ಎಂಟಿಎಸ್‌ ಕಾಲೋನಿ ಬಗ್ಗೆ ಅನಂತ ವ್ಯಾಮೋಹ


Team Udayavani, Nov 13, 2018, 10:35 AM IST

gul-1.jpg

ಹುಬ್ಬಳ್ಳಿ: ಕೇಂದ್ರ ಸಚಿವ ಅನಂತಕುಮಾರ ಅವರು ತಮ್ಮ ಬಾಲ್ಯ ಕಳೆದ ನಗರದ ಎಂಟಿಎಸ್‌ ಕಾಲೋನಿ ಬಗ್ಗೆ ಸಾಕಷ್ಟು ವ್ಯಾಮೋಹ ಹೊಂದಿದ್ದರು. ಅನಂತ ಕುಮಾರ ಅವರ ತಂದೆ ನಾರಾಯಣ ಶಾಸ್ತ್ರೀ ರೈಲ್ವೆ ನೌಕರರಾಗಿದ್ದ ಕಾರಣ ಇಲ್ಲಿನ ಅರವಿಂದ ನಗರದ ಎಂಟಿಎಸ್‌ ಕಾಲೋನಿಯ ವಸತಿಗೃಹದಲ್ಲಿ ಸುಮಾರು 30 ವರ್ಷಗಳ ಕಾಲ ವಾಸವಾಗಿದ್ದರು. ರಾಜಕೀಯವಾಗಿ ರಾಷ್ಟ್ರಮಟ್ಟದಲ್ಲಿ ಬೆಳೆದರೂ ಅನೇಕ ಬಾರಿ ಕುಟುಂಬ ಸಮೇತರಾಗಿ ಬಂದು ತಾವು ಬಾಲ್ಯ ಕಳೆದ ಮನೆಯನ್ನು ನೋಡಿಕೊಂಡು ಹೋಗುತ್ತಿದ್ದರು ಎಂದು ಅಲ್ಲಿನ ಹಿರಿಯ ನೌಕರರೊಬ್ಬರು ಸ್ಮರಿಸುತ್ತಾರೆ. 

ಬಾಲ್ಯದಲ್ಲೇ ನಾಯಕತ್ವದ ಹಂಬಲ: ಇವರ ನಾಯಕತ್ವದ ಗುಣಕ್ಕೆ ನೀರೆರದಿದ್ದು ರಾಷ್ಟ್ರೀಯ ಸ್ವಯಂ ಸೇವಕ ಸಂಘ. ಪ್ರಾಥಮಿಕ ಹಾಗೂ ಪ್ರೌಢಶಾಲೆ ಓದುತ್ತಿದ್ದ ಸಂದರ್ಭ ಎಂಟಿಎಸ್‌ ಕಾಲೋನಿಯಲ್ಲಿ ನಡೆಯುತ್ತಿದ್ದ ಆರ್‌ಎಸ್‌ಎಸ್‌ ಶಾಖೆ ಶಿಬಿರ ಇವರ ಮೇಲೆ ಸಾಕಷ್ಟು ಪ್ರಭಾವ ಬೀರಿತ್ತು. ಇಂದಿನ ಆಸ್ಪತ್ರೆಯಿರುವ ಖಾಲಿ ಜಾಗದಲ್ಲಿ ಅಂದು ಸಂಘದ ಶಾಖೆ ನಡೆಯುತ್ತಿತ್ತು. ಶಾಖೆಗೆ ಆಗಮಿಸುತ್ತಿದ್ದ ಆರಂಭದಲ್ಲೇ ಶಾಖೆ ಅಗ್ರೇಸರ (ನಾಯಕ) ಆಗಬೇಕೆಂಬ ಬಯಕೆ ಮೊಳಕೆಯೊಡೆದಿತ್ತು. ಆದರೆ ಇವರಿಗಿಂತ ಹಿರಿಯರಿಗೆ ಅವಕಾಶ ನೀಡಿದ್ದ ಪರಿಣಾಮ ಸಾಧ್ಯವಾಗಿರಲಿಲ್ಲ. ಕಾಲೇಜು ಹಂತದಲ್ಲಿ ಎಬಿವಿಪಿಯಲ್ಲಿ ತಮ್ಮ ಸಂಘಟನಾ ಚತುರತೆ ಮೆರೆದಿದ್ದರು. ರಾಜ್ಯ-ರಾಷ್ಟ್ರಮಟ್ಟದ ಸಂಪರ್ಕ ಬೆಳೆಸಿಕೊಂಡಿದ್ದರು ಎಂಬುದನ್ನು ಅಂದಿನ ದಿನಗಳಲ್ಲಿ ಸಂಘದ ಶಾಖೆ ನಡೆಸುತ್ತಿದ್ದ ಪ್ರಭಾಕರ ದಿವಟೆ ನೆನಪಿಸಿಕೊಳ್ಳುತ್ತಾರೆ. 

ಲ್ಯಾಮಿಂಗ್ಟನ್‌ ಶಾಲೆ ವಿದ್ಯಾರ್ಥಿ: ಹುಬ್ಬಳ್ಳಿ ಬಾಸೆ ಸ್‌ಮಿಷನ್‌ ಶಾಲೆಯಲ್ಲಿ ಪ್ರಾಥ ಮಿಕ ಶಿಕ್ಷಣ, ಅತಿರಥ ಮಹಾರಥರಿಗೆ ಅಕ್ಷರ ಜ್ಞಾನ ನೀಡಿರುವ ಲ್ಯಾಮಿಂಗ್ಟನ್‌ ಶಾಲೆಯಲ್ಲಿ ಅನಂತಕುಮಾರ ಹೈಸ್ಕೂಲ್‌ ಶಿಕ್ಷಣ, ಪಿ.ಸಿ.ಜಾಬಿನ್‌ ಪದವಿಪೂರ್ವ ಕಾಲೇಜಿನಲ್ಲಿ ವಿಜ್ಞಾನ ವಿಷಯದಲ್ಲಿ ಪಿಯು ಪೂರೈಸಿದ್ದರು. ಅನಂತರ ಶ್ರೀ ಕಾಡಸಿದ್ದೇಶ್ವರ ಮಹಾವಿದ್ಯಾಲಯದಲ್ಲಿ ಬಿಎ ಪದವಿ ಪೂರೈಸಿ, ಜೆಎಸ್‌ಎಸ್‌ ಕಾನೂನು ಮಹಾವಿದ್ಯಾಲಯದಲ್ಲಿ ಕಾನೂನು ಪದವಿ ಪಡೆದಿದ್ದರು.

ಎಬಿವಿಪಿಯಿಂದ ರಾಜಕಾರಣ: ಎಬಿವಿಪಿಯಲ್ಲಿ ನಗರ ಸಹ ಕಾರ್ಯದರ್ಶಿ, ನಗರ ಸಂಘಟನಾ ಕಾರ್ಯದರ್ಶಿಯಾಗಿದ್ದರು. 1982ರಲ್ಲಿ ಎಬಿವಿಪಿ ರಾಜ್ಯ ಕಾರ್ಯದರ್ಶಿ ಹಾಗೂ ವಿಭಾಗ ಪ್ರಮುಖ, 1985ರಲ್ಲಿ ರಾಷ್ಟ್ರೀಯ ಕಾರ್ಯದರ್ಶಿಯಾಗಿದ್ದರು. ಆಪ್ತರೊಂದಿಗೆ ಹರಟೆ, ಅಭಿವೃದ್ಧಿ: ಅನಂತಕುಮಾರ ತಮ್ಮದೇ ಆದ ಒಂದಿಷ್ಟು ಆಪ್ತ ಗೆಳೆಯರನ್ನು ಹೊಂದಿದ್ದರು. ಹುಬ್ಬಳ್ಳಿಗೆ ಆಗಮಿಸಿದ ಸಂದರ್ಭ ಅವರೊಂದಿಗೆ ಒಂದಿಷ್ಟು ಕಾಲ ಕಳೆಯದೆ ಬೆಂಗಳೂರಿಗೆ ಹೋಗುತ್ತಿರಲಿಲ್ಲ. ಬರುವಾಗಲೇ ಒಂದಿಷ್ಟು ಸಮಯ ನಿಗದಿ ಮಾಡಿಕೊಂಡು ಅವರದೇ ಆದ ಕೆಲವೊಂದು ಸ್ಥಳಗಳಲ್ಲಿ ಎಲ್ಲರೊಂದಿಗೆ ಸೇರುತ್ತಿದ್ದರು. ಹೆಚ್ಚಿನ ಸಮಯ ಕುಶಲೋಪರಿ ಹಾಗೂ ಹರಟೆಗೆ ಮೀಸಲಿಡುತ್ತಿದ್ದರು. ಸ್ಥಳೀಯ ಅಭಿವೃದ್ಧಿ ಕುರಿತು ಒಂದಿಷ್ಟು ಸಲಹೆ ಪಡೆಯುತ್ತಿದ್ದರು ಎನ್ನುತ್ತಾರೆ ಆಪ್ತ ಸ್ನೇಹಿತರಲ್ಲಿ ಒಬ್ಬರಾದ ಅಚ್ಯುತ್‌ ಲಿಮೆ.

ತವರಿನಲ್ಲೂ ಸಾಮಾಜಿಕ ಕಾರ್ಯ
ಅದಮ್ಯ ಚೇತನ ಫೌಂಡೇಶನ್‌ ಮೂಲಕ ಹಲವು ಸಾಮಾಜಿಕ ಕಾರ್ಯಕ್ರಮಗಳನ್ನು ಅನಂತಕುಮಾರ ಆರಂಭಿಸಿದ್ದರು. ತಾಯಿ ಗಿರಿಜಾ ಶಾಸ್ತ್ರೀ ಹೆಸರಿನ ಟ್ರಸ್ಟ್‌ನಡಿ ಅದಮ್ಯ ಚೇತನ ಫೌಂಡೇಶನ್‌ ಮೂಲಕ ಅನ್ನ, ಅಕ್ಷರ, ಆರೋಗ್ಯ, ಪರಿಸರ ಕಾಳಜಿ ಮೂಲಕ ಗ್ರಾಮೀಣಾಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಿದ್ದರು. ಅನ್ನಪೂರ್ಣ ಯೋಜನೆಯಡಿ ನಿತ್ಯವೂ ಈ ಭಾಗದಲ್ಲಿ ಸುಮಾರು 80 ಸಾವಿರ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟ ನೀಡಲಾಗುತ್ತಿದೆ. ಹುಬ್ಬಳ್ಳಿ-ಧಾರವಾಡ ಸೇರಿ ವಿವಿಧ ಕಡೆ ಫೌಂಡೇಶನ್‌ ವತಿಯಿಂದ ಸಸಿಗಳನ್ನು ನೆಟ್ಟು ಪರಿಸರ ಕಾಳಜಿ ತೋರಲಾಗಿದೆ. ಇಂತಹ ಕಾರ್ಯಕ್ರಮಗಳಿಗೆ ಸ್ವತಃ ಅನಂತಕುಮಾರ ಆಗಮಿಸಿ ಜನರಲ್ಲಿ ಜಾಗೃತಿ ಮೂಡಿಸುತ್ತಿದ್ದನ್ನು ಜಿಲ್ಲೆಯ ಜನ ಸ್ಮರಿಸುತ್ತಾರೆ.

ಪ್ಲೇಟ್‌ ಬ್ಯಾಂಕ್‌: ಪರಿಸರ ಕಾಳಜಿಗೆ ಪೂರಕವಾಗಿ ಪ್ಲಾಸ್ಟಿಕ್‌ ತಟ್ಟೆ ಹಾಗೂ ಲೋಟಗಳ ಬಳಕೆ ಕಡಿಮೆ ಮಾಡುವುದಕ್ಕಾಗಿ ಸ್ಟೀಲ್‌ ತಟ್ಟೆ-ಲೋಟಗಳನ್ನು ನೀಡುವ ನಿಟ್ಟಿನಲ್ಲಿ ಫೌಂಡೇಶನ್‌ನಿಂದ ಹುಬ್ಬಳ್ಳಿಯ ವಿಜಯನಗರದ ಕೆಂಪಣ್ಣವರ ಕಲ್ಯಾಣಮಂಟಪ ಬಳಿ ಪ್ಲೇಟ್‌ ಬ್ಯಾಂಕ್‌ ಆರಂಭಿಸಲಾಗಿದೆ. ಸುಮಾರು 2000ಕ್ಕೂ ಹೆಚ್ಚು ತಟ್ಟೆಗಳು ಇಲ್ಲಿವೆ.

ಹೇಮರಡ್ಡಿ ಸೈದಾಪುರ

ಟಾಪ್ ನ್ಯೂಸ್

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

7-thekkatte

Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ

Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

2-shimoga

Bhadravathi: ಲಾರಿ ಡಿಕ್ಕಿ, ರೈಲು ಹಳಿಗಳು ಏರುಪೇರು; ಎರಡೂವರೆ ತಾಸು ಪ್ರಯಾಣಿಕರು ಹೈರಾಣು

1-24-thursday

Daily Horoscope: ಕೊಟ್ಟ ಮಾತಿಗೆ ತಪ್ಪದಂತೆ ಎಚ್ಚರಿಕೆ ಇರಲಿ,ಅನವಶ್ಯ ವಿವಾದಗಳಿಂದ ದೂರವಿರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

ಮೋದಿ ರಾಷ್ಟ್ರ ಮಟ್ಟದಲ್ಲಿ ಸುಳ್ಳು ಹೇಳಿದರೆ, ಜಾಧವ್ ಜಿಲ್ಲಾ ಮಟ್ಟದಲ್ಲಿ… ಖರ್ಗೆ ವಾಗ್ದಾಳಿ

ಮೋದಿ ರಾಷ್ಟ್ರ ಮಟ್ಟದಲ್ಲಿ ಸುಳ್ಳು ಹೇಳಿದರೆ, ಜಾಧವ್ ಜಿಲ್ಲಾ ಮಟ್ಟದಲ್ಲಿ… ಖರ್ಗೆ ವಾಗ್ದಾಳಿ

ಮೋದಿ ಗ್ಯಾರಂಟಿಗೆ ನೋ ವಾರಂಟಿ: ಸಚಿವ ಪ್ರಿಯಾಂಕ್ ಖರ್ಗೆ ಟೀಕೆ

Kalaburagi; ಮೋದಿ ಗ್ಯಾರಂಟಿಗೆ ನೋ ವಾರಂಟಿ: ಸಚಿವ ಪ್ರಿಯಾಂಕ್ ಖರ್ಗೆ ಟೀಕೆ

crime (2)

Kalaburagi:ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಬರ್ಬರ ಹತ್ಯೆ

Lok Sabha Elections; ಸೋಲಿನ ಭೀತಿಯಿಂದ ಸ್ಪರ್ಧೆ ಮಾಡದ ಖರ್ಗೆ: ಅಗರವಾಲ್‌

Lok Sabha Elections; ಸೋಲಿನ ಭೀತಿಯಿಂದ ಸ್ಪರ್ಧೆ ಮಾಡದ ಖರ್ಗೆ: ಅಗರವಾಲ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

7-thekkatte

Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ

Election Campaign: ಕಾಂಗ್ರೆಸ್‌ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ

Election Campaign: ಕಾಂಗ್ರೆಸ್‌ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

6-fusion

UV Fusion: ಇಂಡಿ ಪಂಪ್‌ ಮಟ..

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.