ಪಾಟೀಲ ಹೇಳಿಕೆಗೆ ಈಡಿಗರ ಖಂಡನೆ
Team Udayavani, Apr 8, 2018, 4:57 PM IST
ಜೇವರ್ಗಿ: ಜಿಪಂ ಸದಸ್ಯ ಅರುಣಕುಮಾರ ಪಾಟೀಲ ಈಳಿಗ್ಯಾ ಎಂದು ಸಂಬೋಧಿ ಸುವ ಮೂಲಕ ಒಂದು ಜಾತಿಯ ವೃತ್ತಿ ಮತ್ತು ಘನತೆಯನ್ನು ಅವಮಾನಿಸಿದ್ದು, ಅವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ತಾಲೂಕು ಆರ್ಯ ಈಡೀಗ ಸಮಾಜದ ಮುಖಂಡರು ತಹಶೀಲ್ದಾರ್ಗೆ ಮನವಿ ಪತ್ರ ಸಲ್ಲಿಸಿದರು.
ಸಮಾಜದ ಹಿರಿಯ ಮುಖಂಡ ಲಾಲಯ್ಯ ಗುತ್ತೇದಾರ ನೇತೃತ್ವದಲ್ಲಿ ನೂರಾರು ಸಮಾಜ ಬಾಂಧವರು ತಹಶೀಲ್ ಕಚೇರಿವರೆಗೆ ಮೌನ ಪ್ರತಿಭಟನಾ ಮೆರವಣಿಗೆ ನಡೆಸಿದರು. ರಾಜಕಾರಣದಲ್ಲಿರುವ ವ್ಯಕ್ತಿಗಳು ವೈಯಕ್ತಿಕವಾಗಿ ಮತ್ತು ಜಾತಿ ಕುರಿತು ಅವಹೇಳನಕಾರಿಯಾಗಿ ಮಾತನಾಡಬಾರದು. ಕೋಣ ಕಡಿಯಬೇಕು ಎಂದು ಜಾತಿ ಹೀಯಾಳಿಕೆ ಮಾಡಿರುವ ಮಾಜಿ ಶಾಸಕ ಎಂ.ವೈ.ಪಾಟೀಲ ಅವರ ಪುತ್ರ ಜಿಪಂ ಸದಸ್ಯ ಅರುಣಕುಮಾರ ಅವರ ಹೇಳಿಕೆಯನ್ನು ಈಡೀಗ ಸಮಾಜ ಬಲವಾಗಿ ಖಂಡಿಸುತ್ತದೆ.
ಜಿಪಂ ಸದಸ್ಯರಾಗಿ ಚುನಾಯಿತರಾದವರು ಎಲ್ಲ ಜಾತಿಯ ಮತಗಳಿಂದ ಗೆದ್ದಿರುತ್ತಾರೆ ಎನ್ನುವುದನ್ನು ಮರೆಯಬಾರದು. ಈಡೀಗ ಜಾತಿ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವ ಪಾಟೀಲ ವಿರುದ್ಧ ಸೂಕ್ತ ಕ್ರಮಕೈಗೊಳ್ಳಬೇಕೆಂದು ಮನವಿ ಪತ್ರದ ಮೂಲಕ ಆಗ್ರಹಿಸಿದರು. ಸಮಾಜದ ಮುಖಂಡ ದೇವಿಂದ್ರ ಗುತ್ತೇದಾರ, ಶಿವು ಗುತ್ತೇದಾರ, ನಾಗರಾಜ ಗುತ್ತೇದಾರ, ಜಾನಯ್ಯ ಗುತ್ತೇದಾರ, ವೆಂಕಟೇಶ ಎನ್. ಗುತ್ತೇದಾರ, ದೇವಿಂದ್ರಪ್ಪ ಮಾಸ್ತರ ಗುಡೂರ, ನವೀನ್ ಗುತ್ತೇದಾರ, ರಾಘವೇಂದ್ರ ಗುತ್ತೇದಾರ, ನಿಂಗಯ್ಯ ಗುತ್ತೇದಾರ, ಮಾನಯ್ಯ ಗುತ್ತೇದಾರ ಯಾಳವಾರ, ದೇವಿಂದ್ರ ಎಂ.ಗುತ್ತೇದಾರ, ಬಸಯ್ಯ ಗುತ್ತೇದಾರ ಅವರಾದ, ದೇವಿಂದ್ರ ಗುತ್ತೇದಾರ ಅಣಬಿ, ಲಾಲಯ್ಯ ಗುತ್ತೇದಾರ, ಜಾನಯ್ಯ ಗುತ್ತೇದಾರ ಕಟ್ಟಿಸಂಗಾವಿ ಮತ್ತಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ
Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ
Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
MUST WATCH
ಹೊಸ ಸೇರ್ಪಡೆ
Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ