ್ಪಡೆ
Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ
JP Hegde; ಉತ್ತಮರನ್ನು ಉಳಿಸಿಕೊಳ್ಳಬೇಕಾದ ಅನಿವಾರ್ಯತೆ ಜನತೆಗಿದೆ: ತೇಜಸ್ವಿನಿ
Udupi: ಅನುಮತಿಯಿಲ್ಲದೆ ಪೋಸ್ಟರ್ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್
Gadaga: 28 ರಂದು ಯುವಚೈತನ್ಯ ಕಾರ್ಯಕ್ರಮ: ಜ್ಯೂ. ಕೆ.ಎಚ್. ಪಾಟೀಲ