ದ್ರೋಹಿಗಳಿಗೆ ನರಕ ಪ್ರಾಪ್ತಿ: ಶ್ರೀ


Team Udayavani, Aug 13, 2018, 11:06 AM IST

gul-3.jpg

ಕಲಬುರಗಿ: ಮನುಷ್ಯ ಧಾರ್ಮಿಕವಾಗಿ, ಆಧ್ಯಾತ್ಮಕವಾಗಿ ನೆಲೆಯೂರಬೇಕಾದರೆ ಮನಸ್ಸಿನಲ್ಲಿ ಕೃತಜ್ಞತೆ ಭಾವ ಹೊಂದಿರಬೇಕು ಎನ್ನುವುದನ್ನು ಮಹಾಭಾರತ ಸ್ಪಷ್ಟವಾಗಿ ತಿಳಿಸುತ್ತದೆ ಎಂದು ಉತ್ತರಾದಿ ಮಠಾಧೀಶ ಶ್ರೀ ಸತ್ಯಾತ್ಮತೀರ್ಥ ಶ್ರೀಪಾದಂಗಳವರು ನುಡಿದರು.

ಚಾತುರ್ಮಾಸ್ಯ ನಿಮಿತ್ತ ನೂತನ ವಿದ್ಯಾಲಯ ಆವರಣದಲ್ಲಿ ಹಾಕಲಾಗಿರುವ ಪ್ರಧಾನ ವೇದಿಕೆಯಲ್ಲಿ ಭಕ್ತರಿಗೆ ಅನುಗ್ರಹ ಸಂದೇಶ ನೀಡಿದ ಶ್ರೀಗಳು ಜೀವನದಲ್ಲಿ ಕೃತಜ್ಞತೆ ಮಹತ್ವ ಮತ್ತು ಅದರ ಅನರ್ಥ ಎರಡನ್ನು ತಿಳಿಯಬೇಕು. ನಮಗೆ ಉಪಕಾರ ಮಾಡಿದವರಿಗೆ ದ್ರೋಹ ಮಾಡಿದರೆ ಬ್ರಹ್ಮಹತ್ಯೆ ದೋಷಕ್ಕಿಂತ ಹೆಚ್ಚಿನ ಪಾಪ ಬರುತ್ತದೆ. ಆದ್ದರಿಂದ ಕೃತಜ್ಞತೆ ಸಲ್ಲಿಸುವ ಭಾವನೆ ಹೊಂದಿರಬೇಕು.

ಭೀಷ್ಮಾಚಾರ್ಯರು ಧರ್ಮರಾಜನಿಗೆ ನೀತಿ ಪಾಠ ಹೇಳುವ ಮೂಲಕ ಮಾನವರು ಹೇಗೆ ಬದುಕಬೇಕು ಎನ್ನುವುದನ್ನು ತಿಳಿಸಿಕೊಡುತ್ತಾರೆ ಎಂದರು. ಗೌತಮ ಎನ್ನುವ ದರಿದ್ರ ಬ್ರಾಹ್ಮಣ ಮತ್ತು ರಾಯಧರ್ಮ ಎನ್ನುವ ಪಕ್ಷಿಯ ಕಥೆ ಹೇಳುವ ಮೂಲಕ ಕೃತಜ್ಞತೆ ಮರೆತರೆ ಏನಾಗುತ್ತದೆ ಎನ್ನುವುದನ್ನು ತಿಳಿಸಿಕೊಟ್ಟಿದ್ದಾರೆ. 

ಉಪಕಾರ ಮಾಡಿದ ಪಕ್ಷಿಗೆ ದ್ರೋಹ ಮಾಡಿದ ಬ್ರಾಹ್ಮಣನಿಗೆ ನರಕಪ್ರಾಪ್ತಿ ಆಯಿತು. ಆ ಪಕ್ಷಿಗೆ ಸತ್ಯಲೋಕದಲ್ಲಿ ವಾಸವಾಗುವ ಅವಕಾಶ ಸಿಕ್ಕಿತು. ನಮ್ಮ ನಿಜ ಜೀವನದಲ್ಲೂ ಪಕ್ಷೀವಾಹನನಾದ ಭಗವಂತನು ನಮಗೆ ಮಾಡಿದ ಉಪಕಾರದ ಸ್ಮರಣೆ ಮರೆತರೆ ನಾವೂ ಕೂಡ ಆ ಬ್ರಾಹ್ಮಣ ಅನುಭವಿಸಿದ ನರಕಯಾತನೆ ಅನುಭವಿಸಬೇಕಾಗುತ್ತದೆ ಎನ್ನುವುದನ್ನು ತಿಳಿದುಕೊಳ್ಳಬೇಕು ಎಂದು ಎಚ್ಚರಿಸಿದರು.

ಕೃಷ್ಣಾಮೃತ ಮಹಾರ್ಣವ ಗ್ರಂಥದ ಪಾಠ: ನಗರದಲ್ಲಿ ನಡೆದು ಬರುತ್ತಿರುವ 23 ನೇ ಚಾತುರ್ಮಾಸ್ಯದ ವ್ರತಾಚರಣೆಯ ಅಂಗವಾಗಿ ನಿತ್ಯ ಬೆಳಗ್ಗೆ 7 ರಿಂದ 8 ಗಂಟೆ ವರೆಗೆ ಅವಧಿ ಮಧ್ವಾಚಾರ್ಯರು ರಚಿಸಿರುವ ಕೃಷ್ಣಾಮೃತ ಮಹಾರ್ಣವ ಗ್ರಂಥದ ಪಾಠ ಮುಂದುವರಿದಿದೆ.ಉತ್ತರಾದಿ ಮಠದ ಮೂಲದ ಪುರುಷ ಹಂಸನಾಮಕ ಶ್ರೀಮನ್ಮಹಾವಿಷ್ಣು ಜಗತ್ತಿನಲ್ಲಿ ಧರ್ಮದ ವಿಸ್ತಾರಕ್ಕೋಸ್ಕರ ಚತುರ್ಮುಖ ಬ್ರಹ್ಮದೇವರ ಪ್ರಶ್ನೆಗಳಿಗೆ ಉತ್ತರ ಕೊಟ್ಟು ಪಂಚರಾತ್ರದ ರಹಸ್ಯವನ್ನು ಜಗತ್ತಿನಲ್ಲಿ ಪ್ರಚುರಪಡಿಸಿದ ಕಾರಣ ಹಂಸನಾಮಕ ಭಗವಂತನನ್ನು ಉತ್ತರ ಎನ್ನುವ ನಾಮಧೇಯದಿಂದ ಸಂಬೋಧಿಸಲಾಗಿದೆ ಎಂದು ವಿವರಿಸಿದರು.

ವಿಷ್ಣು ಸಹಸ್ರನಾಮದಲ್ಲಿಯೂ ಉತ್ತರಗೋಪತಿಃ ಗೋಪ್ತಾ ಎಂದು ಕರೆಯಲಾಗಿದೆ. ಸನಾತನ ವೈಷ್ಣವ ಸಿದ್ಧಾಂತದ ಪ್ರಚಾರ ಪ್ರಸಾರಕ್ಕಾಗಿ ಉತ್ತರನಾಮಕ ಹಂಸರೂಪಿ ಭಗವಂತನು ಸ್ಥಾಪಿಸಿದ ಪೀಠವೇ ಉತ್ತರಾದಿ ಮಠ. ಉತ್ತರನೇ ಆದಿ ಅಂದರೆ ಮೊದಲಗೊಂಡ ಮಠ. ಇದೇ ನಮ್ಮ ಉತ್ತರಾದಿ ಮಠ ಎಂದಾಗ ಭಕ್ತರು ಕರತಾಡನ ಮಾಡುವ ಮೂಲಕ ಸಂತಸಪಟ್ಟರು.

ಟಾಪ್ ನ್ಯೂಸ್

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

1—-wewewqe

Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

ಮೋದಿ ರಾಷ್ಟ್ರ ಮಟ್ಟದಲ್ಲಿ ಸುಳ್ಳು ಹೇಳಿದರೆ, ಜಾಧವ್ ಜಿಲ್ಲಾ ಮಟ್ಟದಲ್ಲಿ… ಖರ್ಗೆ ವಾಗ್ದಾಳಿ

ಮೋದಿ ರಾಷ್ಟ್ರ ಮಟ್ಟದಲ್ಲಿ ಸುಳ್ಳು ಹೇಳಿದರೆ, ಜಾಧವ್ ಜಿಲ್ಲಾ ಮಟ್ಟದಲ್ಲಿ… ಖರ್ಗೆ ವಾಗ್ದಾಳಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

15-uv-fusion

Time management: ತಂತ್ರಜ್ಞಾನ ಯುಗದಲ್ಲಿ ಸಮಯ ನಿರ್ವಹಣೆ ಮುಖ್ಯ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

14-fusion

Women: ಸ್ತ್ರೀ ಎಂದರೆ ಅಷ್ಟೇ ಸಾಕೇ

13-

Woman: ಸದಾಕಾಲ ಸಾಧಕಿ ಹೆಣ್ಣು

12-

Sirsi Festival: ನಾವು ಬಂದೇವ ಶಿರಸಿ ಜಾತ್ರೆ ನೋಡಲಿಕ್ಕೆ !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.