ದೇಶಾಭಿಮಾನ ಮೈಗೂಡಿಸಿಕೊಳ್ಳಿ : ಉಸ್ತುರಿ ಶ್ರೀ
Team Udayavani, Aug 16, 2022, 5:00 PM IST
ಆಳಂದ: ದೇಶದಲ್ಲೆಡೆ “ಹರ್ ಘರ್ ತಿರಂಗಾ’ಕ್ಕೆ ಕರೆ ನೀಡಿದಂತೆ ಪ್ರತಿಯೊಬ್ಬರೂ ದೇಶಾಭಿಮಾನ, ರಾಷ್ಟ್ರಪ್ರೇಮ ಮೈಗೂಡಿಸಿಕೊಳ್ಳಬೇಕು ಎಂದು ಉಸ್ತುರಿ, ಧುತ್ತರಗಾಂವ ಮಠದ ಶ್ರೀ ವಿಶ್ವನಾಥ ಕೋರಣೇಶ್ವರ ಮಹಾಸ್ವಾಮೀಜಿ ನುಡಿದರು.
ತಾಲೂಕಿನ ಧ್ಯಾನಭೂಮಿ ಬೆಳಮಗಿ ಗ್ರಾಮದಲ್ಲಿನ ಬುದ್ಧ ವಿವಾಹರದಲ್ಲಿ ರವಿವಾರ ಆಯೋಜಿಸಿದ್ದ ಧಮ್ಮ ರಕ್ಷಾಶೀಲ ಕಾರ್ಯಕ್ರಮ ಹಾಗೂ ಒಂದು ಜತೆ ವಿವಾಹ ಸಮಾರಂಭದ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು.
ಅಧ್ಯಕ್ಷತೆ ವಹಿಸಿದ್ದ ಬಂತೇ ಅಮರಜ್ಯೋತಿ, ಬೌದ್ಧರ ಜೀವನ ಶೈಲಿ ಸಂಸ್ಕಾರಗಳು ಕುರಿತು ಬೋಧಿಸಿ, ಧಮ್ಮ ಮಾರ್ಗದಲ್ಲಿ ಮತ್ತು ಸಂವಿಧಾನ ಮಾರ್ಗದಲ್ಲಿ ಸಮಾಜದಲ್ಲಿ ಶಾಂತಿ ಸುವ್ಯವಸ್ಥೆಗಾಗಿ ಮಹಾಪುರುಷರ ಚಿಂತನ ಮಂಥನ ಜತೆಗೆ ಧಾರ್ಮಿಕ ಕಾರ್ಯಗಳ ಮೂಲಕ ಜನರ ಕಲ್ಯಾಣಕ್ಕಾಗಿ ಶ್ರಮಿಸಲಾಗುತ್ತಿದೆ ಎಂದು ಹೇಳಿದರು.
ಶಾಂತಿವನ ಚರ್ಚ್ ಫಾದರ್ ಬಾಪು ಅತಿಥಿಯಾಗಿದ್ದರು. ಜಾಗತಿಕ ಲಿಂಗಾಯರ ಮಹಾಸಭಾ ತಾಲೂಕು ಅಧ್ಯಕ್ಷ ರಮೇಶ ಲೋಹಾರ ಮಾತನಾಡಿ, ಬಂತೇ ಅಮರಜ್ಯೋತಿ ಅವರ ಜನ ಸಾಮಾನ್ಯರಿಗೆ ನಿರಂತರ ಜಾಗೃತಿ ಮೂಡಿಸುವ ಕಾರ್ಯ ಶ್ಲಾಘನೀಯವಾಗಿದೆ ಎಂದರು.
ಇದೇ ವೇಳೆ ಝಳಕಿ ಗ್ರಾಮದ ಬಸವರಾಜ ನಿಂಗದಳಿ, ವಾಗªರಿ ಗ್ರಾಮದ ಸ್ನೇಹಾ ಅವರ ವಿವಾಹ ನೆರವೇರಿತು. ಗ್ರಾಪಂ ಸದಸ್ಯೆ ಪಾರ್ವತಿ ಅಂಬರಾಯ, ರಾಜು ಮುದಗಲೆ, ಗೌತಮ ಕಾಂಬಳೆ, ಧಾರ್ಮಿಕ ಮುಖಂಡರು ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ
Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ
Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್
MUST WATCH
ಹೊಸ ಸೇರ್ಪಡೆ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ