ಕಲಬುರಗಿ: ಜಿಟಿಜಿಟಿ ಮಳೆ ನಡುವೆ ಸ್ವಾತಂತ್ರ್ಯೋತ್ಸವ ಸಂಭ್ರಮ
Team Udayavani, Aug 15, 2020, 10:28 AM IST
ಕಲಬುರಗಿ: ಜಿಲ್ಲಾದ್ಯಂತ 74ನೇ ಸ್ವಾತಂತ್ರ್ಯೋತ್ಸವ ಸಂಭ್ರಮ ಮನೆ ಮಾಡಿದೆ. ಜಿಟಿಜಿಟಿ ಮಳೆ ನಡುವೆ ಹಲವಡೆ ರಾಷ್ಟ್ರ ಧ್ವಜಾರೋಹಣ ಮಾಡಲಾಯಿತು.
ಕಳೆದ ಮೂರು ದಿನಗಳಿಂದ ಮಳೆ ತುಂತುರು ಮಳೆಯಾಗುತ್ತಿದೆ. ಶನಿವಾರ ಬೆಳಿಗ್ಗೆಯಿಂದಲೂ ಜಿಟಿಜಿಟಿ ಮಳೆ ಸುರಿಯುತ್ತಿದ್ದು, ನಗರದ ಪೊಲೀಸ್ ಪರೇಡ್ ಮೈದಾನದಲ್ಲಿ ಕೈಮಗ್ಗ ಮತ್ತು ಜವಳಿ ಸಚಿವ ಶ್ರೀಮಂತ ಪಾಟೀಲ ಧ್ವಜಾರೋಹಣ ನೆರವೇರಿಸಿದರು.
ನಂತರದಲ್ಲಿ ಮಳೆಯಲ್ಲೇ ತೆರೆದ ವಾಹನದಲ್ಲಿ ಸಚಿವರು ಡಿಎಆರ್, ಕೆಎಸ್ಆರ್ ಪಿ, ಸಿವಿಲ್ ಪೊಲೀಸ್, ಕಾರಾಗೃಹ, ಹೋಂಗಾರ್ಡ್ ಮತ್ತು ಎನ್ ಸಿಸಿ ತುಕಡಿಗಳ ಬಳಿ ತೆರಳಿ ಗೌರವ ವಂದನೆ ಸ್ವೀಕರಿಸಿದರು.
ಸ್ವಾತಂತ್ರ್ಯೋತ್ಸವದಲ್ಲೂ ಕೋವಿಡ್ ಕುರಿತು ಜಾಗೃತಿ ಹೆಚ್ಚಿನ ಒತ್ತು ನೀಡಲಾಯಿತು. ವಿವಿಧ ಇಲಾಖೆಯ ಸ್ತಬ್ಧ ಚಿತ್ರಗಳು ಕೋವಿಡ್ ತಡೆಯ ಅರಿವು, ಸ್ವಚ್ಛತೆ ಬಗ್ಗೆ ಪ್ರತಿಬಿಂಬಿಸಿದವು.
ಕೆಕೆಆರ್ ಡಿಬಿ ಅಧ್ಯಕ್ಷ ದತ್ತಾತ್ರೇಯ ಪಾಟೀಲ ರೇವೂರ, ಸಂಸದ ಉಮೇಶ್ ಜಾಧವ್, ಜಿಪಂ ಅಧ್ಯಕ್ಷೆ ಸುವರ್ಣ ಮಾಲಾಜಿ, ಉಪಾಧ್ಯಕ್ಷೆ ಶೋಭಾ ಸಿರಸಗಿ, ಎಂಎಲ್ ಸಿ ಬಿ.ಜಿ.ಪಾಟೀಲ, ಪ್ರಾದೇಶಿಕ ಆಯುಕ್ತ ಡಾ.ಎನ್.ವಿ.ಪ್ರಸಾದ್, ಐಜಿಪಿ ಮನೀಷ. ಖರ್ಬೀಕರ್, ಜಿಲ್ಲಾಧಿಕಾರಿ ಶರತ್ ಬಿ, ಜಿಪಂ ಸಿಇಓ ಡಾ.ರಾಜಾ. ಪಿ., ಎಸ್ಪಿ ಸಿಮಿ ಮರಿಯಂ ಜಾರ್ಜ್, ಪಾಲಿಕೆ ಆಯುಕ್ತ ರಾಹುಲ್ ಪಾಂಡ್ವೆ, ಪೊಲೀಸ್ ಆಯುಕ್ತ ಎನ್.ಸತೀಶ್ ಕುಮಾರ ಸೇರಿ ಹಲವರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ
Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ
Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
MUST WATCH
ಹೊಸ ಸೇರ್ಪಡೆ
ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು
Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್