ಉದ್ದು-ಹೆಸರು ಬೆಳೆಗೆ ಕೀಟಗಳಕಾಟ: ಆನ್ನದಾತರಲ್ಲಿ ಆತಂಕ
Team Udayavani, Aug 14, 2020, 1:45 PM IST
ಚಿಂಚೋಳಿ: ತಾಲೂಕಿನಲ್ಲಿ ಮುಂಗಾರು ಉದ್ದು, ಹೆಸರು ಬೆಳೆಗಳಲ್ಲಿ ಹೇನು ಮತ್ತು ಕೀಟಗಳು ಕಾಣಿಸಿಕೊಂಡಿರುವುದರಿಂದ ರೈತರನ್ನು ಆತಂಕವನ್ನುಂಟು ಮಾಡಿದೆ.
ತಾಲೂಕಿನಲ್ಲಿ ಪ್ರಸಕ್ತ ಸಾಲಿನಲ್ಲಿ ಹೆಸರು, ಉದ್ದು, ಸೋಯಾಬಿನ್ ಬೆಳೆಗಳು ಹೆಚ್ಚು ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಮಾಡಲಾಗಿದೆ. ಜೂನ್, ಜುಲೈ ತಿಂಗಳಲ್ಲಿ ಬಿರುಸಿನ ಮಳೆ ಆಗಿರುವುದರಿಂದ ಎಲ್ಲ ಗ್ರಾಮಗಳಲ್ಲಿ ಬೆಳೆಗಳು ನಳ ನಳಿಸುತ್ತಿವೆ. ಹೆಸರು, ಹೂವು, ಚೆಳ್ಳಿ, ಕಾಯಿ ಕಟ್ಟುವ ಹಂತದಲ್ಲಿದ್ದು ಬೆಳೆಗಳಲ್ಲಿ ಹೇನಿನ ಭಾದೆ ಕಂಡು ಬರುತ್ತಿದೆ.
ಜೊತೆಗೆ ಉದ್ದಿನ ಬೆಳೆಗಳಲ್ಲಿ ಕೀಟಗಳ ಹಾವಳಿ ಕಂಡು ಬಂದಿರುವುದರಿಂದ ರೈತರು ಹುಳಗಳ ನಿಯಂತ್ರಣಕ್ಕಾಗಿ ಕೀಟನಾಶಕ ಸಿಂಪರಣೆಯಲ್ಲಿ ತೊಡಗಿದ್ದಾರೆ.ಸುಲೇಪೇಟ, ಕೋಡ್ಲಿ, ಚಂದನಕೇರಾ, ಐನಾಪುರ, ಚಿಂಚೋಳಿ, ಚಿಮ್ಮನಚೋಡ, ರಟಕಲ್, ಮೋಘಾ, ನಿಡಗುಂದಾ, ಸಾಲೇಬೀರನಳ್ಳಿ, ದೇಗಲಮಡಿ, ಕುಂಚಾವರಂ ಸುತ್ತಲಿನ ಗ್ರಾಮಗಳಲ್ಲಿ ಹೆಸರು, ಉದ್ದು ಬೆಳೆಗಳಿಗೆ ಕೀಟಗಳ ಹಾವಳಿ ಹೆಚ್ಚಾಗುತ್ತಿದೆ. ಅಲ್ಲದೇ ಕೆಲವು ಕಡೆ ಬೆಳೆಗಳಲ್ಲಿ ಮಚ್ಚೆರೋಗ ಕಾಣಿಸಿಕೊಂಡಿದೆ. ಉತ್ತಮ ಬೆಳೆಗಳಿಗೆ ಹೇನು ಮತ್ತು ಕೀಟಗಳ ಹಾವಳಿಯಿಂದಾಗಿ ರೈತರಲ್ಲಿ ನಿರಾಶೆ ಮೂಡಿಸಿದೆ.
ತಾಲೂಕಿನಲ್ಲಿ ಕೆಲ ಗ್ರಾಮಗಳಲ್ಲಿ ಹೆಸರು, ಉದ್ದು, ಸೋಯಾ ಬೆಳೆಗಳಲ್ಲಿ ಹೇನು ಮತ್ತು ಕೀಟಗಳ ಭಾದೆ ಕಂಡು ಬಂದಿದೆ. ರೈತರು ಒಂದು ಲೀಟರ್ ನೀರಿಗೆ 1.5 ಲೀಟರ್ ಟ್ರೈ ಜೋಫಾಸ್ ಸಿಂಪರಣೆ ಮಾಡಬೇಕೆಂದು ಸಹಾಯಕ ಕೃಷಿ ನಿರ್ದೇಶಕ ಅನಿಲಕುಮಾರ ರಾಠೊಡ ರೈತರಿಗೆ ಸಲಹೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ
Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ
Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
MUST WATCH
ಹೊಸ ಸೇರ್ಪಡೆ
Election Commission: ಮೋದಿ, ರಾಹುಲ್ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್
IPL: ಎಲ್ಲೆ ಮೀರಿ ವಿಕೆಟ್ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್ ಸಲಾಂಗೆ ಛೀಮಾರಿ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ