ಭಾರತ ಮತ್ತೆ ವಿಶ್ವಗುರುವಾಗಿಸಿ


Team Udayavani, Dec 18, 2018, 11:12 AM IST

dvg-1.jpg

ಕಲಬುರಗಿ: ಇಂದಿನ ಯುವ ವಿಜ್ಞಾನಿಗಳಿಗೆ ಸೌಲಭ್ಯ ಮತ್ತು ಅವಕಾಶಗಳು ಹೆಚ್ಚಿದ್ದು, ಸಿಕ್ಕ ಅವಕಾಶ ಉಪಯೋಗಿಸಿಕೊಂಡು ಭಾರತವನ್ನು ಮತ್ತೆ ವಿಶ್ವಗುರುವಾಗಿಸಬೇಕು ಎಂದು ಇಸ್ರೋ ನಿಕಟಪೂರ್ವ ಅಧ್ಯಕ್ಷ ಎ.ಎಸ್‌. ಕಿರಣಕುಮಾರ ಕರೆ ನೀಡಿದರು.

ಗುಲಬರ್ಗಾ ವಿಶ್ವವಿದ್ಯಾಲಯದ ಆವರಣದಲ್ಲಿ ಮೂರು ದಿನಗಳ ಕಾಲ ನಡೆದ 26ನೇ ರಾಜ್ಯ ಮಟ್ಟದ ಮಕ್ಕಳ
ವಿಜ್ಞಾನ ಸಮಾವೇಶದ ಸಮಾರೋಪ ಸಮಾರಂಭದಲ್ಲಿ ವಿದ್ಯಾರ್ಥಿಗಳೊಂದಿಗೆ ಸಂವಾದದಲ್ಲಿ ಪಾಲ್ಗೊಂಡು ಅವರು
ಮಾತನಾಡಿದರು. 

ಭಾರತ ಸಾವಿರಾರು ವರ್ಷಗಳ ಹಿಂದೆ ಜಗತ್ತಿನ ಅಗ್ರಗಣ್ಯ ದೇಶ ಎನಿಸಿತು ಎಂಬುದು ಸಂಶೋಧನೆಗಳಿಂದ
ತಿಳಿದಿದೆ ಎಂದು ಹೇಳಿದರು. ಪಾಶ್ಚಿಮಾತ್ಯ ಮತ್ತು ಯುರೋಪ ರಾಷ್ಟ್ರಗಳಲ್ಲಿ ಅಲ್ಲಿನ ಯುವಕರಿಗೆ ಸೌಲಭ್ಯಗಳು ಹೆಚ್ಚೆಚ್ಚು ಸಿಗುತ್ತಿವೆ ಎಂದು ಭಾವಿಸಲಾಗುತ್ತಿದೆ. ನಮ್ಮಲ್ಲೂ ಪ್ರತಿ ಕ್ಷಣವೂ ಅವಕಾಶಗಳು ಇರುತ್ತವೆ. ನಮ್ಮಲ್ಲಿನ ಬುದ್ಧಿಯನ್ನು ಬೆಳೆಸಿಕೊಂಡು ಪ್ರಶ್ನೆಗಳನ್ನು ಹಾಕಿ ವೈಜ್ಞಾನಿಕವಾಗಿ ಉತ್ತರ ಕಂಡುಕೊಳ್ಳಬೇಕು. ಇಚ್ಛಾ ಶಕ್ತಿ ಇದ್ದರೆ ಸಾಧನೆ ಸಾಧ್ಯ ಎಂಬುವುದು ಈಗಾಗಲೇ ಭಾರತದ ವಿಜ್ಞಾನಿಗಳು ತೋರಿಸಿಕೊಟ್ಟಿದ್ದಾರೆ ಎಂದು ಹೇಳಿದರು.

ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತ ವಿಶ್ವವೇ ಬೆರಗಾಗುವ ಮಾದರಿಯಲ್ಲಿ ಸಾಧನೆ ಮಾಡುತ್ತಿದೆ. ಭಾರತದ ವೈಜ್ಞಾನಿಕ ಕ್ಷಮತೆ, ತಂತ್ರಜ್ಞಾನದ ಕ್ಷಮತೆ ಜಗತ್ತಿನ ಬೇರೆ ದೇಶಗಳ ತಂತ್ರಜ್ಞಾನದ ವಿಸ್ತಾರಕ್ಕೂ ನೆರವಾಗುತ್ತಿದೆ. ಬಾಹ್ಯಾಕಾಶ
ತಂತ್ರಜ್ಞಾನದಲ್ಲಿ ಸ್ವಾವಲಂಬನೆ ಮೂಲಕ ಪ್ರಪಂಚದಲ್ಲಿ ಮುಂಚೂಣಿಯಲ್ಲಿದೆ ಎಂದು ಹೇಳಿದರು.

ಜಗತ್ತಿನಲ್ಲಿ 31 ರಾಷ್ಟ್ರಗಳು ಉಪಗ್ರಹಗಳ ಉಡಾವಣೆ ಮಾಡುತ್ತಿವೆ. ಕಳೆದ ವರ್ಷ ಏಕಕಾಲಕ್ಕೆ ಒಂದೇ ರಾಕೆಟ್‌ನಲ್ಲಿ 104 ಉಪಗ್ರಹಗಳ ಉಡಾವಣೆ ಮಾಡಿದಾಗ ಇಡೀ ಜಗತ್ತು ನಮ್ಮತ್ತ ತಿರುಗಿ ನೋಡಿದೆ. ಇಷ್ಟೊಂದು ಉಪಗ್ರಹಗಳನ್ನು ಏಕಕಾಲಕ್ಕೆ ಉಡಾವಣೆ ಮಾಡಲು ಹೇಗೆ ಸಾಧ್ಯವಾಯಿತು ಎಂಬ ಉದ್ಘಾರಗಳು ಜಗತ್ತಿನಲ್ಲಿ ಎದ್ದಿದ್ದವು.

ನಾವು ಮಂಗಳಯಾನ ತಡವಾಗಿ ಆರಂಭಿಸಿದ್ದರೂ ಒಂದೇ ಯತ್ನದಲ್ಲಿ ಯಶಸ್ವಿಯಾಗಿ ಸಾಧಿಸಬಹುದು ಎಂದು ಪ್ರಪಂಚಕ್ಕೆ ಸಾರಿದ್ದೇ ಎಂದು ಹೇಳಿದರು.

ಪ್ರತಿ 15 ನಿಮಿಷಕ್ಕೊಮ್ಮೆ ವಾತಾವರಣದ ಮಾಹಿತಿ: ಇಸ್ರೋ ಉಡಾವಣೆಗೊಳಿಸಿರುವ ನ್ಯಾವಿಗೇಶನ್‌ ಉಪಗ್ರಹದ ಮೂಲಕ ಭಾರತದ ಸುತ್ತ-ಮುತ್ತಲಿನ ವಾತಾವರಣ ಮತ್ತು ಮೋಡ ಚಲನೆಗಳ ಮಾಹಿತಿಯನ್ನು ಪ್ರತಿ 15 ನಿಮಿಷಕ್ಕೊಮ್ಮೆ ತಿಳಿಯಬಹುದಾಗಿದೆ. ಯಾವ ಸ್ಥಳಕ್ಕೆ ಚಂಡಮಾರುತ ಅಪ್ಪಿಳಿಸುತ್ತಿದೆ ಎಂದು ಐದಾರು ದಿನಗಳ ಮುಂಚೆ ತಿಳಿಯಬಹುದಾಗಿದೆ. ಇದರಿಂದ ಚಂಡಮಾರುತಕ್ಕೆ ಸಿಲುಕಿ ಸಾವನ್ನಪ್ಪುತ್ತಿದ್ದ ಸಹಸ್ರಾರು ಜನರ ಜೀವ ಉಳಿಸಬಹುದಾಗಿದೆ ಎಂದು ಹೇಳಿದರು.

ಸಮುದ್ರದ ಯಾವ ಸ್ಥಳದಲ್ಲಿ ಮೀನುಗಳಿವೆ ಎಂಬುವುದು ಮೀನುಗಾರರಿಗೆ ಸ್ಥಳೀಯ ಭಾಷೆಯಲ್ಲೇ ತಿಳಿಸುವ ತಂತ್ರಜ್ಞಾನ ಹೊಂದಿದೆ. ಜತೆಗೆ ಸೇನೆ, ವೈದ್ಯಕೀಯ ಕ್ಷೇತ್ರ, ಗ್ರಾಪಂ ಮಟ್ಟದಲ್ಲೂ ನೆರವಾಗುವ ಮಾಹಿತಿ ತಿಳಿಯಬಹುದಾಗಿದೆ. ನಮ್ಮ ಬಾಹ್ಯಾಕಾಶ ತಂತ್ರಜ್ಞಾನ ದೈನಂದಿನ ಜೀವನಕ್ಕೆ ಉಪಯೋಗವಾಗುವ ರೀತಿಯಲ್ಲಿ ಅಭಿವೃದ್ಧಿ ಮಾಡಲಾಗಿದೆ ಎಂದು ಹೇಳಿದರು.

ಟಾಪ್ ನ್ಯೂಸ್

8-gadag

Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

5-bng

Bengaluru: ಪ್ರೀತಿಸಿ ಮದುವೆ ಆಗುವುದಾಗಿ ಅಂಗವಿಕಲ ಯುವತಿಗೆ ವಂಚನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mallikarjun Kharge ಕ್ಷೇತ್ರದಲ್ಲಿ 19 ಚುನಾವಣೆಯಲ್ಲಿ 16 ಬಾರಿ ಗೆದ್ದ ಕಾಂಗ್ರೆಸ್‌

Mallikarjun Kharge ಕ್ಷೇತ್ರದಲ್ಲಿ 19 ಚುನಾವಣೆಯಲ್ಲಿ 16 ಬಾರಿ ಗೆದ್ದ ಕಾಂಗ್ರೆಸ್‌

Kalaburagi; ಪಾಪರ್ ಆಗಿದ್ದರೆ KKRDB ಅಭಿವೃದ್ದಿಗೆ ಹೇಗೆ ಹಣ ಕೊಡುತ್ತಿದ್ದೇವು?: ಖಂಡ್ರೆ

Kalaburagi; ಪಾಪರ್ ಆಗಿದ್ದರೆ KKRDB ಅಭಿವೃದ್ದಿಗೆ ಹೇಗೆ ಹಣ ಕೊಡುತ್ತಿದ್ದೆವು?: ಖಂಡ್ರೆ

Kalaburagi; ಸೋಲಿನ ಭಯದಿಂದ ಹಿಂದೆ ಸರಿದ ಡಾ.‌ಖರ್ಗೆ: ವಿಪಕ್ಷ ನಾಯಕ ಆರ್ ಅಶೋಕ

Kalaburagi; ಸೋಲಿನ ಭಯದಿಂದ ಹಿಂದೆ ಸರಿದ ಡಾ.‌ಖರ್ಗೆ: ವಿಪಕ್ಷ ನಾಯಕ ಆರ್ ಅಶೋಕ

1-wqeqwewq

Minister ಪ್ರಿಯಾಂಕ ಖರ್ಗೆ ಉದ್ಧಟತನ ಅತಿಯಾಗಿದೆ: ಸಂಸದ ಡಾ.ಜಾಧವ್

1-weeqw

PU Exam ನಕಲು ಮಾಡಲು ಸಹಕಾರ ನೀಡಿಲ್ಲವೆಂದು ಪೇದೆ‌ ಮೇಲೆಯೇ ಹಲ್ಲೆ!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

8-gadag

Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

7-bng

Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.