ಈಶಾನ್ಯ ಸಾರಿಗೆ ಸಂಸ್ಥೆಗೆ ಇಂಡಿಯಾ ಬಸ್‌ ಸೇಪ್ಟಿ ಪ್ರಶಸ್ತಿ


Team Udayavani, Jul 10, 2018, 11:47 AM IST

gul-4.jpg

ಕಲಬುರಗಿ: ಪ್ರಯಾಣಿಕರ ಸುರಕ್ಷತೆಗಾಗಿ ಹಲವಾರು ಸುಧಾರಣಾ ಕ್ರಮ ಕೈಗೊಂಡಿದ್ದಕ್ಕೆ ಪ್ರತಿಷ್ಠಿತ “ರಾಷ್ಟ್ರ ಮಟ್ಟದ ಇಂಡಿಯಾ ಬಸ್‌ ಸೇಫ್ಟಿ ಅವಾರ್ಡ್‌-2018 ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಗೆ ಲಬಿಸಿದೆ ಎಂದು ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ವ್ಯವಸ್ಥಾಪಕ ನಿರ್ದೇಶಕಿ ಹೆಪ್ಸಿಬಾರಾಣಿ ಕೊರ್ಲಪಾಟಿ ತಿಳಿಸಿದ್ದಾರೆ.

ಮಲೇಶಿಯಾದ ಕೌಲಾಲಂಪುರದಲ್ಲಿ ಜು. 7ರಂದು ನಡೆದ ರಾಷ್ಟ್ರಮಟ್ಟದ ಸಮಾರಂಭದಲ್ಲಿ ಮಲೇಶಿಯಾ ಪ್ರವಾಸೋದ್ಯಮ ಒಕ್ಕೂಟದ ಅಧ್ಯಕ್ಷ ಉಜಾದಿ ಉದಾನೀಸ್‌ ಅವರು ಪ್ರಶಸ್ತಿ ಪ್ರದಾನ ಮಾಡಿದ್ದಾರೆ. ರಾಷ್ಟ್ರದ ಎಲ್ಲ ಜಿಲ್ಲೆಗಳ ಸಾರಿಗೆ ಸಂಸ್ಥೆಗಳು ಇಂಡಿಯಾ ಬಸ್‌ ಸೇಫ್ಟಿ ಅವಾರ್ಡ್‌ಗಾಗಿ ಪೈಪೋಟಿಯಲ್ಲಿದ್ದವು. ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಪ್ರಯಾಣಿಕರ ಸುರಕ್ಷತೆಗಾಗಿ ಪ್ರಥಮಾದ್ಯತೆ ನೀಡಿದ್ದಕ್ಕಾಗಿ 2017-18ನೇ ಸಾಲಿನಲ್ಲಿ ಅಪಘಾತಗಳ ಪ್ರಮಾಣದಲ್ಲಿ ಗಣನೀಯ ಇಳಿಕೆಯಾಗಿದೆ.

ಇದನ್ನು ಪರಿಗಣಿಸಿ ರಾಷ್ಟ್ರಮಟ್ಟದ ಪ್ರಶಸ್ತಿ ನೀಡಲಾಗಿದೆ. ಸಮಾರಂಭದಲ್ಲಿ ಮಲೇಶಿಯಾ ಪ್ರವಾಸೋದ್ಯಮ ಇಲಾಖೆ ಪ್ರಧಾನ ನಿರ್ದೇಶಕ ಡಾಟುಕು ಸೆರಿ ಮಿರ್ಜಾ ಮೊಹಮ್ಮದ್‌ ತಯಾಬ್‌ ಹಾಗೂ ಇನ್ನಿತರ ಗಣ್ಯರು ಪಾಲ್ಗೊಂಡಿದ್ದರು.

ರಾಷ್ಟ್ರದಲ್ಲಿರುವ ಎಲ್ಲ ಸಾರಿಗೆ ಸಂಸ್ಥೆಗಳೊಂದಿಗೆ ಬಸ್‌ ಅಲಾಯಿನ್ಸ್‌ ಇಂಡಿಯಾ ಪ್ರೈವೇಟ್‌ ಲಿಮಿಟೆಡ್‌ನೊಂದಿಗೆ ಅರ್ನಸ್ಟ್‌ ಆ್ಯಂಡ್‌ ಯಂಗ್‌ ಎಲ್‌ಎಲ್‌ಪಿ ಮತ್ತು ಅಭಿ ಬಸ್‌ ಡಾಟ್‌ ಕಾಂ ನವರು ಹಲವಾರು ಬಾರಿ ಟೆಲಿಕಾನ್‌ ರೆನ್ಸನಲ್ಲಿ ಸಂಸ್ಥೆಗಳ ಮಾಹಿತಿ ಪಡೆದು ಅತ್ಯುತ್ತಮ ಬಸ್‌ ಸೇಪ್ಟಿ ಅವಾರ್ಡ್‌ಗಾಗಿ ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯನ್ನು ಅಂತಿಮವಾಗಿ ಆಯ್ಕೆ ಮಾಡಲಾಗಿತ್ತು. ಕೌಲಾಲಂಪುರದಲ್ಲಿ ಜು. 7ರಂದು ನಡೆದ ಅಂತಿಮ ಸುತ್ತಿನ ಆಯ್ಕೆ ಸಮಾರಂಭದಲ್ಲಿ ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ರಾಷ್ಟ್ರಮಟ್ಟದಲ್ಲಿಯೇ ಪ್ರಥಮ ದರ್ಜೆಯಲ್ಲಿ ಆಯ್ಕೆಯಾಗಿರುವುದು ಹೆಮ್ಮೆ ತರುವ ವಿಷಯವಾಗಿದೆ ಎಂದು ತಿಳಿಸಿದ್ದಾರೆ.

ರಾಷ್ಟ್ರಮಟ್ಟದ ಸಮಾರಂಭಕ್ಕೆ ಹಾಜರಾಗುವಂತೆ ಪ್ರೋತ್ಸಾಹ ಮತ್ತು ಸಹಕಾರ ನೀಡಿದ ಸಾರಿಗೆ ಖಾತೆ ಸಚಿವರು, ಸಾರಿಗೆ ಇಲಾಖೆ ಪ್ರಧಾನ ಕಾರ್ಯದರ್ಶಿಗಳು ಹಾಗೂ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ವ್ಯವಸ್ಥಾಪಕ ನಿರ್ದೇಶಕರಿಗೆ ಧನ್ಯವಾದಗಳನ್ನು ಸಲ್ಲಿಸಿರುವ ಹೆಪ್ಸಿಬಾರಾಣಿ ಕೊರ್ಲಪಾಟಿ ಅವರು ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಗೆ ಪ್ರಶಸ್ತಿ ಬರಲು ಮಾರ್ಗದರ್ಶನ ನೀಡಿದ ಸಾರಿಗೆ ಇಲಾಖೆ, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಹಿರಿಯ ಅಧಿಕಾರಿಗಳಿಗೆ ಕೃತಜ್ಞತೆ ಸಲ್ಲಿಸಿದ್ದಾರೆ.

ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಸಿಬ್ಬಂದಿ ಮತ್ತು ಅಧಿಕಾರಿ ವರ್ಗದವರ ಕಠಿಣ ಪರಿಶ್ರಮ, ಕರ್ತವ್ಯ ನಿಷ್ಠೆ ಬಹುಮುಖ್ಯವಾಗಿದೆ. ಮುಂಬರುವ ದಿನಗಳಲ್ಲಿ ಪ್ರಯಾಣಿಕರಿಗೆ ಇನ್ನು ಉತ್ತಮ ಹಾಗೂ ಸುರಕ್ಷಿತ ಸಾರಿಗೆ ಸೇವೆ ಒದಗಿಸಲು ಪ್ರಯಾಣಿಕರ ವಿಶ್ವಾಸಕ್ಕೆ ಪಾತ್ರರಾಗುವಂತೆ ಎಲ್ಲರೂ ಪ್ರಯತ್ನಿಸಬೇಕು ಎಂದು ಕೋರಿದ್ದಾರೆ.

ಟಾಪ್ ನ್ಯೂಸ್

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.